ಕೆಸಿ ವ್ಯಾಲಿ ಕಲುಷಿತ ನೀರು: ಅಧಿಕಾರಿಗಳ ವರ್ತನೆಗೆ ಹೈಕೋರ್ಟ್ ತರಾಟೆ
ಬೆಂಗಳೂರು, ಆಗಸ್ಟ್ 16: ಕೆಸಿ ವ್ಯಾಲಿ ಯೋಜನೆ ಮೂಲಕ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ಸೆಪ್ಟೆಂಬರ್ 11ರವರೆಗೆ ಸಂಸ್ಕರಿಸಿದ ತ್ಯಾಜ್ಯ ನೀರು ಹರಿಸದಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ನೀರಿನ ಗುಣಮಟ್ಟ ಕುರಿತ ತಜ್ಞರ ಸಮಗ್ರ ವರದಿ ಸಲ್ಲಿಸಲು ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶ ವಿಸ್ತರಿಸಿ, ಕಾಲಾವಕಾಶವನ್ನು ಹೈಕೋರ್ಟ್ ನೀಡಿದೆ. ಒಂದೊಮ್ಮೆ ಕೆಸಿ ವ್ಯಾಲಿ ಯೋಜನೆಯನ್ನೇ ಕೈಬಿಡುವುದಾದರೆ ಅದಕ್ಕಾಗಿ ಬಳಕೆ ಮಾಡಿರುವ 1300 ಕೋಟಿ ರೂ. ಸಾರ್ವಜನಿಕರ ಹಣದ ಕತೆ ಏನು? ಯಾರ ಮೇಲೆ ಅದರ ಜವಾಬ್ದಾರಿ ಹೊರಿಸಬಹುದು ಎಂಬುದರ ಬಗ್ಗೆಯೂ ಚಿಂತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ.

ಈ ಬಗ್ಗೆ ವಿವರವಾದ ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿ ವಿಚಾರಣೆ ಸೆಪ್ಟೆಂಬರ್ 11ಕ್ಕೆ ಮುಂದೂಡಿದೆ, ಅಲ್ಲಿಯವರೆಗೆ ನೀರು ಹರಿಸದಂತೆ ಮಧ್ಯಂತರ ಆದೇಶ ಮುಂದುವರೆಸಿದೆ. ನರಸಾಪುರ ಗ್ರಾಮ ಪಂಚಾಯ್ತಿ ನೀರು ಕುಡಿಯಲು ಯೋಗ್ಯವಲ್ಲ ಎಂದು ಅರ್ಜಿದಾರರ ಪರ ವಕೀಲರಿಂದ ಕರಪತ್ರದ ಪ್ರಸ್ತಾಪ ಮಾಡಿದರು. ಅಷ್ಟೇ ಅಲ್ಲದೆ ಸೆ.11ರಂದು ಕೆಸಿ ವ್ಯಾಲಿ ನೀರಿನ ಶುದ್ಧತೆ, ಗುಣಮಟ್ಟದ ಕುರಿತು ದಾಖಲೆ ನೀಡಿ ಇಲ್ಲವಾದರೆ ದಂಡ ಕಟ್ಟಲು ಸಿದ್ಧರಾಗಿ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications