ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಿನೇಶ್ ಗುಂಡೂರಾವ್ ಹೊರಗಿಟ್ಟು ವೇಣುಗೋಪಾಲ್ ಸಭೆ, ಕಾರಣ ಏನು?

|
Google Oneindia Kannada News

ಬೆಂಗಳೂರು, ಜನವರಿ 25: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಹೊರಗಿಟ್ಟು ಹಳೆ ಮೈಸೂರು ಭಾಗದ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ.

ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಕಾಂಗ್ರೆಸ್‌ನಿಂದ ಅಮಾನತು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಕಾಂಗ್ರೆಸ್‌ನಿಂದ ಅಮಾನತು

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಮೇಲೆ ಶಾಸಕರು ಮತ್ತು ಕೆಲವು ದೂರು ನೀಡಿರುವ ಕಾರಣ ಹೀಗೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ ಖಡಕ್ ನೋಟಿಸ್‌ಗೆ ತಣ್ಣಗಾಗಿ ಉತ್ತರಿಸಿದ ಅತೃಪ್ತ ಶಾಸಕರುಕಾಂಗ್ರೆಸ್‌ ಖಡಕ್ ನೋಟಿಸ್‌ಗೆ ತಣ್ಣಗಾಗಿ ಉತ್ತರಿಸಿದ ಅತೃಪ್ತ ಶಾಸಕರು

ಆದರೆ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ದಿನೇಶ್ ಗುಂಡೂರಾವ್, ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹಳೆ ಮೈಸೂರು ಭಾಗದ ಕಾಂಗ್ರೆಸ್ ಶಾಸಕರ ವೈಯಕ್ತಿಕ ಅಭಿಪ್ರಾಯ ಸಂಗ್ರಹಣೆಯನ್ನು ವೇಣುಗೋಪಾಲ್ ಮಾಡಿದರು, ಹಾಗಾಗಿ ನಾನೇ ಸ್ವಯಂ ಆಗಿ ಸಭೆಯಿಂದ ದೂರ ಉಳಿಯಲು ನಿರ್ಧರಿಸಿದೆ ಎಂದಿದ್ದಾರೆ.

KC Venugopal did Congress MLAs meeting keeping KPCC president out

ಆದರೆ ಈ ಘಟನೆಯು ಕೆಪಿಸಿಸಿ ಅಧ್ಯಕ್ಷರ ಮೇಲೆ ಪಕ್ಷದ ಶಾಸಕರಲ್ಲಿ ಹಾಗೂ ಮುಖಂಡರಲ್ಲಿ ಕೆಲವರಿಗೆ ಅಸಮಾಧಾನ ಇದೆ ಎಂಬುದು ಗೊತ್ತಾಗುತ್ತಿದೆ. ಈ ಹಿಂದೆಯೇ ಕೆಲವು ನಾಯಕರು ದಿನೇಶ್ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.

ಪ್ರಿಯಾಂಕಾ ರಾಜಕೀಯ ಪ್ರವೇಶದ ನಂತರ ಮೈತ್ರಿ ಮರೆತ ಕಾಂಗ್ರೆಸ್!ಪ್ರಿಯಾಂಕಾ ರಾಜಕೀಯ ಪ್ರವೇಶದ ನಂತರ ಮೈತ್ರಿ ಮರೆತ ಕಾಂಗ್ರೆಸ್!

ಪತ್ರಕರ್ತರ ಕ್ಷಮೆ ಕೇಳಿದ ದಿನೇಶ್ ಗುಂಡೂರಾವ್
ಅನುಮತಿ ಇಲ್ಲದೆ ತಮ್ಮ ಕಚೇರಿಗೆ ನುಗ್ಗಿದ ಮಾಧ್ಯಮದ ಕ್ಯಾಮೆರಾಗಳನ್ನು ದಿನೇಶ್ ಗುಂಡೂರಾವ್ ಅವರು ಹೊರಹೋಗಲು ಹೇಳಿದರು. ಆದರೆ ಅವರು ಹೋಗದೇ ಇದ್ದಾಗ ಅವರನ್ನು ಉದ್ದೇಶಿಸಿ 'ನಾನ್‌ಸೆನ್ಸ್‌' ಎಂದು ಬೈದಿದ್ದರು. ಆ ನಂತರ ಸಂಜೆ ವೇಳೆಗೆ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

English summary
Karnataka congress in charge KC Venugopal did congress MLAs meeting keeping KPCC president Dinesh Gundu Rao out. But Dinesh Gundu Rao denies that and say i only decided to not go their private meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X