ಕೆಇಎ: ವೃತ್ತಿಪರ ಕೌನ್ಸೆಲಿಂಗ್ ಗೆ ಮೊಬೈಲ್ ಆ್ಯಪ್
ಬೆಂಗಳೂರು, ಜನವರಿ 29 : ಮುಂದಿನ ಶೈಕ್ಷಣಿಕ ವರ್ಷದ ಸಾಮಾನ್ಯ ಪ್ರವೇಶ ಪರೀಕ್ಷೆ ವೇಳೆ ಕಾಲೇಜುಗಳ ಆಯ್ಕೆ ಸಂಬಂಧ ಮೊಬೈಲ್ ಅಪ್ಲಿಕೇಷನ್ ಬಿಡುಗಡೆಗೊಳಿಸಿ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಮತ್ತಷ್ಟು ಸರಳೀಕೃತಗೊಳಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಚಿಂತನೆ ನಡೆಸಿದೆ.
ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ವೇಳೆ ಸೀಟ್ ಮೆಟ್ರಿಕ್ಸ್ ಆಯ್ಕೆ ಸಂಬಂಧಿಸಿದಂತೆ ಕಾಲೇಜುಗಳು ಹಾಗೂ ವೃತ್ತಿಗಳ ಆಯ್ಕೆಗೆ ನೆರವಾಗುವಂತೆ ಅಪ್ಲಿಕೇಷನ್ ನ್ನು ಆಂಡ್ರಾಯ್ಡ್ ಫೋನುಗಳಿಗೆ ಶೀಘ್ರ ಬಿಡುಗಡೆ ಮಾಡುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಪ್ಷನ್ ಎಂಟ್ರಿಯ ಜತೆಗೆ ದಾಖಲೆ ಪರಿಶೀಲನೆಗೂ ಈ ಅಪ್ಲಿಕೇಷನ್ ನಲ್ಲಿ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ಆ್ಯಂಡ್ರಾಯ್ಡ್ ಮೊಬೈಲ್ ನಲ್ಲಿ ಬರುತ್ತಿರುವ ಈ ಅಪ್ಲಿಕೇಷನ್ ನಿಂದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೇಂದ್ರಗಳಿಗೆ ಬರದೆ ಮನೆಯಲ್ಲಿಯೇ ಕುಳಿತು ಸಿಇಟಿ ಕೌನ್ಸಿಲಿಂಗ್ ಗೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಮಾಡಬಹುದಾಗಿದೆ.
ಕಳೆದ ವರ್ಷ 1 ಲಕ್ಷ 80 ಸಾವಿರ ವಿದ್ಯಾರ್ಥಿಗಳು ಸಿಇಟಿ ಮೂಲಕ ಎಂಜಿನಿಯರಿಂಗ್, ಅಗ್ರಿಕಲ್ಚರ್, ಫಾರ್ಮಸಿ ಮತ್ತು ವೆಟರ್ನರಿ ವಿಜ್ಞಾನಕ್ಕೆ ಸಂಬಂಧಿಸಿದ ಕೋರ್ಸ್ ಗಳಿಗೆ ಪ್ರವೇಶ ಪಡೆದಿದ್ದರು. ಈ ಬಾರಿಯೂ ಕೂಡ ೧ ಲಕ್ಷ ೮೦ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಪಡೆಯುವ ಸಾಧ್ಯತೆಗಳಿವೆ.
ವೃತ್ತಪರ ಕೋರ್ಸ್ ಗಳು ಹಾಗೂ ಕಾಲೇಜುಗಳಿಗೆ ಸಂಬಂಧಿಸಿದ ಮಾಹಿತಿ ಮಾತ್ರವಲ್ಲದೆ, ಆಯಾ ವಿದ್ಯಾರ್ಥಿಗಳ ನೋಂದಣಿ ಹಾಗೂ ಮೂಲ ದಾಖಲೆ ಪರಿಶೀಲನೆ ವೇಳೆಯೂ ಈ ಅಪ್ಲಿಕೇಷನ್ ನಿಂದ ನೆರವಾಗಲಿದೆ.
ಸದ್ಯ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಬಂದು ದಾಖಲಾತಿಗಳನ್ನು ಸಲ್ಲಿಸುವ ವ್ಯವಸ್ಥೆ ಇದ್ದು ಮುಂದಿನ ದಿನಗಳಲ್ಲಿ ಅವರ ಮೂಲ ದಾಖಲೆ ಕುರಿತಂತೆ ಅಪ್ಲಿಕೇಷನ್ ಮೂಲಕವೇ ಖಚಿತ ಮಾಹಿತಿ ಪಡೆಯುವ ಸೌಲಭ್ಯ ಲಭ್ಯವಾಗಲಿದೆ.
ವಿದ್ಯಾರ್ಥಿಗಳು ಹಾಗೂ ಕಾಲೇಜು ಶಿಕ್ಷಕರಿಂದ ಪಡೆದ ಮಾಹಿತಿ ಹಾಗೂ ಸಲಹೆಗಳ ಅನುಸಾರ ಈ ವರ್ಷದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೆಚ್ಚು, ಡಿಜಿಟಲ್ ಹಾಗೂ ತಾಂತ್ರಿಕತೆ ಅಳವಡಿಸಿಕೊಳ್ಳಲು ಮುಂದಾಗಿದ್ದು ಅದರ ಭಾಗವಾಗಿ ವಿದ್ಯಾರ್ಥಿಗಳಿಗೆ ಈ ಮೊಬೈಲ್ ಅಪ್ಲಿಕೇಷನ್ ಬಿಡುಗಡೆ ಮಾಡಲಾಗುತ್ತಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications