ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ: ಸಿಎಂಗೆ ಪತ್ರಕರ್ತರ ಸಂಘ ಪತ್ರ
Recommended Video
ಬೆಂಗಳೂರು, ಮೇ 28: ಕನ್ನಡ ದಿನ ಪತ್ರಿಕೆ 'ವಿಶ್ವವಾಣಿ'ಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಖಂಡಿಸಿ ಸಿಎಂ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದೆ.
ವಿಶ್ವವಾಣಿ ಪತ್ರಿಕೆಯಲ್ಲಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಕುರಿತು ವರದಿಯೊಂದು ಪ್ರಕಟಿತವಾಗಿತ್ತು. ಇದು ಸುಳ್ಳು ಸುದ್ದಿ, ಉದ್ದೇಶಪೂರಿತವಾಗಿ ತೇಜೋವಧೆಗೆಂದು ಮಾಡಿದ ಸುದ್ದಿ ಎಂದು ಆರೋಪಿಸಿ ಜೆಡಿಎಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಪ್ರದೀಪ್ ಕುಮಾರ್ ಅವರು ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಕುರಿತು ಪತ್ರ ಬರೆದಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು, ದೂರು ದಾಖಲಿಸಿರುವುದನ್ನು ಖಂಡಿಸಿದ್ದು, 'ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ, ಈ ಬಗ್ಗೆ ಪುನಃ ಪರಿಶೀಲನೆ ಮಾಡಬೇಕು' ಎಂದು ಸಿಎಂ ಕುಮಾರಸ್ವಾಮಿ ಅವರನ್ನು ಆಗ್ರಹಿಸಿದೆ. ಈ ಬೆಳವಣಿಗೆ ಕುರಿತಂತೆ ರಾಜಕೀಯ, ಸಾಮಾಜಿಕ ಮತ್ತು ಸಾರ್ವಜನಿಕ ವಲಯದಲ್ಲಿಯೂ ಭಾರೀ ಪ್ರತಿಭಟನೆ ವ್ಯಕ್ತವಾಗುತ್ತಿದೆ. ತುರ್ತು ಪರಿಸ್ಥಿತಿ ಹೇರಿದಂತಾಗಿದೆ ಎಂಬೆಲ್ಲ ಮಾತುಗಳು ಕೇಳಿಬರುತ್ತಿವೆ.

'ದ್ವೇಷದ ಕಿಚ್ಚಿನ ನಡೆ ಒಳ್ಳೆಯದಲ್ಲ'
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದ್ವೇಷದ, ಕಿಚ್ಚಿನ ನಡೆ ಒಳ್ಳೆಯದಲ್ಲ. ಮಾಧ್ಯಮ ಮತ್ತು ಸರ್ಕಾರದ ನಡುವೆ ಸೌಹಾರ್ದ ವಾತಾವರಣ ಇರುವಂತಾಗಲು ನಾಡಿನ ಮುಖ್ಯಮಂತ್ರಿಯಾಗಿ ತಾವು ಪ್ರಜ್ಞಾಪೂರ್ವಕವಾಗಿ ಸಂಯಮದ ಹೆಜ್ಜೆ ಇಡಬೇಕು ಎಂದು ಆಶಿಸುತ್ತೇನೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಸಿಎಂಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಸಂವಾದಕ್ಕೂ ಸಿದ್ಧವಿದ್ದೇವೆಂದ ಸಂಘ
ಈ ಪ್ರಕರಣದಿಂದಾಗಿ ಕದಡಿದ ವಾತಾವಾರಣ ತಿಳಿಗೊಳಿಸಲು, ತಾವು ಇಚ್ಚಿಸಿದಲ್ಲಿ ಸಂವಾದಕ್ಕೂ ಸಿದ್ಧವಿದ್ದೇವೆ ಎಂದು ಪತ್ರಕರ್ತರ ಸಂಘವು ಸಂಧಾನದ ಬೇಡಿಕೆಯನ್ನು ಮುಂದಿಟ್ಟಿದೆ.
|
ರಾಜ್ಯ ಬಿಜೆಪಿಯಿಂದ ಖಂಡನೆ
ವಿಶ್ವೇಶ್ವರ ಭಟ್ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ರಾಜ್ಯ ಬಿಜೆಪಿ ಖಂಡಿಸಿದ್ದು, ಬಿ.ಎಸ್.ಯಡಿಯೂರಪ್ಪ, ಸದಾನಂದ ಗೌಡ, ಸಿಟಿ ರವಿ, ತೇಜಸ್ವಿನಿ ಅನಂತ್ಕುಮಾರ್ ಅವರುಗಳು ಈ ಬಗ್ಗೆ ಟ್ವೀಟ್ ಮಾಡಿ ಆತಂಕ ವ್ಯಕ್ತಪಡಿಸಿದ್ದಾರೆ.

ವಿಶ್ವೇಶ್ವರ ಭಟ್ ಮೇಲೆ ಹೊರಿಸಿರುವ ಆರೋಪಗಳು
ವಿಶ್ವೇಶ್ವರ ಭಟ್ ಅವರ ವಿರುದ್ಧ, ಮಾನಹಾನಿಗೆ ಶಿಕ್ಷೆ (ಐಪಿಸಿ 500) ಸಂಬಂಧಿಸಿದ ವಿಷಯಗಳ ಮುದ್ರಣ (ಐಪಿಸಿ 501) ಜೀವ ಬೆದರಿಕೆ (506), ಉದ್ದೇಶಪೂರ್ವಕ ಶಾಂತಿ ಕದಡುವುದು (504), ನಂಬಿಕೆ ದ್ರೋಹ ಹಾಗೂ ವಂಚನೆ (406,420), ನಕಲಿ ದಾಖಲೆ ಸೃಷ್ಟಿ (468), ಮಾನಹಾನಿ (499) ಪ್ರಕರಣಗಳನ್ನು ದಾಖಲಿಸಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications