ಕೆಂಪೇಗೌಡ ಬಡಾವಣೆ ಕಾಮಗಾರಿ 15 ದಿನಗಳಲ್ಲಿ ಆರಂಭಿಸಬೇಕು: ಎಸ್ಆರ್ ವಿಶ್ವನಾಥ್ ಸೂಚನೆ
ಬೆಂಗಳೂರು, ನ.4: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ವಿಳಂಬವಾಗಿದ್ದು, 15 ದಿನಗಳಲ್ಲಿ ಕಾಮಗಾರಿ ಆರಂಭಿಸಬೇಕು ಎಂದು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಸೂಚನೆ ನೀಡಿದ್ದಾರೆ.
ಶುಕ್ರವಾರ ಅವರು ಬಿಡಿಎ ಉನ್ನತಾಧಿಕಾರಿಗಳೊಂದಿಗೆ ಬಡಾವಣೆಯ ಕಾಮಗಾರಿ ಪರಿಶೀಲನೆ ನಡೆಸಿ ಯಾವುದೇ ಕಾರಣಕ್ಕೂ ಬಡಾವಣೆ ಕಾಮಗಾರಿ ವಿಳಂಬವಾಗಬಾರದು ಎಂದು ಎಚ್ಚರಿಸಿದರು.
ಬಡಾವಣೆಯ ವಿವಿಧೆಡೆಯಲ್ಲಿ ನಿವೇಶನ ಅಭಿವೃದ್ಧಿ, ರಸ್ತೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳದ ಗುತ್ತಿಗೆದಾರರನ್ನು ಇದೇ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡರು.

ಕಾಮಗಾರಿ ಆರಂಭಿಸಲು ಸೂಚನೆ
ಬಿಡಿಎ ಭೂಮಿಯನ್ನು ನೀಡಿದ್ದರೂ ಕಾಮಗಾರಿಯನ್ನು ಕೈಗೊಳ್ಳುವಲ್ಲಿ ಗುತ್ತಿಗೆದಾರರು ವಿಫಲರಾಗಿದ್ದಾರೆ. ಯಂತ್ರೋಪಕರಣಗಳನ್ನು ಬಳಸಿ ಕೂಡಲೇ ಕಾಮಗಾರಿಗಳನ್ನು ಕೈಗೊಳ್ಳಬೇಕು. ಇದರ ಜವಾಬ್ದಾರಿಯನ್ನು ಸಂಬಂಧಿಸಿದ ಎಂಜಿನಿಯರ್ ಗಳು ವಹಿಸಿಕೊಳ್ಳಬೇಕು. ಇದಕ್ಕೆ ವಿಫಲರಾದರೆ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಯಾವುದೇ ಕಾರಣಕ್ಕೂ ಮುಖ್ಯ ಗುತ್ತಿಗೆದಾರರು ತಮಗೆ ವಹಿಸಿರುವ ಕಾಮಗಾರಿಯನ್ನು ಉಪಗುತ್ತಿಗೆ ನೀಡುವುದು ಕಂಡು ಬಂದರೆ ಇಡೀ ಗುತ್ತಿಗೆಯನ್ನೇ ರದ್ದು ಮಾಡಲಾಗುತ್ತದೆ ಎಂದೂ ಎಚ್ಚರಿಸಿದರು.
15 ದಿನದಲ್ಲಿ ಮತ್ತೆ ಭೇಟಿ
ಸ್ಥಗಿತಗೊಂಡಿರುವ ಕಾಮಗಾರಿಗಳನ್ನು 15 ದಿನಗಳೊಳಗೆ ಆರಂಭಿಸಬೇಕು ಎಂದು ಗಡುವು ವಿಧಿಸಿದ ಬಿಡಿಎ ಅಧ್ಯಕ್ಷರು, ಎರಡು ವಾರಗಳ ನಂತರ ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಲಾಗುವುದು. ಆಗಲೂ ಲೋಪಗಳು ಕಂಡು ಬಂದರೆ ಸ್ಥಳದಲ್ಲಿಯೇ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದರು.

ಇದೇ ವೇಳೆ, ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿರುವ ರೈತರೊಂದಿಗೆ ಎಸ್.ಆರ್.ವಿಶ್ವನಾಥ್ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು, ಜಮೀನುಗಳನ್ನು ನೀಡಿರುವ ರೈತರಿಗೆ ನೀಡಬೇಕಿರುವ ನಿವೇಶನಗಳು ಮತ್ತು ಪರಿಹಾರಗಳನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬಾಕಿ ಇರುವ ರೈತರ ಅರ್ಜಿಗಳ ವಿಲೇವಾರಿಗೆ ಒಂದು ವಾರದಲ್ಲಿ ಕಡತಯಜ್ಞ ನಡೆಸಬೆಕು. ನಿಯಮಬದ್ಧವಾಗಿರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅವರು ಹೇಳಿದರು.
ಪಾರ್ಶ್ವವಾಯು ಪೀಡಿತ ರೈತಗೆ ಕೂಡಲೇ ನಿವೇಶನ
ಬಡಾವಣೆ ನಿರ್ಮಾಣಕ್ಕೆಂದು ಜಮೀನು ನೀಡಿದ ರೈತರೊಬ್ಬರು ಪಾರ್ಶ್ವವಾಯು ಪೀಡಿತರಾಗಿದ್ದಾರೆ ಎಂಬ ವಿಚಾರವನ್ನು ರೈತ ಮುಖಂಡರು ಅಧ್ಯಕ್ಷರ ಗಮನಕ್ಕೆ ತಂದರು.
ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಅವರು, ಸೋಮವಾರದೊಳಗೆ ಅವರಿಗೆ ಅಲಾಟ್ ಮಾಡಿರುವ ನಿವೇಶನಗಳನ್ನು ನೋಂದಣಿ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಡಿಎ ಹಿರಿಯ ಅಧಿಕಾರಿಗಳಾದ ಶಾಂತರಾಜಣ್ಣ, ಶಾಂತರಾಜು, ನಂಜುಂಡೇಗೌಡ, ರವಿಕುಮಾರ್, ಡಾ.ಸೌಜನ್ಯ, ಡಾ.ಬಸಂತಿ ಸೇರಿದಂತೆ ಮತ್ತಿತರರು ಇದ್ದರು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications