'4 ಲಕ್ಷದ ವೆಂಟಿಲೇಟರ್ ಖರೀದಿಗೆ 18 ಲಕ್ಷ ನೀಡಿದ ರಾಜ್ಯ ಸರ್ಕಾರ'
ಬೆಂಗಳೂರು, ಜುಲೈ.23: ಕೊರೊನಾವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕಾಗಿ ವೆಂಟಿಲೇಟರ್ ಖರೀದಿಸಿದರೆ ಸರ್ಕಾರ ಅದರಲ್ಲೂ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Recommended Video
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಾಕ್ಷಿ ಕೊಡಿ ಅಭಿಯಾನ ಆರಂಭಿಸಿದ್ದು, ಗುರುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಸರ್ಕಾರದಿಂದ ವೆಂಟಿಲೇಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಪ್ರಧಾನಮಂತ್ರಿ ಸಹಾಯ ನಿಧಿಯಿಂದ ಇಡೀ ದೇಶಕ್ಕೆ 50,000 ವೆಂಟಿಲೇಟರ್ ಗಳನ್ನು 2,000 ಕೋಟಿ ರೂಪಾಯಿ ಖರ್ಚು ಮಾಡಿ ಖರೀದಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ದುಬಾರಿ ಹಣವನ್ನು ನೀಡಿ ವೆಂಟಿಲೇಟರ್ ಖರೀದಿಸಿದ್ದು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

4 ಲಕ್ಷಕ್ಕೆ ವೆಂಟಿಲೇಟರ್ ಖರೀದಿಸಿದ ಕೇಂದ್ರ ಸರ್ಕಾರ:
ಕೇಂದ್ರ ಸರ್ಕಾರವು ಒಂದೊಂದು ವೆಂಟಿಲೇಟರ್ ಗೆ 4 ಲಕ್ಷ ರೂಪಾಯಿ ನೀಡಿ ಖರೀದಿಸಿದೆ. ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರವು 100 ವೆಂಟಿಲೇಟರ್ ಗಳನ್ನು ಖರೀದಿಸಿದ್ದು, ಒಂದು ವೆಂಟಿಲೇಟರ್ ಗೆ 4.78 ಲಕ್ಷ ರೂಪಾಯಿ ನೀಡಿದ್ದಾರೆ. ಕರ್ನಾಟಕದಲ್ಲಿ ಮಾರ್ಚ್.22ರಂದು ಒಂದು ವೆಂಟಿಲೇಟರ್ ಗೆ 5.60ಲಕ್ಷ ನೀಡಿದ್ದಾರೆ. ಎರಡನೇ ಬಾರಿ ಒಂದು ವೆಂಟಿಲೇಟರ್ ತಲಾ 12.36 ಲಕ್ಷ ನೀಡಿದ್ದಾರೆ. ಮೂರನೇ ಬಾರಿ 18.23 ಲಕ್ಷ ರೂಪಾಯಿ ನೀಡಿ ವೆಂಟಿಲೇಟರ್ ಖರೀದಿಸಿದ್ದಾರೆ. ಹೀಗೆ ಇರುವಾಗ ಕರ್ನಾಟಕದಲ್ಲಿ ವೆಂಟಿಲೇಟರ್ ಗಳ ಖರೀದಿ ಪಾರದರ್ಶಕವಾಗಿ ನಡೆದಿದೆ ಎಂದು ನಿಮಗೆ ಅನ್ನಿಸುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಬೇರೆ ರಾಜ್ಯಗಳಲ್ಲಿ ಖರೀದಿಸಿದ ವೆಂಟಿಲೇಟರ್ ಬೆಲೆಗೂ ರಾಜ್ಯದಲ್ಲಿ ಖರೀದಿಸಿದ ವೆಂಟಿಲೇಟರ್ ಗಳ ಬೆಲೆಯಲ್ಲಿ ಇಷ್ಟೊಂದು ವ್ಯತ್ಯಾಸವಿದೆ. ಇದನ್ನು ಭ್ರಷ್ಟಾಚಾರ ಎಂದು ಕರೆಯದೇ ಏನು ಎನ್ನಬೇಕು ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications