ಕನ್ನಡ ಸಾಹಿತ್ಯ ಪರಿಷತ್ತು ಶತಮಾನೋತ್ಸವ ಭವನ ಉದ್ಘಾಟನೆಗೆ ಸಿದ್ಧ
ಬೆಂಗಳೂರು, ಜನವರಿ 11: ಕನ್ನಡ ಭಾಷೆ, ಕಲೆ, ಜಾನಪದ ಸಂಸ್ಕೃತಿಗಳ ಸಂವರ್ಧನೆ ಹಾಗೂ ಸಂರಕ್ಷಣೆಯ ಮಹದಾಶಯದೊಂದಿಗೆ ಹುಟ್ಟಿಕೊಂಡ ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷ ಪೂರೈಸಿದ ಸಂಭ್ರಮದಲ್ಲಿದೆ.
ಕನ್ನಡಿಗರ ಆಶೋತ್ತರಗಳಿಗೆ ಪೂರಕವಾಗಿ ಉದಯವಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತು ಶತಮಾನೋತ್ಸವ ಪೂರೈಸಿದ ಪೂರೈಸಿದ ಹಿನ್ನೆಲೆಯಲ್ಲಿ, ಅದರ ಸವಿ ನೆನಪಿಗಾಗಿ ನಿರ್ಮಿಸುತ್ತಿರುವ ಶತಮಾನೋತ್ಸವ ಭವನದ ಕಾಮಗಾರಿ ಮುಕ್ತಾಯಗೊಂಡಿದ್ದು, ಜನವರಿ 22 ರಂದು ಸಿಎಂ ಉದ್ಘಾಟಿಸಲಿದ್ದಾರೆ.
ರಾಜ್ಯ ಸರ್ಕಾರದ ಅನುದಾನದಲ್ಲಿ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಹಿಂಭಾಗದಲ್ಲಿ ಮೂರು ಅಂತಸ್ತಿನಲ್ಲಿ ಈ ಸ್ಮಾರಕ ಭವನ ನಿರ್ಮಾಣಗೊಂಡಿದೆ. ಈ ಕಟ್ಟಡದ 3 ನೇ ಮಹಡಿಯಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಸಭಾಂಗಣಕ್ಕೆ ಅಕ್ಕಮಹಾದೇವಿ ಹೆಸರು ನಾಮಕರಣ ಮಾಡಲು ಪರಿಷತ್ತಿನ ಸದಸ್ಯರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗಿದೆ.

ಪುಂಡಲೀಕ ಹಾಲಂಬಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ವೇಳೆ 13,398 ಚದರ ಅಡಿಯ ಈ ಶತಮಾನೋತ್ಸವ ಕಟ್ಟಡಕ್ಕೆ ಶಂಕುಸ್ಥಾಪನೆ ನಡೆದಿತ್ತು. 2014 ಜೂನ್17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ್ದರು. ಎರಡು ವರ್ಷದೊಳಗೆ ಕಾಮಗಾರಿ ಮುಕ್ತಾಯವಾಗಿ ಕಟ್ಟಡ ಉದ್ಘಾಟನೆ ಆಗಲು ಯೋಜನೆ ರೂಪಿಸಲಾಗಿತ್ತು.
ಆದರೆ ಸಭಾಂಗಣದ ವಿನ್ಯಾಸ ಸೇರಿದಂತೆ ಕಟ್ಟಡದ ಕೆಲ ಭಾಗದ ವಿನ್ಯಾಸದಲ್ಲಿ ಬದಲಾವಣೆ ಆದ ಕಾರಣ, ಕಾಮಗಾರಿಯನ್ನು ಮತ್ತಷ್ಟು ಮುಂದೂಡಲಾಗಿತ್ತು. 2017 ರ ನವೆಂಬರ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ವೇಳೆಯೇ ಈ ಶತಮಾನೋತ್ಸವ ಭವನ ಉದ್ಘಾಟನೆಗೆ ಪರಿಷತ್ತು ಅಗತ್ಯ ಸಿದ್ಧತೆ ನಡೆಸಿತ್ತು.ಆದರೆ ಉದ್ಘಾಟನೆಗೆ ಮುಖ್ಯಮಂತ್ರಿ ಅವರ ದಿನಾಂಕ ಸಿಗದೆ ಎರಡು ತಿಂಗಳುಗಳ ಕಾಲ ಮುಂದೂಡಲಾಯಿತು.
ಏನೇನು ಸೌಲಭ್ಯ: ನೆಲಮಹಡಿಯಲ್ಲಿ ಗ್ರಂಥಾಲಯ, ಕಚೇರಿ, ಒಂದನೇ ಮಹಡಿಯಲ್ಲಿ 6 ಅತಿಥಿ ಗೃಹ, 2 ನೇ ಮಹಡಿಯಲ್ಲಿ ಕ್ಯಾಂಟೀನ್, ಪ್ರಸಾದನ ಕೊಠಡಿ, ಮೂರನೇ ಮಹಡಿಯಲ್ಲಿ ಅಕ್ಕಮಹಾದೇವಿ ಸಭಾಂಗಣ ಗ್ರೀನ್ ರೂಂ, ಮಂದಿ ಸಾಗುವ 2 ಲಿಫ್ಟ್, ಅಂಗವಿಕಲರಿಗೆ ಪ್ರತ್ಯೇಕ ಶೌಚಾಲಯ, ಕೂರಲು ಹೊರಗೆ ಬೆಂಚ್ ಗಳ ಸೌಲಭ್ಯ ಕಲ್ಪಿಸಲಾಗಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications