ಇಲ್ಲಿದೆ ಓದಿ ಯೋಗರಾಜ ಭಟ್ಟರ ಚುನಾವಣಾ ಗೀತೆ
ಇಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಬಿಡುಗಡೆಯಾಗಲಿರುವ ಕರ್ನಾಟಕದ ಮೊದಲ ಚುನಾವಣಾ ಗೀತೆಗೆ ಕನ್ನಡದ ಖ್ಯಾತ ಚಿತ್ರ ನಿರ್ದೇಶಕ, ಗೀತ ರಚನಕಾರ ಯೋಗರಾಜ್ ಭಟ್ ಸಾಗಿತ್ಯ ನೀಡಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಪ್ರಸಿದ್ಧ ಸಂಗೀತ ನಿರ್ದೇಶಕ ಹರಿಕೃಷ್ಣ ಅವರ ಸಂಯೋಜನೆಯ ಈ ಗೀತೆ ಇಂದು ಸಂಜೆ 6:30 ಕ್ಕೆ ವಿಕಾಸ ಸೌಧದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ.
ಈ ಸಮಾರಂಭದಲ್ಲಿ ಕರ್ನಾತಕ ರಾಜ್ಯದ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಸಹ ಉಪಸ್ಥಿತರಿರುತ್ತಾರೆ. ಸಂವಿಧಾನ ನೀಡಿದ ಅತ್ಯಮೂಲ್ಯ ಮತದಾನದ ಹಕ್ಕಿನ ಕುರಿತು ಜಾಗೃತಿ ಮೂಡಿದಿ, ಮತದಾನದ ಪ್ರಮಾಣವನ್ನು ಹೆಚ್ಚಿಸುವ ಆಶಯದೊಂದಿಗೆ ಬಿಡುಗಡೆಯಾಗುತ್ತಿರುವ ಭಟ್ಟರ ಹಾಡು ಹೇಗಿದೆ... ನೀವೇ ಓದಿ ಹೇಳಿ.

ಚುನಾವಣಾ ಗೀತೆ
ನಿನ್ನ ಬೆರಳಲಿ ನಾಡಿನ ಭವಿಷ್ಯ ಅಡಗಿಹುದೂ ಮಹನೀಯ....
ಶಾಹಿ ಚುಕ್ಕಿಯ ಧರಿಸು ಈ ದಿನ ತಪ್ಪದಲೇ ಮಹರಾಯ....
ಕರುನಾಡ ನಾಗರಿಕರೆಂದು, ಮತ ನೀಡುವಿಕೆಯಲ್ಲಿ ಮುಂದು
ಹೆಮ್ಮೆಯಿಂದ ತೋರಿ ನಿಮ್ಮ ತೋರು ಬೆರಳನ್ನಾ....
ಮಾಡಿ ಮಾಡಿ ಮಾಡಿ ಮತದಾನ
ಇರಲಿ ದೇಶದ ಮೇಲೆ ಅಭಿಮಾನ!
ವೋಟು ನಿನ್ನ ಅಧಿಕಾರ, ನೀನೇ ಆರಿಸು ಸರಕಾರ
ವೋಟು ನೀಡದೆ ನೀನು ಕುಂತರೆ
ನಿನಗೆ ನೀನೇ ಮಾಡಿಕೊಳ್ಳುವೆ ಅಪಚಾರ....
ಅರಸ ಯಾರೇ ಆಗಿರಲಿ, ಅವನು ನಮ್ಮ ಸೇವಕನು
ಇದನು ಅರಿತರೆ ಜನ್ಮ ಸಾರ್ಥಕ
ದಾಸನು ಅಲ್ಲ ಇಲ್ಲಿ ಯಾವುದೇ ಮತದಾರ...
ಹದಿನೆಂಟು ಆದವರೆ ಬನ್ನಿ
ಯುವಶಕ್ತಿ ತೋರ್ಬೆರಳ ತನ್ನಿ
ಐದು ಕೋಟಿ ವೋಟು ನೀಡಿ
ದಾಖಲೆ ಬರೆಯೋಣ....
ಮಾಡಿ ಮಾಡಿ ಮಾಡಿ ಮತದಾನ
ಇರಲಿ ದೇಶದ ಮೇಲೆ ಅಭಿಮಾನ
ಬನ್ನಿ ಹೊರಗೆ ಬೇಡ ಬಿಗುಮಾನ
ನಾಡು ದೊಡ್ಡದು ಸ್ವಾಮಿ ನಮಗಿನ್ನ
ಭ್ರಷ್ಟ ನಾಯಕರ ಹುಟ್ಟಿಗೆ ಕಾರಣ
ಮತ ನೀಡದ ಪ್ರಜೆಯು...
ಉತ್ತಮ ರಾಷ್ಟ್ರಕೆ ಕೆಚ್ಚಿನ ಪ್ರಜೆಯೇ
ಎಂದೆಂದಿಗು ಪ್ರಭುವು.....
ಬನ್ನಿ ಮನಸು ಮಾಡೋಣ
ಹೊಸದೇ ಕನಸು ಕಾಣೋಣ
ಇದು ಕರ್ತವ್ಯ ಇದು ಕರ್ತವ್ಯ
ರಾಷ್ಟ್ರ ರಚಿಸೋಣ.....
ಮಾಡಿ ಮಾಡಿ ಮಾಡಿ ಮತದಾನ
ಇರಲಿ ದೇಶದ ಮೇಲೆ ಅಭಿಮಾನ
ನಮ್ಮ ವೋಟು ನಮಗೇ ಬಹುಮಾನ
ತಿರುಗಿ ನೋಡಲಿ ನಮ್ಮನು ಶತಮಾನ..
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications