ಜಮ್ಮು ಕಾಶ್ಮೀರದ ಇತಿಹಾಸ ನೆನಪಿಸಬೇಕಿದೆ, ಆಧುನಿಕ ಜಮ್ಮು ಕಾಶ್ಮೀರ ಹೇಗಾಯಿತು?
ನವದೆಹಲಿ, ಆಗಸ್ಟ್ 6: ಜಮ್ಮು ಕಾಶ್ಮೀರದ ಇತಿಹಾಸ ನೆನಪಿಸಬೇಕಿದೆ, ಆಧುನಿಕ ಜಮ್ಮು ಕಾಶ್ಮೀರ ಹೇಗಾಯಿತು ಗೊತ್ತೇ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಲೋಕಸಭೆಯಲ್ಲಿ ಮಾತು ಆರಂಭಿಸಿದರು.
1846ರಲ್ಲಿ ಬ್ರಿಟಿಷ್ -ದಿಲೀಪ್ ಸಿಂಗ್ ನಡುವೆ ಯುದ್ಧ ನಡೆದ ಬಳಿಕ 1940ರಲ್ಲಿ ಲಾಹೋರ್ ಮಾತುಕತೆ, ಬಿಯಾಸ್-ಸಿಂಧೂ ನದಿ ದಡ ಬ್ರಿಟಿಷರಿಗೆ ಕೊಡಬೇಕೆಂದು ಮಾತುಕತೆ ನಡೆದಿತ್ತುಎಂದು ತಿಳಿಸಿದರು.
370 ವಿಧಿ ರದ್ದತಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿಸಿದ್ದಾರೆ, ಜಮ್ಮು ಕಾಶ್ಮೀರದಲ್ಲಿ ವಿಧನಸಭೆ ಈಗಿಲ್ಲ ಇಂತಹ ಪರಿಸ್ಥಿತಿಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾಶ್ಮೀರದ ಜನರನ್ನು ಬದಿಗಿಟ್ಟು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸ್ಥಳೀಯರನ್ನು ಕತ್ತಲಲ್ಲಿ ಇಡಲಾಗಿದೆ ಎಂದು ದೂರಿದರು.
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನಾದೇಶವಿಲ್ಲದೆ ಒಂದು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾರಕವಾದದ್ದು ಎಂದು ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಅಭಿಪ್ರಾಯಪಟ್ಟರು.
ಕಳೆದ 70 ವರ್ಷಗಳಲ್ಲಿ ಕೇಂದ್ರಾಡಳಿತ ಪ್ರದೇಶವನ್ನು ರಾಜ್ಯವನ್ನಾಗಿ ಮಾಡಿದ್ದನ್ನು ನೋಡಿದ್ದೆವು ಆದರೆ ಮೊದಲ ಬಾರಿಗೆ ರಾಜ್ಯವನ್ನು ಕೇಂದ್ರಾಳಿತ ಪ್ರದೇಶವನ್ನಾಗಿ ಮಾಡಲಾಗಿದೆ. ಇದಕ್ಕಿಂತ ದೊಡ್ಡ ಆಘಾತವಿಲ್ಲ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದಾರೆ.
ಮೊದಲ ಬಾರಿಗೆ ರಾಜ್ಯವೊಂದು ಆಡಳಿತ ಪ್ರದೇಶವಾಗುವುದನ್ನು ನೋಡುತ್ತಿದ್ದೇವೆ ಇದಕ್ಕಿಂತ ದೊಡ್ಡ ಆಘಾತ ಬೇರೆ ಬೇಕೆ, ಇದು ಉತ್ತಮ ಬೆಳವಣಿಗೆಯಲ್ಲ ಎಂದಿದ್ದಾರೆ.

ಅಮಿತ್ ಶಾ ಅವರು ಜುನಾಗಢ, ಹೈದರಾಬಾದ್ ಬಗ್ಗೆ ಮಾತನಾಡಬೇಕು, ಜುನಾಗಢದ 99 ಶೇ. ಜನರು ಭಾರತದ ಜೊತೆ ಹೋಗೋದಾಗಿ ಬಯಸಿದ್ದರು, ಇದರ ವಿರುದ್ಧ ಪಾಕಿಸ್ತಾನ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ದೂರು ನೀಡಿತ್ತು ಎಂದು ವಿವರಿಸಿದರು.
ನೀವೇ ನಿರ್ಧಾರ ಕೈಗೊಳ್ಳಿ ಎಂದು ಸಂಸತ್ಗೆ ಹೇಳಲಾಗುತ್ತದೆ, ಸಂವಿಧಾನಸ ದ ಮೂರನೇ ವಿಧಿ ಪ್ರಕಾರ ಹಸ್ತಕ್ಷೇಪ ಮಾಡುವಂತಿಲ್ಲ, ಸಂವಿಧಾನದ ಮೂರನೇ ವಿಧಿ ವಿಂಗಡಣೆ ಮಾಡಲಾಗಿದೆ. ರಾಷ್ಟ್ರಪತಿ ಆಳ್ವಿಕೆ ಮೂಲಕ ಜಮ್ಮು ಕಾಶ್ಮೀರ ಇಬ್ಭಾಗ ಮಾಡಲಾಗಿದೆ ಎಂದು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications