ಮೈದಾನದಲ್ಲಿ ಅಸ್ವಸ್ಥಗೊಂಡ ಅಂಬರೀಷ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು, ಸೆಪ್ಟೆಂಬರ್ 08: ಹಿರಿಯ ನಟ, ಮಾಜಿ ಸಚಿವ ಅಂಬರೀಷ್ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಇಂದಿನಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾದ ಕರ್ನಾಟಕ ಚಲನಚಿತ್ರ ಕ್ರಿಕೆಟ್ ಟೂರ್ನಮೆಂಟ್ ನ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾಗ ಅಂಬರೀಷ್ ಅವರು ಅಸ್ವಸ್ಥಗೊಂಡಿದ್ದರು.

ಕೆಸಿಸಿ ಸೀಸನ್ 2 ಆರಂಭವಾಗಿದೆ. ಕನ್ನಡ ಸಿನಿಮಾರಂಗದ ಬಹುತೇಕ ಸ್ಟಾರ್ ಗಳು ಬೆಳಗ್ಗೆಯಿಂದಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೇರಿಕೊಂಡಿದ್ದಾರೆ. ನಟ ರೆಬೆಲ್ ಸ್ಟಾರ್ ಅಂಬರೀಶ್ ಕೂಡ

ಕೆಸಿಸಿ ಸೀಸನ್ 2ನಲ್ಲಿ ಇಡೀ ಚಿತ್ರರಂಗದ ಸ್ಟಾರ್ ನಟರು ಪಾಲ್ಗೊಂಡಿದ್ದಾರೆ. ಕಲಾವಿದರಿಗೆ ಸಾಥ್ ನೀಡಲು ಕ್ರೀಡಾಂಗಣಕ್ಕೆ ಅಂಬರೀಷ್ ಆಗಮಿಸಿದ್ದರು.

KCC tournament : Actor Ambareesh fall ill admitted to private hospital
ಮಧ್ಯಾಹ್ನದಿಂದ ಸಾಕಷ್ಟು ಗಂಟೆಗಳ ಕಾಲ ಕ್ರೀಡಾಂಗಣದಲ್ಲಿ ಕಾಲ ಕಳೆದ ಅಂಬಿ, ಚೇರ್ ನಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ, ಚೇರ್ ನಲ್ಲಿ ಕೂತಿದ್ದ ಅಂಬರೀಶ್, ಎದ್ದು ನಿಲ್ಲಲ್ಲು ಹೋದಾಗ ಕುಸಿದು ಬಿದ್ದರು.ಅಂಬರೀಶ್ ಅವರನ್ನು ಕೂಡಲೇ ಅಲ್ಲೇ ಹತ್ತಿರವಿರುವ ವಿಕ್ರಂ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ರಾಕ್ಲೈನ್ ವೆಂಕಟೇಶ್ ಅಂಬರೀಶ್ ಅವರ ಜೊತೆ ಆಸ್ಪತ್ರೆಗೆ ತೆರಳಿದ್ದಾರೆ.

ಅಂಬರೀಶ್ ಅವರಿಗೆ ಮಂಡಿನೋವು ಕಾಣಿಸಿಕೊಂಡಿದ್ದು ಹೀಗಾಗಿ, ಆಯಾಸಗೊಂಡು ಕಾಲು ನೋವಿನಿಂದ ಕುಸಿದು ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಗೆ ಅಂಬರೀಷ್ ಗೆ ಚಿಕಿತ್ಸೆ ಮುಂದುವರೆಯಲಿದ್ದು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಕ್ ಲೈನ್ ವೆಂಕಟೇಶ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+