ಅಕ್ರಮ ಆಸ್ತಿಗಳ ಗಳಿಕೆ ಆರೋಪ ಕೆಎಎಸ್ ಅಧಿಕಾರಿ ಸುಧಾ ಅಮಾನತು
ಬೆಂಗಳೂರು, ಜನವರಿ 18: ಅಕ್ರಮ ಆಸ್ತಿಗಳ ಗಳಿಕೆ ಆರೋಪ ಹೊತ್ತುಕೊಂಡಿರುವ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ.ಬಿ.ಸುಧಾ (ಕೆ.ಎ.ಎಸ್) ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಲ್ಲಿ ಭೂ ಒತ್ತುವರಿ ಅಧಿಕಾರಿಯಾಗಿದ್ದ ಡಾ. ಸುಧಾ ಹಾಗೂ ಕುಟುಂಬಸ್ಥರು, ಆಪ್ತರ ಮನೆ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದರು. ಚರ ಮತ್ತು ಸ್ಥಿರಾಸ್ತಿಗಳು ಪತ್ತೆಯಾಗಿದ್ದು ಇವುಗಳ ಬಗ್ಗೆ ತನಿಖೆ ಮುಂದುವರೆದಿದೆ.
ಕೆಎಎಸ್ ಅಧಿಕಾರಿಯಾಗಿ 12 -13 ವರ್ಷ ಅನುಭವ ಹೊಂದಿರುವ ಸುಧಾ ಅವರ ಅಕ್ರಮ ಆಸ್ತಿ ಗಳಿಕೆ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಎಸಿಬಿ ದಾಳಿ ನಂತರ ಯಾವುದೇ ಕ್ರಮ ಜರುಗಿಸಿರಲಿಲ್ಲ. ಸುಧಾ ಅವರ ಅಕ್ರಮ ಆಸ್ತಿ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಹಾಗೂ ಅದಾಯ ತೆರಿಗೆ ಇಲಾಖೆಗೆ ವಹಿಸುವ ಬಗ್ಗೆ ಎಸಿಬಿ ಅಧಿಕಾರಿಗಳು ಚಿಂತನೆ ನಡೆಸಿದ್ದರು

ಈ ನಡುವೆ ಸೀರಿಯಲ್ , ಸಿನಿಮಾಗಳಲ್ಲಿ ಅಪಾರ ಪ್ರಮಾಣದಲ್ಲಿ ಹಣ ಹೂಡಿಕೆ ಮಾಡಿದ್ದರು ಎಂಬ ಅಂಶವು ಬೆಳಕಿಗೆ ಬಂದಿತ್ತು. ಡಾ. ಸುಧಾ ಅವರ ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ 200ಕ್ಕೂಹೆಚ್ಚು ದಾಖಲೆ ಪತ್ರಗಳು, 50ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳ ವಿವರ ಲಭ್ಯವಾಗಿತ್ತು. 50 ಕೋಟಿ ರುಗೂ ಅಧಿಕ ಬೇನಾಮಿ ಆಸ್ತಿ ಪತ್ತೆಯಾಗಿತ್ತು. ಕೆಎಎಸ್ ಅಧಿಕಾರಿ ಡಾ. ಸುಧಾ, ತನ್ನ ಪರಮಾಪ್ತೆ ಸ್ನೇಹಿತೆ ರೇಣುಕಾ ಹೆಸರಿನಲ್ಲಿ ಬೇನಾಮಿ ವಹಿವಾಟು ನಡೆಸಿರುವುದು ತನಿಖೆ ವೇಳೆ ತಿಳಿದು ಬಂದಿತ್ತು.
Recommended Video

-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications