Kempegowda Airport: ವಿಮಾನ ನಿಲ್ದಾಣದ ಬಳಿ ಬೃಹತ್ ಅಡುಗೆ ಮನೆ ನಿರ್ಮಾಣ-ವಿಶೇಷತೆ ಏನು ಗೊತ್ತಾ?-ಮಾಹಿತಿ, ವಿವರ
ಬೆಂಗಳೂರು, ಮಾರ್ಚ್, 19: ರಾಜ್ಯ ರಾಜಧಾನಿ ಬೆಂಗಳೂರು ದಿನದಿಂದಿ ದಿನಕ್ಕೆ ಬೆಳವಣಿಗೆ ಆಗುತ್ತಲೇ ಇದೆ. ಇನ್ನು ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಲೇ ಇವೆ. ಇದೀಗ ಈ ವಿಮಾನ ನಿಲ್ದಾಣದ ಬಳಿ ಬೃಹದಾಕಾರದ ಅಡುಗೆ ಮನೆಯೊಂದು ನಿರ್ಮಾಣವಾಗಿದೆ. ಹಾಗಾದರೆ ಈ ಅಡುಗೆ ಮನೆಯ ವಿಶೇಷತೆ ಏನು ಹಾಗೂ ಇದರ ನಿರ್ಮಾಣಕ್ಕೆ ತಗುಲಿದ ವೆಚ್ಚ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಹಲವು ಸೇವೆ ಒದಗಿಸುವ, ಸಿಂಗಾಪುರ ಮೂಲದ "ಸ್ಯಾಟ್" ಸಂಸ್ಥೆಯು 2.2 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ, ದಿನವೊಂದಕ್ಕೆ ಬರೋಬ್ಬರಿ 1.7 ಲಕ್ಷ ಸಿದ್ಧ ಆಹಾರ ತಯಾರಿಸಬಹುದಾದ ಸಾಮರ್ಥ್ಯ ಹೊಂದಿರುವ ಅಡುಗೆ ಮನೆಯನ್ನು ನಿರ್ಮಾಣ ಮಾಡಿದೆ.

40 ಸಾವಿರ ಕೆ.ಜಿ. "ರೆಡಿ ಟು ಈಟ್" ಆಹಾರ ಉತ್ಪನ್ನಗಳನ್ನು ಪೂರೈಕೆ ಮಾಡುವ ಸಾಮರ್ಥ್ಯವನ್ನು ಇದು ಹೊಂದಿದೆ. ಆಹಾರವನ್ನು ಸುಲಭವಾದ ರೀತಿಯಲ್ಲಿ ಪ್ಯಾಕ್ ಮಾಡಲಾಗುತ್ತಿದೆ. ರೆಸ್ಟೊರೆಂಟ್ಗಳು, ಕೆಫೆಗಳು, ವಿಮಾನಯಾನ ಸಂಸ್ಥೆಗಳು ಸೇರಿದಂತೆ ದೇಶಿ ಹಾಗೂ ವಿದೇಶಿಯ ಮಾರುಕಟ್ಟೆಗಳಿಗೆ ಇಲ್ಲಿಂದ ಆಹಾರ ಉತ್ಪನ್ನವು ರವಾನೆ ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಈ ಬಗ್ಗೆ ಎಸ್ಎಫ್ಎಸ್ಐ ನಿರ್ದೇಶಕ ಮತ್ತು ಸಿಇಒ ಸಾಗರ್ ಮಾಹಿತಿ ನೀಡಿದ್ದು, ಸುರಕ್ಷತಾ ಮಾನದಂಡಗಳನ್ನು ಅನುಸರಿಸುವ ಜೊತೆಗೆ ರುಚಿಕರ ಮತ್ತು ಪೌಷ್ಟಿಕ ಆಹಾರ ಉತ್ಪನ್ನಗಳನ್ನು ಸ್ಮಾರ್ಟ್ ತಂತ್ರಜ್ಞಾನದ ನೆರವಿನಿಂದ ಉತ್ಪಾದನೆ ಮಾಡಲಾಲಾಗುತ್ತದೆ ಎಂದು ತಿಳಿಸಿದ್ದಾರೆ.
"ಸ್ಯಾಟ್ಸ್" ಫುಡ್ ಸೊಲ್ಯೂಷನ್ಸ್ನ ಸಿಇಒ ಸ್ಟಾನ್ಲಿಗೋಹ್ ಅವರು, ಭಾರತೀಯ ಮಾರುಕಟ್ಟೆಯಲ್ಲಿ ನಮ್ಮ ಉದ್ಯಮವು ಸುಮಾರು ಎರಡು ದಶಕಗಳಿಂದಲೂ ಇದೆ. ರೆಡಿ ಟು ಈಟ್ ಉತ್ಪನ್ನಕ್ಕೆ ಇಲ್ಲಿ ಬೇಡಿಕೆ ಹೆಚ್ಚುತ್ತಿದೆ" ಎಂದು ತಿಳಿಸಿದರು. ಇನ್ನು ಕಂಪನಿಯ ಪ್ರಕಾರ, 2021 ಮತ್ತು 2026ರ ನಡುವೆ ಭಾರತದಲ್ಲಿ ರೆಡಿ ಟು ಈಟ್ ಆಹಾರ ಮಾರಾಟ ಪ್ರಮಾಣ ಶೇಕಡಾ 45ರಷ್ಟು ಹೆಚ್ಚಲಿದೆ.
ಜೀವನ ಶೈಲಿಯಲ್ಲಿನ ಬದಲಾವಣೆ, ನಗರೀಕರಣ, ಆದಾಯದಲ್ಲಿನ ಏರಿಕೆ ಈ ಎಲ್ಲಾಅಂಶಗಳ ಹಿನ್ನೆಲೆ 2028ರ ವೇಳೆಗೆ 81 ಮಿಲಿಯನ್ಗಿಂತಲೂ ಹೆಚ್ಚು ಭಾರತೀಯರು ಸಿದ್ಧ ಆಹಾರ ಸೇವಿಸುವ ನಿರೀಕ್ಷೆ ಇದೆ. ಕಂಪನಿಯು 230 ಸಿಬ್ಬಂದಿ ನೇಮಕ ಮಾಡಿಕೊಂಡಿದೆ. ಇನ್ನು ಹೆಚ್ಚಿನವರು ವಿಮಾನ ನಿಲ್ದಾಣದ ಸುತ್ತಲಿನ ಪ್ರದೇಶದವರು ಆಗಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ!










Click it and Unblock the Notifications