Breaking: ಲಂಚದ ಹಣ ಹಿಂದಿರುಗಿಸುವಾಗ ಲೋಕಾ ಪೊಲೀಸರ ಬಲೆಗೆ ಬಿದ್ದ ಕೆಎಎಸ್ ಅಧಿಕಾರಿಗಳು!
ಬೆಂಗಳೂರು, ಸೆಪ್ಟೆಂಬರ್ 21: ಕೆಎಎಸ್ ಹಿರಿಯ ಅಧಿಕಾರಿ ಎ.ಬಿ. ವಿಜಯ್ ಕುಮಾರ್ ಮತ್ತು ರಘುನಾಥ್ ಎಂಬುವವರು ಸ್ವೀಕರಿಸಿದ್ದ ಲಂಚದ ಹಣವನ್ನು ದೂರುದಾರರಿಗೆ ಹಿಂದಿರುಗಿಸುವಾಗ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿ ರೆಡ್ ಹ್ಯಾಂಡ್ ಹಣ ಸಹಿತ ಸಿಕ್ಕಿಬಿದ್ದಿದ್ದಾರೆ.
ಲಗ್ಗೆರೆಯಲ್ಲಿರುವ ಪುರಾತನವಾದ ದುಗ್ಗಲಮ್ಮ ದೇವಸ್ಥಾನದ 0.30 ಕುಂಟೆ ಜಾಗವೂ ಕೆಐಎಡಿಬಿ ಸ್ವಾಧೀನದಲ್ಲಿಲ್ಲ ಎನ್ಓಸಿಯನ್ನು ನೀಡಲು ಕೆಐಎಡಿಬಿಯ ವಿಶೇಷ ಭೂಸ್ವಾಧೀನ ಅಧಿಕಾರಿ ಎಬಿ ವಿಜಯ್ ಕುಮಾರ್ ಮತ್ತು ವಿಶೇಷ ಭೂಸ್ವಾಧೀನ ಅಧಿಕಾರಿ 2 ರಘುನಾಥ್ ರವರು 2.50 ಲಕ್ಷ ಲಂಚವನ್ನು ಸ್ವೀಕರಿಸಿದ್ದರು. ಲಂಚವನ್ನು ಪಡೆದು ನಿರಪೇಕ್ಷಣಾ ಪತ್ರವನ್ನು ನೀಡಿದ್ದರು.
ರಾಮಚಂದ್ರ ಎಂಬುವವರಿಂದ ದೂರು
ಈ ವಿಚಾರದಲ್ಲಿ ರಾಮಚಂದ್ರ ಮತ್ತು ಭಗತ್ ಸಿಂಗ್ ಅರಣ್ ಮೇಲಾಧಿಕಾರಿಗೆ ದೂರನ್ನು ನೀಡಿದ್ದರು. ಈ ದೂರನ್ನು ಹಿಂಪಡೆಯಲು ತಾವು ಲಂಚವಾಗಿ ಪಡೆದಿದ್ದ 2.50 ಲಕ್ಷದ ಜೊತೆ 50 ಸಾವಿರ ಹೆಚ್ಚುವರಿ ಹಣವನ್ನು ಸೇರಿಸಿ ಒಟ್ಟು 30 ಲಕ್ಷ ರೂಪಾಯಿ ಹಣವನ್ನು ನೀಡುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಇಬ್ಬರು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಪ್ರದೀಪ್ ನೈತೃತ್ವದಲ್ಲಿ ಟ್ರ್ಯಾಪ್
ಲೋಕಾಯುಕ್ತ ಡಿವೈಎಸ್ಪಿ ಪ್ರದೀಪ್ ನೈತೃತ್ವದಲ್ಲಿ ಟ್ರ್ಯಾಪ್ ಕಾರ್ಯವನ್ನು ಯಶಸ್ವಿಯಾಗಿ ಮಾಡಲಾಗಿದೆ. ಪುರಾತನವಾದ ದೇವಸ್ಥಾನದ ಜಾಗಕ್ಕೆ ನಿರಪೇಕ್ಷಣಾ ಪತ್ರವನ್ನು ನೀಡುವ ಸಲುವಾಗಿ ಸ್ವೀಕರಿಸಿದ್ದ ಲಂಚದ ಹಣದಿಂದಾಗಿ ಕೆಎಎಸ್ ಅಧಿಕಾರಿಗಳಾದ ಎಬಿ ವಿಜಯ್ ಕುಮಾರ್ ಮತ್ತು ರಘುನಾಥ್ ಸಿಕ್ಕಿಬಿದ್ದಿದ್ದು ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಲೋಕಾಯುಕ್ತಕ್ಕೆ ಮರಳಿ ಅಧಿಕಾರ ಬಂದ ಬಳಿಕ ಟ್ರ್ಯಾಪ್ ಕಾರ್ಯಚರಣೆಗಳು ಯಶಸ್ವಿಯಾಗಿ ನಡೆಯುತ್ತಿದೆ. ಲೋಕಾಯುಕ್ತ ಬಿಎಸ್ ಪಾಟೀಲ್ ನೇತೃತ್ವದಲ್ಲಿ ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿದ್ದು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಟ್ರ್ಯಾಪ್ ಬಲೆಗೆ ಬೀಳುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications