ಕಾರ್ತಿಕ್ ಗೌಡ ಏಕಾಏಕಿ ಪ್ರತ್ಯಕ್ಷ, ಸೀದಾ ಆಸ್ಪತ್ರೆಗೆ
ಬೆಂಗಳೂರು, ಸೆ. 12 : ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ಜೊತೆ ನನ್ನ ಮದುವೆಯಾಗಿದೆ ಎಂದು ಬಹಿರಂಗಪಡಿಸಿದ ಬಳಿಕ ತಲೆ ಮರೆಸಿಕೊಂಡಿದ್ದ ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ಶುಕ್ರವಾರ ಮುಂಜಾನೆ ಆರ್.ಟಿ.ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಕಾರ್ತಿಕ್ ಹೇಳಿಕೆ ಪಡೆದುಕೊಂಡಿರುವ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದಾರೆ.
ಶುಕ್ರವಾರ ಮುಂಜಾನೆ 6.15ಕ್ಕೆ ಕಾರ್ತಿಕ್ ಗೌಡ ಆರ್.ಟಿ.ನಗರ ಪೊಲೀಸ್ ಠಾಣೆಗೆ ಆಗಮಿಸಿದರು ಎಂದು ತಿಳಿದುಬಂದಿದೆ. ಎಸಿಪಿ ಓಂಕಾರಯ್ಯ ನೇತೃತ್ವದ ಅಧಿಕಾರಿಗಳ ತಂಡ ಸುಮಾರು 30 ನಿಮಿಷ ಕಾರ್ತಿಕ್ ಗೌಡ ಅವರ ವಿಚಾರಣೆ ನಡೆಸಿದ್ದು, ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಅಂಬೇಡ್ಕರ್ ಮೆಡಿಕಲ್ ಕಾಲೇಜಿಗೆ ಕರೆದುಕೊಂಡು ಹೋಗಲಾಗಿದೆ.

ಅತ್ಯಾಚಾರ, ವಂಚನೆ ಆರೋಪ ಹೊತ್ತು ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದ ಕಾರ್ತಿಕ್ ಗೌಡ ಅವರಿಗೆ ಸೆಷನ್ಸ್ ನ್ಯಾಯಾಲಯ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು ಮತ್ತು ಸೆ.30ರೊಳಗೆ ಪ್ರಕರಣದ ತನಿಖೆ ನಡೆಸುತ್ತಿರುವ ಆರ್.ಟಿ.ನಗರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು. [ಕಾರ್ತಿಕ್ ಗೌಡಗೆ ಜಾಮೀನು ಸಿಕ್ತು].
ಆರ್.ಟಿ.ನಗರ ಪೊಲೀಸರಿಗೆ ನಟಿ ಮೈತ್ರಿಯಾ ಗೌಡ ನೀಡಿರುವ ದೂರಿನ ಆಧಾರದ ಮೇಲೆ ಈಗಾಗಲೇ ಮೈತ್ರಿಯಾ ಗೌಡ ಅವರನ್ನು ಪೊಲೀಸರು ಎರಡು ಬಾರಿ ವಿಚಾರಣೆ ನಡೆಸಿದ್ದಾರೆ. ಅವರಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ. ಆದರೆ, ಕಾರ್ತಿಕ್ ಗೌಡ ದೂರು ದಾಖಲಾದ ನಂತರ ತಲೆಮರೆಸಿಕೊಂಡಿದ್ದರಿಂದ ಅವರ ವಿಚಾರಣೆ ಸಾಧ್ಯವಾಗಿರಲಿಲ್ಲ. ಎರಡು ಬಾರಿ ನೋಟಿಸ್ ನೀಡಿದರೂ ಕಾರ್ತಿಕ್ ವಿಚಾರಣೆಗೆ ಆಗಮಿಸಿರಲಿಲ್ಲ. [62 ಪುಟಗಳ ಹೇಳಿಕೆ ನೀಡಿದ ನಟಿ ಮೈತ್ರಿಯಾ ಗೌಡ]
ಕಾರ್ತಿಕ್ ಗೌಡ ಅವರನ್ನು ಬಂಧನಕ್ಕೆ ಪೊಲೀಸರು ನ್ಯಾಯಾಲಯದಿಂದ ಬಂಧನ ವಾರೆಂಟ್ ಪಡೆದಿದ್ದರು. ಸೆಷೆನ್ ನ್ಯಾಯಾಲಯದಲ್ಲಿ ಕಾರ್ತಿಕ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಮೈತ್ರಿಯಾ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾರ್ತಿಕ್ ಗೌಡ ತಾಯಿ ಡಾಟಿ ಸದಾನಂದ ಗೌಡರನ್ನು ವಿಚಾರಣೆ ನಡೆಸಲಾಗಿದೆ. [ಮೈತ್ರಿಯಾ ಬಗ್ಗೆ ಡಾಟಿ ಸದಾನಂದ ಗೌಡರು ಹೇಳಿದ್ದೇನು?]
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications