ಬೆಂಗಳೂರು ಏರ್ ಪೋರ್ಟ್ ಪ್ರಯಾಣಿಕರಿಗೆ ಸಿಹಿಸುದ್ದಿ
ಬೆಂಗಳೂರು, ನವೆಂಬರ್ 24 : ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಸಿಹಿಸುದ್ದಿ. ದಟ್ಟವಾದ ಮಂಜು, ಹವಾಮಾನ ವೈಫರಿತ್ಯ ಇದ್ದರೂ ಸಹ ಇನ್ನು ಮುಂದೆ ವಿಮಾನ ನಿಲ್ದಾಣದಿಂದ ಪ್ರಯಾಣ ಮಾಡಬಹುದು. ಸಂಚಾರ ರದ್ದು, ವಿಳಂಬವಾಗುವುದಿಲ್ಲ.
ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಇದು ಹೊಸ ವರ್ಷದ ಕೊಡುಗೆಯಾಗಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ವಿಮಾನ ನಿಲ್ದಾಣದ ದಕ್ಷಿಣ ರನ್ ವೇ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದೆ.
ಡಿಸೆಂಬರ್ 31ರಿಂದ ದಕ್ಷಿಣ ರನ್ ವೇ ಕಾರ್ಯಾಚರಣೆಯನ್ನು ಆರಂಭಿಸಲಿದ್ದು, ಸಿಎಟಿ 3ಬಿ ಕಾರ್ಯಾಚರಣೆಗೆ ಸಹ ಸಿದ್ಧವಾಗಲಿದೆ. ಈ ರನ್ ವೇಯಲ್ಲಿ ದಟ್ಟವಾದ ಮಂಜು, ಹವಾಮಾನ ವೈಫರಿತ್ಯದ ಸಂದರ್ಭದಲ್ಲಿಯೂ ವಿಮಾನ ಟೇಕಾಫ್ ಮತ್ತು ಲ್ಯಾಂಡ್ ಮಾಡಬಹುದಾಗಿದೆ.

ರನ್ ವೇ ಸಿಗ್ನಲ್ ವ್ಯವಸ್ಥೆ ಕಾರ್ಯಾಚರಣೆಯ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಂತಹ ಸಂದರ್ಭದಲ್ಲಿ ವಿಮಾನ ಕಾರ್ಯಾಚರಣೆ ನಡೆಸುವಾಗ ಅನುಭವಿ ಪೈಲೆಟ್ ಬಳಕೆ ಮಾಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಕಳೆದ ವರ್ಷ ಆರಂಭಿಸಿದ ದಕ್ಷಿಣ ರನ್ ವೇ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಮಾರ್ಚ್ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದಾಗ ಕೆಲವು ವಿಶೇಷ ವಿಮಾನಗಳನ್ನು ಈ ರನ್ ವೇನಲ್ಲಿಯೇ ಇಳಿಸಲಾಗಿದೆ. ಡಿಸೆಂಬರ್ನಲ್ಲಿ ಅಧಿಕೃತವಾಗಿ ರನ್ ವೇ ಸಂಚಾರಕ್ಕೆ ಮುಕ್ತವಾಗಲಿದೆ.
ನವೆಂಬರ್ 15 ರಿಂದ ಫೆಬ್ರವರಿ 15ರ ತನಕ ಬೆಂಗಳೂರು ವಿಮಾನ ನಿಲ್ದಾಣ ಭಾಗದಲ್ಲಿ ದಟ್ಟವಾದ ಮಂಜು ಕವಿದಿರುತ್ತದೆ. ಆಗ ವಿಮಾನಗಳ ಹಾರಾಟ ರದ್ದು, ವಿಳಂಬವಾಗುತ್ತದೆ.
ಕರ್ನಾಟಕದಲ್ಲಿಯೇ ಅತಿ ಹೆಚ್ಚು ಪ್ರಯಾಣಿಕರು ಆಗಮಿಸುವ ವಿಮಾನ ನಿಲ್ದಾಣ ಬೆಂಗಳೂರು ಆಗಿದೆ. 2020ರ ಏಪ್ರಿಲ್ನಿಂದ ಅಕ್ಟೋಬರ್ ತನಕ 42,122 ವಿಮಾನಗಳು ಆಗಮಿಸಿದ್ದು, 35,47,644 ಪ್ರಯಾಣಿಕರು ಆಗಮಿಸಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿಯೇ 11,770 ವಿಮಾನಗಳು ಆಗಮಿಸಿವೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications