ಚುನಾವಣೆ ಬಂದಾಗ ಉಕ್ಕಿನ ಸೇತುವೆ ಕನವರಿಕೆ: ರಾಜೀವ್ ಚಂದ್ರಶೇಖರ್
ಬೆಂಗಳೂರು, ಜನವರಿ 2: ಬೆಂಗಳೂರು ಉಕ್ಕಿನ ಸೇತುವೆ ನಿರ್ಮಾಣದ ಕುರಿತು ಮರು ಪರಿಶೀಲನೆ ಅಗತ್ಯವಿದೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಪ್ರಕಟಣೆ ಮೂಲಕ ಹೇಳಿಕೆ ನೀಡಿರುವ ಅವರು, ಚುನಾವಣೆಗಳು ಸಮೀಪಿಸುತ್ತಿದ್ದಂತೆ ಸ್ಟೀಲ್ ಫ್ಲೈಓವರ್ ನಂತಹ ಯೋಜನೆಗಳು ನಿಗೂಢ ರೀತಿಯಲ್ಲಿ ಮರುಜೀವ ಪಡೆದುಕೊಳ್ಳುತ್ತವೆ.
ಬೆಂಗಳೂರು ಕಾಂಗ್ರೆಸ್ ಸರ್ಕಾರದ 5 ವರ್ಷಗಳ ದುರಾಡಳಿತವನ್ನು ನೋಡಿದೆ. ಈಗ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ಸಹ ಬಿಲ್ಡರ್ -ಕಾಂಟ್ರ್ಯಾಕ್ಟರ್ ಗಳ ಮೂಲಕ ನಗರದ ಶೋಷಣೆ, ಸಾರ್ವಜನಿಕ ಹಣದ ದುರ್ಬಳಕೆ, ಭ್ರಷ್ಟಾಚಾರ ಮುಂದುವರೆದಿದೆ.
ಕೆಜೆ ಜಾರ್ಜ್ ಅವರ ಸೂಕ್ತ ಉತ್ತರಾಧಿಕಾರಿಯಂತಿರುವ ಸಚಿವ ಡಿಕೆ ಶಿವಕುನಾರ್ ಅವರು ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಮೇಲೆ ಆಸಕ್ತಿ ತೋರಿಸಿರುವುದು ಅಚಚ್ರಿಯೇನಲ್ಲ ಎಂದಿದ್ದಾರೆ.

ಅಧಿಕಾರದಲ್ಲಿದ್ದ 5 ವರ್ಷಗಳಲ್ಲಿ ಬೆಂಗಳೂರಿನ ಸಾರಿಗೆ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್ ಪಕ್ಷ ತೋರಿದ ಒಲವು ಮತ್ತು ಆಸಕ್ತಿ ಎಲ್ಲರಿಗೂ ತಿಳಿದಿದೆ. ನಾಗರಿಕರಿಗೆ ಪ್ರಯೋಜನವಿಲ್ಲದೆ ಮತ್ತು ಕಾಂಟ್ರ್ಯಾಕ್ಟರ್ ಗಳು ಹಾಗೂ ಬಿಲ್ಡರ್ ಗಳಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ನೀಡಲು ಹೆಸರುವಾಸಿಯಾಗಿರುವ ಬಿಡಿಎ ಪ್ರಸ್ತಾಪಿಸಿರುವ ಉಕ್ಕಿನ ಫ್ಲೈಓವರ್ ಮೇಲೆ ಸರ್ಕಾರ ಹೆಚ್ಚಿನ ಆಸಕ್ತಿ ತೋರುತ್ತಿದೆ.
ಈ ರೀತಿಯ ದುಬಾರಿ ಮತ್ತು ಪ್ರಯೋಜನವಿಲ್ಲದ ಯೋಜನೆಗಳನ್ನು ನೀಡುವಲ್ಲಿ ಬಿಡಿಎ ತನ್ನದೇ ಆದ ಇತಿಹಾಸವನ್ನೇ ಹೊಂದಿದೆ ಎಂದು ಹೇಳಿದ್ದಾರೆ.
ಈ ಹಿಂದೆಯೂ ಸ್ಟೀಲ್ ಫ್ಲೈಓವರ್ ಯೋಜನೆ ಪ್ರಸ್ತಾಪ ಬಂದಾಗಲೆಲ್ಲ ಅದನ್ನು ನಾಗರಿಕರು ವಿರೋಧಿಸಿದ್ದರು. ಅಷ್ಟೇ ಅಲ್ಲದೆ ರಾಷ್ಟ್ರೀಯ ಹಸಿರು ಪೀಠ ಕೂಡ ಯೋಜನೆಗೆ ತಡೆವೊಡ್ಡಿತ್ತು. ಇದು ರಾಜಕೀಯ ಕೆಸರೆರಚಾಟ ನಡೆಸುವ ವಿಷಯವಲ್ಲ, ಇದು ಬೆಂಗಳೂರಿನ ನಾಗರಿಕರು ಮತ್ತು ಅವರ ಹಕ್ಕುಗಳ ವಿಷಯ. ಈ ಕುರಿತು ಪಾರದರ್ಶಕ ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications