Rain Alert: ವಾಯುಭಾರ ಕುಸಿತ ಪರಿವರ್ತನೆಯ ಅಪ್ಡೇಟ್, ಎಲ್ಲೆಲ್ಲಿ ಅತ್ಯಧಿಕ ಮಳೆ ಆಗಲಿದೆ?
ಬೆಂಗಳೂರು, ಜೂನ್ 23: ಕರ್ನಾಟಕದಲ್ಲಿ ಶನಿವಾರದ ನಂತರ ವಾತಾವರಣ ಸಂಪೂರ್ಣ ಬದಲಾಗಿದೆ. ಆರಂಭದಲ್ಲಿ ಹೆಚ್ಚು ಸುರಿದು ನಂತರ ಮರೆಯಾಗಿದ್ದ ಮುಂಗಾರು ಮಳೆ ಮತ್ತೆ ಅಬ್ಬರಿಸಲು ಸಜ್ಜಾಗಿದೆ. ಇದಕ್ಕೆ ಎರಡು ಕಡೆಗಳಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯಗಳೇ ಕಾರಣ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ರಾಜ್ಯದ ನಾನಾ ಕಡೆಗಳಲ್ಲಿ 200ರಿಂದ 300 ಮಿಲಿ ಮೀಟರ್ ವರೆಗೆ ಅತ್ಯಧಿಕ ಮಳೆ, ನೆರೆ, ಪ್ರವಾಹ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನದಲ್ಲಿ ಬದಲಾವಣೆಗಳನ್ನು ವಿವರವಾಗಿ ನೋಡುವುದಾದರೆ, ಬಂಗಾಳಕೊಲ್ಲಿಯ ಪೂರ್ವದ ಉಪಸಾಗರದಲ್ಲಿ 3.1 ಕಿಲೋ ಮೀಟರ್ ಹಾಗೂ 5.8 ಕಿಲೋ ಮೀಟರ್ ಎತ್ತರದಲ್ಲಿ ಮೇಲ್ಮೈ ಸುಳಿಗಾಳಿ ಪ್ರದೇಶ ನಿರ್ಮಾಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿಯ ವಿಜ್ಞಾನಿ. ಡಾ.ಸಿ.ಎಸ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

ಚಂಡಮಾರುತ ಎದುರಾಗುತ್ತಾ?
ಸದ್ಯ ಈ ಸ್ಟ್ರಫ್ ಮೇಲ್ಮೈ 'ಸುಳಿಗಾಳಿ'ಯ ಲಕ್ಷಣದಿಂದ ಬದಲಾಗಿ 'ಕಡಿಮೆ ಒತ್ತಡದ ಪ್ರದೇಶ'ವಾಗಿ ನಿರ್ಮಾಣವಾಗಿದೆ. ಇದರ ತೀವ್ರತೆ ಇನ್ನೂ ಮುಂದುವರೆದರೆ ಅದು 'ವಾಯುಭಾರ ಕುಸಿತ'ವಾಗಿಯೂ ಅದಾದ ನಂತರ 'ಚಂಡಮಾರುತ'ವಾಗಿಯೂ ಬದಲಾಗುವ ನಿರೀಕ್ಷೆಗಳು ಇವೆ. ಸದ್ಯದ ಮುನ್ಸೂಚನೆ ಪ್ರಕಾರ, ಇದು 'ಕಡಿಮೆ ಒತ್ತಡದ ಪ್ರದೇಶ'ದ ಹಂತದಲ್ಲಿದೆ ಎನ್ನಲಾಗುತ್ತಿದೆ.
ಇನ್ನೂ ಮಲೆನಾಡು, ಉತ್ತರ ಕರ್ನಾಟಕಕ್ಕೆ ಹೆಚ್ಚು ಮಳೆ ಸುರಿಸಲು ಕಾರಣವಾಗುವ ಸಮುದ್ರ ಮೇಲ್ಮೈ ಸುಳಿಗಾಳಿಯು (ಸ್ಟ್ರಫ್) ಕರ್ನಾಟಕ, ಮಹಾರಾಷ್ಟ್ರ ಕರಾವಳಿ ಭಾಗದಲ್ಲಿ ಉಂಟಾಗಿದೆ. ಇದರಿಂದ ಕಳೆದ ಎರಡು ದಿನಗಳಿಂದ ರಾಜ್ಯದ ನಾನಾ ಕಡೆ ತೇವ ಭರಿತ ವಾತಾವರಣ ಕಂಡು ಬರುತ್ತಿದೆ. ಜೂನ್ 26ರವರೆಗೆ ಈ ಎರಡು ಭಾಗದಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ರೈತರಿಗೆ ಗುಡ್ ನ್ಯೂಸ್
ಈ ಭಾರಿಯ ಮುಂಗಾರು ಆರಂಭದಲ್ಲಿ ಅಬ್ಬರಿಸಿ, ಕೆಲವು ದಿನಗಳ ಹಿಂದೆ ತಣ್ಣಗಾಯಿತು. ಬಿತ್ತನೆ ಮಾಡಿದ ಉತ್ತರ ಕರ್ನಾಟಕದ ರೈತರಿಗೆ ನಿರಾಸೆ ಉಂಟು ಮಾಡಿತ್ತು. ಈ ಮಧ್ಯೆ ಸಿಹಿ ಸುದ್ದಿ ನೀಡಿದ್ದು, ರಾಜ್ಯದ ಮೂರು ಭಾಗಗಳಲ್ಲೂ ಉತ್ತಮ ಮಳೆ ಆಗಲಿದೆ. ಇದರಿಂದ ಮಳೆಗೆ ಕಾಯುತ್ತಿರುವ ರೈತರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಯಾವ ವೈಪರಿತ್ಯಗಳಿಂದ ಎಲ್ಲೆಲ್ಲಿ ಮಳೆ ಸಂಭವಿಸುತ್ತದೆ?
