ಕನ್ನಡ ಯುವತಿ ಮೇಲೆ ಕೇರಳ ಯುವತಿ ಹಲ್ಲೆ: ಎಫ್ಐಆರ್ ದಾಖಲು
ಬೆಂಗಳೂರು, ಜನವರಿ 13: ಬೆಂಗಳೂರಿನಲ್ಲಿ ಅನ್ಯ ಭಾಷಿಗರ ಉಪಟಳ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಕನ್ನಡಿಗರ ಸೌಮ್ಯಗುಣವನ್ನು ದುರುಪಯೋಗಪಡಿಸಿಕೊಂಡು ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಳ್ಳಬರುವ ಅನ್ಯ ಭಾಷಿಗರಿಂದ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದೀಗ ಕನ್ನಡಿಗರ ಮೇಲೆ ಹಲ್ಲೆಗಳಂತ ಸುದ್ದಿಗಳು ಕೇಳಿಬರುತ್ತಿವೆ.
ಒಂದೇ ಲೇಡಿಸ್ ಪಿಜಿಯಲ್ಲಿ ರೂಮ್ಮೇಟ್ಗಳಾಗಿದ್ದ ಕನ್ನಡ ಹಾಗೂ ಕೇರಳ ಯುವತಿಯರ ಮಧ್ಯೆ ಜಗಳ ಉಂಟಾಗಿ ಕನ್ನಡ ಯುವತಿಯ ಮೇಲೆ ನನಗೆ ಕನ್ನಡ ಅರ್ಥವಾಗುವುದಿಲ್ಲ. ನೀನು ಕನ್ನಡದಲ್ಲಿ ನನ್ನ ಮುಂದೆ ಮಾತನಾಡಬೇಡ ಎಂದು ಕೇರಳದ ಯುವತಿಯೊಬ್ಬಳು ಕನ್ನಡದ ಯುವತಿಯ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಿಟಿಎಂ ಲೇಔಟ್ನ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ವೈದ್ಯಯಾಗಿರುವ ಕನ್ನಡತಿ ಸೃಷ್ಟಿ ಬಿಟಿಎಂ ಲೇಔಟಿನ ಪಿಜಿಯೊಂದರಲ್ಲಿ ವಾಸವಿದ್ದರು. ಇದೇ ಪಿಜಿಯಲ್ಲಿ ಅವರಿಗೆ ರೂಮ್ಮೇಟ್ ಆಗಿದ್ದ ಕೇರಳ ಮೂಲದ ಅಸ್ಸೇಲಾ ಎಂಬ ಯುವತಿ ಕನ್ನಡತಿ ಸೃಷ್ಟಿ ಎಂಬಾಕೆಯ ಮೇಲೆ ನೀನು ನನ್ನ ಮುಂದೆ ಪೋನ್ನಲ್ಲಿ ಕನ್ನಡದಲ್ಲಿ ಮಾತನಾಡಬೇಡ. ಕನ್ನಡ ನನಗೆ ಅರ್ಥವಾಗದ ಭಾಷೆ ಎಂದು ತಗಾದೆ ತೆಗೆದಳು.

ನೀನು ನನ್ನ ಮುಂದೆ ಇಂಗ್ಲಿಷ್ನಲ್ಲೇ ಮಾತನಾಡು ಎಂದು ಬೈದು ಬೆದರಿಕೆ ಹಾಕಿದ್ದಳು. ಇದಕ್ಕೆ ಕನ್ನಡ ಯುವತಿ ಸೃಷ್ಟಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ತಲೆಗೆ ಬಲವಾಗಿ ಹೊಡೆದಳು. ಇದರ ಪರಿಣಾಮವಾಗಿ ತಲೆಗೆ ಬಲವಾದ ಪೆಟ್ಟು ಬಿದ್ದಿತು. ಇದರಿಂದ ಸೃಷ್ಟಿಯ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿತು. ಬಳಿಕ ಸಿಟಿ ಸ್ಕ್ಯಾನಿಂಗ್ ನಿಮಾನ್ಸ್ ಆಸ್ಪತ್ರೆಗೆ ಹೋಗುವಂತೆ ಸೂಚನೆ ನೀಡಲಾಯಿತು ಎಂದು ತಿಳಿದು ಬಂದಿದೆ.
ಕಳೆದ 2 ವರ್ಷಗಳಿಂದಲೂ ಒಂದೇ ಪಿಜಿಯಲ್ಲಿ ರೂಮ್ಮೇಟ್ಗಳಾಗಿದ್ದ ಅವರಿಬ್ಬರ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿದ್ದವು ಎಂದು ತಿಳಿದು ಬಂದಿದೆ. ಅಲ್ಲದೆ ಆಗಾಗ ಸಣ್ಣಪುಟ್ಟ ವಿಚಾರಗಳಿಗೆ ಮನಸ್ತಾಪ ಉಂಟಾಗಿ ಜಗಳು ಉಂಟಾಗುತ್ತಿದ್ದವು. ಆದರೆ ಗುರುವಾರ ಕನ್ನಡ ಭಾಷೆ ವಿಷಯಕ್ಕೆ ಕೇರಳ ಯುವತಿ ತಗಾದೆ ತೆಗೆದು ಕನ್ನಡ ಯುವತಿಯನ್ನು ಅವಮಾನಿಸಿದ್ದಲ್ಲದೆ ತೀರಾ ಕಟ್ಟದಾಗಿ ಮಾತನಾಡಿ ಪರಿಸ್ಥಿತಿ ಬಿಗಡಾಯಿಸಿತು. ಕನ್ನಡ ಯುವತಿ ಮೇಲೆ ಆಕೆ ಹಲ್ಲೆ ಮಾಡಿದಳು.
ಇದಾದ ಬಳಿಕ ಪಿಜಿ ಮಾಲೀಕರು ಕೇರಳ ಮೂಲದ ಅಸ್ಸೇಲಾ ಎಂಬ ಯುವತಿಯನ್ನು ಹೊರ ಕಳಿಸಿದರು. ಘಟನೆ ಬಳಿಕ ಕೇರಳ ಯುವತಿ ಮೇಲೆ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications