ಕೆಂಪೇಗೌಡ ಏರ್ಪೋರ್ಟ್ನ ಮೊದಲ ರನ್ವೇ 8 ತಿಂಗಳು ಬಂದ್
ಬೆಂಗಳೂರು, ಫೆಬ್ರವರಿ 5: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ರನ್ವೇ ಎಂಟು ತಿಂಗಳುಗಳ ಕಾಲ ಸ್ಥಗಿತಗೊಳ್ಳಲಿದೆ.
ರನ್ ವೇ (09ಎಲ್/27ಆರ್)ಯನ್ನು ಮೇಲ್ದರ್ಜೆಗೇರಿಸಲಾಗುತ್ತಿದ್ದು, ಮಾರ್ಚ್ 26ರಿಂದ ನವೆಂಬರ್ವರೆಗೆ ರನ್ವೇ ಬಂದ್ ಆಗಿರಲಿದೆ.ಈ ಅವಧಿಯಲ್ಲಿಇತ್ತೀಚೆಗೆ ಕಾರ್ಯಾರಂಭಗೊಂಡಿರುವ ನೂತನ ರನ್ವೇ '09ಆರ್/27 ಎಲ್' ಲಭ್ಯವಿರುತ್ತದೆ. ರನ್ವೇ ಕಾಮಗಾರಿಯಿಂದ ವಿಮಾನಗಳ ಹಾರಾಟ, ನಿಲ್ದಾಣದ ಕಾರ್ಯಾಚರಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
ಆಂತರಿಕವಾಗಿ ಪಾರ್ಕಿಂಗ್, ಟ್ಯಾಕ್ಸಿಂಗ್ ಸೇರಿದಂತೆ ಇನ್ನಿತರ ವ್ಯವಸ್ಥೆಯಲ್ಲಿ ಬದಲಾವಣೆಯಾಗಲಿದೆ. ಕಾಮಗಾರಿ ಹಿನ್ನೆಲೆಯಲ್ಲಿ ನಿಲ್ದಾಣವು ಅಗತ್ಯ ಸಿದ್ಧತೆಗಳನ್ನು ನಿಯಮಾನುಸಾರ ಮಾಡಿಕೊಳ್ಳುವ ಕುರಿತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ದೇಶನ ನೀಡಿದೆ.

'09ಎಲ್/27ಆರ್' ರನ್ವೇ ಅನ್ನು ಗೋಚರತೆ ಕಮ್ಮಿ ಇರುವ ಸಂದರ್ಭದಲ್ಲಿ ವಿಮಾನಗಳ ಲ್ಯಾಂಡಿಂಗ್ ಮತ್ತು ಟೇಕಾಫ್ಗೆ ನೆರವಾಗುವ ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್ (ಐಲ್ಎಸ್) ಕೆಟಗೆರಿ 1ರಿಂದ ಕೆಟಗೆರಿ 3ನೇ ದರ್ಜೆಗೆ ಏರಿಸಲಾಗುತ್ತದೆ. ನೂತನ ರನ್ವೇ ಐಎಲ್ಎಸ್ ಕೆಟಗೆರಿ 3 ಪ್ರಮಾಣಪತ್ರ ಹೊಂದಿದೆ.
ಈ ರನ್ ವೇಯನ್ನು 2008 ನಿರ್ಮಿಸಲಾಗಿತ್ತು. ಈ ಪ್ರದೇಶದಲ್ಲಿ ವಿಮಾನಗಳ ಕಾರ್ಯಾಚರಣೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ.ಇತ್ತೀಚೆಗಷ್ಟೇ ಎರಡನೇ ರನ್ವೇಯನ್ನು ಹೊಸದಾಗಿ ನಿರ್ಮಾಣ ಮಾಡಲಾಗಿದ್ದು, ವಿಮಾನಗಳು ಅಲ್ಲಿಂದಲೇ ಕಾರ್ಯಾಚರಣೆಗೊಳ್ಳಲಿದೆ.
-
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.












Click it and Unblock the Notifications