ಯಲಹಂಕದಲ್ಲಿ ತಾತ್ಕಾಲಿಕ ತೆರೆದ ಚಿತಾಗಾರ ನಿರ್ಮಾಣ: ಆರ್ ಅಶೋಕ್
ಬೆಂಗಳೂರು, ಏಪ್ರಿಲ್ 21: ದಿನೇ ದಿನೇ ನಗರದಲ್ಲಿ ಕೊರೊನಾ ಸೋಂಕಿತರ ಸಾವು ಹೆಚ್ಚಳವಾಗುತ್ತಿದ್ದು, ಶವಕ್ಕೆ ಬೆಂಕಿ ಇಡಲು ಚಿತಾಗಾರದ ಮುಂದೆ ದಿನಗಟ್ಟಲೆ ಕಾದುನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೀಗಾಗಿ ನಗರದ ಯಲಹಂಕದಲ್ಲಿ 4 ಎಕರೆ ವಿಸ್ತೀರ್ಣದಲ್ಲಿ ತೆರೆದ ಚಿತಾಗಾರವನ್ನು ನಿರ್ಮಿಸಲು ಮುಂದಾಗಿರುವುದಾಗಿ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಉಪ ಆಯುಕ್ತರಿಗೆ ಆದೇಶ ನೀಡಿದ್ದು, ಕೂಡಲೇ ತೆರೆದ ಸ್ಮಶಾನವನ್ನು ನಿರ್ಮಿಸುವಂತೆ ಸೂಚಿಸಲಾಗಿದೆ. ನಗರದಲ್ಲಿ ಒಟ್ಟು 5 ಸ್ಮಶಾನಗಳಲ್ಲಿ ಮಾತ್ರ ಕೊರೊನಾ ರೋಗಿಗಳ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡಲಾಗಿದೆ.

ಆದರೆ ರೋಗಿಗಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಮೊದಲೆಲ್ಲಾ ಒಂದು ಅಥವಾ ಎರಡು ಕೊರೊನಾ ಸೋಂಕಿತರ ಶವ ಬಂದರೆ ಇದೀಗ ದಿನಕ್ಕೆ 30ಕ್ಕೂ ಅಧಿಕ ಶವಗಳು ಸ್ಮಶಾನ ಸೇರುತ್ತಿವೆ.
ಹಾಗೆಯೇ ಆಂಬ್ಯುಲೆನ್ಸ್ ಚಾಲಕರು ಟೋಕನ್ ಪಡೆದು ದಿನಗಟ್ಟಲೆ ಶವವಿಟ್ಟುಕೊಂಡು ಕಾಯಬೇಕಾದ ಪರಿಸ್ಥಿತಿ ಇದೆ, ರಾತ್ರಿ 2 ಗಂಟೆಯವರೆಗೂ ಸರಿತಿಯಲ್ಲಿ ನಿಂತು ಶವಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗಿರುವ ಸ್ಮಶಾನಗಳು ಸಾಕಾಗುತ್ತಿಲ್ಲ. ಹೀಗಾಗಿ ನಗರದ ಹೊರವಲಯದಲ್ಲಿರುವ ಯಲಹಂಕದಲ್ಲಿ 4 ಎಕರೆ ಪ್ರದೇಶದಲ್ಲಿ ತಾತ್ಕಾಲಿಕ ತೆರೆದ ಸ್ಮಶಾನವನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ.
ಕರ್ನಾಟಕದಲ್ಲಿ ಮಂಗಳವಾರ ಬರೋಬ್ಬರಿ 21794 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಹಿತಿ ನೀಡಿದೆ. ಒಂದೇ ದಿನ 149 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 13646 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳಲ್ಲಿ 4571 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 1025821 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ 159158 ಸಕ್ರಿಯ ಪ್ರಕರಣಗಳಿವೆ, ಒಟ್ಟು 1198644 ಪ್ರಕರಣಗಳಿವೆ. 751 ಮಂದಿ ಐಸಿಯುನಲ್ಲಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications