ಬಿಬಿಎಂಪಿ ಉಪ ಚುನಾವಣೆ : ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಬೆಂಗಳೂರು, ಮೇ 17 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾವೇರಿಪುರ ವಾರ್ಡ್ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಸಿ.ಪಲ್ಲವಿ ಅವರು ಕಣದಲ್ಲಿದ್ದಾರೆ.
ಉಪ ಚುನಾವಣೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಸುಶೀಲಾ ಸುರೇಶ್ ಅವರು ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ರವರು ಮಾಜಿ ಶಾಸಕ ಪ್ರಿಯಕೃಷ್ಣ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಬಿಎಂಪಿ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
ಮೇ 29ರಂದು ಬಿಬಿಎಂಪಿಯ ಕಾವೇರಿಪುರ ವಾರ್ಡ್ ಉಪ ಚುನಾವಣೆ ನಡೆಯಲಿದ್ದು, ಮೇ 31ರಂದು ಚುನಾವಣಾ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ. ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಲ್ಲವಿ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಬಿಬಿಎಂಪಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ
ಕಾವೇರಿಪುರ ವಾರ್ಡ್ ಸದಸ್ಯರಾಗಿದ್ದ ರಮೀಳಾ ಅವರು ನಿಧನರಾದ ಕಾರಣ ಉಪ ಚುನಾವಣೆ ಎದುರಾಗಿದೆ. ರಮೀಳಾ ಅವರು ಜೆಡಿಎಸ್ನಿಂದ ಗೆಲುವು ಸಾಧಿಸಿದ್ದರು. ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ಗೆ ಕ್ಷೇತ್ರ ಬಿಟ್ಟುಕೊಡಲಾಗಿದೆ.
ಬಿಬಿಎಂಪಿ ಚುನಾವಣಾ ಫಲಿತಾಂಶ : ಸಮಗ್ರ ಮಾಹಿತಿ
ಕಾವೇರಿಪುರ ವಾರ್ಡ್ ಜೊತೆಗೆ ಸಗಾಯಪುರ ವಾರ್ಡ್ಗೂ ಉಪ ಚುನಾವಣೆ ನಡೆಯಲಿದೆ. ಸಗಾಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ಎರಡೂ ವಾರ್ಡ್ಗಳಲ್ಲಿ ನೇರ ಹಣಾಹಣಿ ನಡೆಯಲಿದೆ.