ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದೆದುರು ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, ಮಾರ್ಚ್ 27: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಇಂದು ರಾತ್ರಿಯೇ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ನಮ್ಮ ಪಕ್ಷದ ನಾಯಕರು, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಅವರನ್ನು ನಿಂದಿಸಲಾಗಿದೆ.
ಡಿಕೆ ಶಿವಕುಮಾರ್ ಅವರನ್ನು ತೇಜೋವಧೆ ಮಾಡಿದ ರಮೇಶ್ ಜಾರಕಿಹೊಳಿ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡು ಅಧಿಕಾರ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿಯನ್ನು ಬಂಧಿಸುವಂತೆ ಆಗ್ರಹಿಸಿ ರಮೇಶ್ ಜಾರಕಿಹೊಳಿ ನಿವಾಸದ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯ ಅಧರ್ಮ, ಅನೀತಿ ರಾಜಕಾರಣದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.












Click it and Unblock the Notifications