ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂದಿನ 25 ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿಯದ್ದೇ ಅಧಿಕಾರ!

|
Google Oneindia Kannada News

ಬೆಂಗಳೂರು, ಅ. 27: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು.

ಆರ್‌.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರ ಮಾಡಿದರು. ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಂತೆ ಸಿಎಂ ಯಡಿಯೂರಪ್ಪ ಕೂಡ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಮಂಡ್ಯದ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹಿಂದೆ ಕೇವಲ ಬಾಯಿಮಾತಿಗೆ ಹೇಳ್ಕೊಂಡು ಬಂದರು. ಆದರೆ ಅನುದಾನ ಮಾತ್ರ ಏನೂ ಕೊಡಲಿಲ್ಲ.

Kc Narayana Gowda Indirectly Rebuked Jds Leaders In RR Nagar By Election Campaign

ಯಡಿಯೂರಪ್ಪ ಅವರು ಸಿಎಂ ಆದ್ಮೇಲೆ ಸಾವಿರಾರು ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಅದೇ ರೀತಿ ಆರ್ ಆರ್ ನಗರದ ಅಭಿವೃದ್ಧಿಗೆ ಮುನಿರತ್ನ ಅವರನ್ನ ಹೆಚ್ಚಿನ ಮತದಿಂದ ಗೆಲ್ಲಿಸಿ. ಕೆಲವೇ ದಿನಗಳಲ್ಲಿ ಮುನಿರತ್ನ ಸಚಿವರಾಗಿ ಈ ಭಾಗಕ್ಕೆ ಬರುತ್ತಾರೆ ಎಂದು ಸಚಿವ ಡಾ. ನಾರಾಯಣ ಗೌಡ ಹೇಳಿದರು.

Kc Narayana Gowda Indirectly Rebuked Jds Leaders In RR Nagar By Election Campaign

Recommended Video

ಕಾಂಗ್ರೆಸ್ ನಲ್ಲಿ ಗೊಂದಲ ! | DK Shivkumar | RR Nagar By Election | Oneindia Kannada

ಲಗ್ಗೆರೆ ಭಾಗದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು. ಅಧಿಕಾರದಲ್ಲಿ ಇಲ್ಲದಿದ್ದರೂ ಮುನಿರತ್ನ ಸೇವೆ ಮಾಡುತ್ತಲೇ ಇದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಪ್ರತಿಯೊಬ್ಬರ ಸಂಕಷ್ಟಕ್ಕೂ ನೆರವಾಗಿದ್ದಾರೆ. ಸದಾ ಜನರ ಸಮಸ್ಯೆಗೆ ಸ್ಪಂದಿಸುವ ಮುನಿರತ್ನ ಅವರನ್ನ ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು. 25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿ ಇರುತ್ತದೆ. ಹೀಗಾಗಿ ಅಭಿವೃದ್ಧಿಗೋಸ್ಕರ ಜನರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತ ನೀಡಿ ಎಂದು ಸಚಿವರು ಮನವಿ ಮಾಡಿದ್ರು. ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಅಭ್ಯರ್ಥಿ ಮುನಿರತ್ನ, ಬಿಜೆಪಿ ಮುಖಂಡೆ ಶೃತಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

English summary
Horticulture Minister Dr. K C Narayana Gowda indirectly rebuked JDS leaders that those who claim that Hassan-Mandya were like two eyes did not develop that areas. CM Yediyurappa had to come to the development of Mandya and Hassan he said in RR Nagara by election campaign. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X