ಸಾಮಾನ್ಯವಾಗಿ ಬಂಗಾಳಕೊಲ್ಲಿಯಲ್ಲಿ, ಅಂಡಮಾನ್ ಭಾಗದಲ್ಲಿ ಸಮುದ್ರದಲ್ಲಿ ಬದಲಾವಣೆಗಳು ಸಂಭವಿಸಿದರೆ, ಅವು ನಿರಂತರವಾಗಿ ಮುಂದುವರಿದರೆ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ, ಬೆಂಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಕೆಲವೆ ದಾವಣಗೆರೆ ವರೆಗೆ ಅದರ ಪ್ರಭಾದಿಂದ ಮಳೆ ಬರುತ್ತದೆ. ಈ ವೇಳೆ ಉತ್ತರ ಕರ್ನಾಟಕದಲ್ಲಿ ಅಷ್ಟಾಗಿ ಮಳೆ ಆಗುವುದಿಲ್ಲ.
ಅದೇ ಅರಬ್ಬಿ ಸಮುದ್ರ ಮೇಲ್ಮೈನಲ್ಲಿ ವೈಪರಿತ್ಯಗಳು ಕಂಡು ಬಂದರೆ, ಇದರ ಪ್ರಭಾವದಿಂದ ಮಳೆನಾಡು, ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕದ ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಉಂಟಾಗುತ್ತಿದೆ. ನಾಳೆ ಸೋಮವಾರದಿಂದ ಮುಂದಿನ ವಾರಪೂರ್ತಿ ಇಂತದ್ದೆ ವಾತಾವರಣ ನಿರ್ಮಾಣವಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ
ಜೂನ್ 23 ದಿನಗಳ ಕಾಲ ಎಲ್ಲೆಲ್ಲಿ ಮಳೆ ಕೊರತೆ ಆಗಿದೆಯೇ ಅಲ್ಲೆಲ್ಲ ವ್ಯಾಪಕ ಮಳೆ ಆಗಲಿದೆ. ಅನೇಕ ಕಡೆಗಳಲ್ಲಿ ನೆರೆ ಪ್ರವಾಹ ಭೀತಿ ಇದ್ದು, ಅಗತ್ಯ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಉತ್ತರ ಕರ್ನಾಟಕಕ್ಕೂ ಭಾರೀ ಮಳೆ
ಈ ಭಾರಿಯು ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಚೂರು ಮಳೆ ಆಗಿತ್ತು. ನಂತರ ಮಳೆ ಕಣ್ಮರೆಯಾಗಿತ್ತು. ಮಳೆ ಬರುತ್ತದೆ ಎಂಬ ನಿರೀಕ್ಷೆಯಿಂದ ಆರಂಭಿಕ ಮಳೆ ಬಂದಾಗ ಮುಂಗಾರು ಬಿತ್ತನೆ ಮಾಡಿದ ರೈತರಿಗೆ ಮಳೆಯ ಅಗತ್ಯ ಉಂಟಾಗಿದೆ. ಮಳೆ ಆಗದಿದ್ದರೆ, ಮೆಕ್ಕೆಜೋಳ, ಹೆಸರು, ಶೇಂಗಾದಂತೆ ಮುಂಗಾರು ಹಂಗಾಮಿನ ಖಾರೀಫ್ ಬೆಳೆಗೆ ಹಾನಿ ಆಗುವ ಸಾಧ್ಯತೆ ಇದೆ. ಸದ್ಯದ ಮುನ್ಸೂಚನೆ ಪ್ರಕಾರ ಉತ್ತರ ಒಳನಾಡಿಗೂ ಭಾರೀ ಮಳೆ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications