ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

HRD ಸಚಿವರಿಗೆ ಕನ್ನಡಿಗರ ಪರವಾಗಿ ಸಿದ್ದರಾಮಯ್ಯರಿಂದ ಪತ್ರ

|
Google Oneindia Kannada News

ಬೆಂಗಳೂರು, ಜೂನ್ 04: ಕೇಂದ್ರ ಸರ್ಕಾರ ಎಂದಿಗೂ ಹಿಂದಿ ಹೇರಿಕೆ ಮಾಡುವುದಿಲ್ಲ, ಪ್ರಸ್ತಾವಿತ ತ್ರಿಭಾಷಾ ಸೂತ್ರ ಶಿಕ್ಷಣ ನೀತಿಯ ಕರಡು ಪ್ರತಿಯನ್ನು ಹಿಂಪಡೆಯಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯವು ಸ್ಪಷ್ಟನೆ ನೀಡಿದೆ.

ಹೀಗಾಗಿ, ಹಿಂದಿ ಹೇರಿಕೆ ಪ್ರತಿಭಟನೆ ಸದ್ಯಕ್ಕೆ ತಣ್ಣಗಾಗಿದೆ. ಆದರೆ, ಇದಕ್ಕೆ ತಾರ್ಕಿಕ ಅಂತ್ಯ ಹಾಗೂ ಅಗತ್ಯ ಬದಲಾವಣೆ ತರಬೇಕಾಗಿರುವ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಮೊದಲ ಹೆಜ್ಜೆ ಇಟ್ಟಿದೆ.

KDA President SG Siddaramaiah letter to HRD Minister Ramesh Pokhriyal Nishank

ಕೇಂದ್ರ ಸರ್ಕಾರದ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯ ಹಲವು ಪ್ರಾದೇಶಿಕ ವಿರೋಧಿ ಅಂಶಗಳ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯರವರು ಕೇಂದ್ರ ಸರ್ಕಾರದ ಗಮನ ಸೆಳೆದು ರಾಷ್ಟ್ರದ ಒಕ್ಕೂಟ ತತ್ವಗಳನ್ನು ಗೌರವಿಸುವ ರೀತಿಯಲ್ಲಿ ಈ ನೀತಿಯು ರೂಪಿತವಾಗಬೇಕಿದೆ ಎಂದು ಅಗ್ರಹಿಸಿದ್ದಾರೆ.

ಭಾರತದ ಸಂಸತ್ತು 1963ರಲ್ಲಿ ಮಾಡಿದ "ಅಫಿಶಿಯಲ್ ಲಾಂಗ್ವೇಜ್ ಆಕ್ಟ್ - 1963"ರಲ್ಲಿ ಹಿಂದೀ ಭಾಷೆಯನ್ನು ಒಕ್ಕೂಟದ ಏಕೈಕ ಆಡಳಿತ ಭಾಷೆ ಮಾಡಿದಾಗ ಕರ್ನಾಟಕ, ತಮಿಳುನಾಡು ಮತ್ತು ಬಂಗಾಳ ಸೇರಿದಂತೆ ಅನೇಕ ಹಿಂದೀಯೇತರ ಪ್ರದೇಶಗಳಲ್ಲಿ ಇದಕ್ಕೆ ವಿರೋಧ ತೀವ್ರ ಹೋರಾಟದ ರೂಪದಲ್ಲಿ ವ್ಯಕ್ತವಾಯಿತು. ತಮಿಳುನಾಡಿನಲ್ಲಂತೂ ಈ ಹೋರಾಟದಲ್ಲಿ ನೂರಾರು ಜನ ಸಾವಿಗೀಡಾದರು.

ಸರ್ಕಾರದ ವೆಬ್ ತಾಣದಿಂದ ತ್ರಿಭಾಷಾ ಸೂತ್ರದ ಕರಡು ಪ್ರತಿ ಮಾಯ! ಸರ್ಕಾರದ ವೆಬ್ ತಾಣದಿಂದ ತ್ರಿಭಾಷಾ ಸೂತ್ರದ ಕರಡು ಪ್ರತಿ ಮಾಯ!

ಭಾರತದಿಂದಲೇ ಸಿಡಿದು ಹೋಗುವ ದನಿ ಹೋರಾಟದಲ್ಲಿ ಕೇಳಿ ಬಂತು. ಆಗ ಅಂದಿನ ಪ್ರಧಾನಿ ಜವಾಹರ್‌ಲಾಲ್ ನೆಹರೂರವರು "ನೀವೆಲ್ಲಾ ಒಪ್ಪೋ ತನಕ ಭಾರತದ ಆಡಳಿತ ಭಾಷೆಯಾಗಿ ಇಂಗ್ಲೀಷನ್ನೂ ಮುಂದುವರೆಸುತ್ತೇವೆ" ಎಂಬ ಭರವಸೆ ಕೊಟ್ಟರು. ಇದು ಸಂಸತ್ತಿನಲ್ಲಿ ಮುಂದೆ ಪ್ರಾದೇಶಿಕ ಭಾಷೆಗಳನ್ನು ಕೇಂದ್ರಸರ್ಕಾರಿ ನೌಕರಿಯ ನೇಮಕಾತಿ ಪರೀಕ್ಷೆಗಳಲ್ಲಿ ಬಳಸುವ ಅವಕಾಶ ನೀಡುವ, ಪ್ರಾದೇಶಿಕ ಭಾಷೆಗಳನ್ನೂ ಉಳಿಸಿಕೊಳ್ಳುವ ಉದ್ದೇಶದ "ತ್ರಿಭಾಷಾ ಸೂತ್ರ"ದ ರಚನೆಗೆ ಕಾರಣವಾಯಿತು.

English summary
Kannada Development authority president S.G Siddaramaiah has urged Human Resource development minister Ramesh Pokhriyal Nishank to change the controversial three language education policy draft.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X