ಕರ್ನಾಟಕಕ್ಕೂ ಒಳ್ಳೇ ಸುದ್ದಿ ಸಿಗಲಿದೆ; ಆರ್. ಅಶೋಕ್

ಬೆಂಗಳೂರು, ಫೆಬ್ರುವರಿ 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದು, ಕೊರೊನಾ ಸೋಂಕಿನ ಕಾರಣದಿಂದಾಗಿ ಈ ಬಾರಿ ಬಜೆಟ್ ಕುರಿತು ಸಾಕಷ್ಟು ನಿರೀಕ್ಷೆಗಳು ವ್ಯಕ್ತವಾಗಿವೆ.

Recommended Video

      Union Budget : ನಮ್ಮ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗತ್ತೆ | R Ashok | Oneindia Kannada

      ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಕೇಂದ್ರ ಬಜೆಟ್ ಬಗ್ಗೆ ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ. "ಕಷ್ಟದ ಸಮಯದಲ್ಲಿ, ಕೊರೊನಾ ಸೋಂಕಿನ ಈ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದೆ. ಇದು ಕೇಂದ್ರ ಸರ್ಕಾರಕ್ಕೆ ದೊಡ್ಡ ಸವಾಲು ಕೂಡ ಹೌದು" ಎಂದು ಹೇಳಿದ್ದಾರೆ.

      ಈ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಸಾಕಷ್ಟು ಅನುದಾನ ಸಿಗುವ ಭರವಸೆಯಿದೆ. ಈ ಬಾರಿ ಬಜೆಟ್ ನಲ್ಲಿ ರೈಲ್ವೇ, ಬೆಂಗಳೂರು ಅಭಿವೃದ್ಧಿ ಮತ್ತು ನೀರಾವರಿಗೆ ಹೆಚ್ಚು ಆದ್ಯತೆ ಸಿಗಬೇಕು ಎನ್ನುವುದು ನಮ್ಮ ಬೇಡಿಕೆ" ಎಂದಿದ್ದಾರೆ.

      Karnataka Will Also Get Good News From Union Budget Said R Ashok

      ಕರ್ನಾಟಕ ರಾಜ್ಯಕ್ಕೂ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಸೇರಿ ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಿದ್ದೇವೆ. ಕರ್ನಾಟಕಕ್ಕೂ ಒಳ್ಳೆಯ ಸುದ್ದಿ ಸಿಗುವ ನಿರೀಕ್ಷೆ ಇದೆ. ಕಷ್ಟದ ಸಮಯದಲ್ಲೂ ಅಭಿವೃದ್ಧಿ ಕುರಿತು ಯೋಚಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಈ ಬಜೆಟ್ ಕರ್ನಾಟಕದ ಅಭಿವೃದ್ಧಿಗೆ ಪೂರಕ ಆಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+