ಬೆಂಗಳೂರಿನಲ್ಲಿ ಕೇರಳದ ಯುವತಿ ಮೇಲೆ ಅತ್ಯಾಚಾರ, ಆರೋಪಿಗಳ ಬಂಧನ
ಬೆಂಗಳೂರು, ನ. 29: ಕೇರಳ ಮೂಲದ 22 ವರ್ಷದ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಮೊಬೈಲ್ ಆಪ್ ಆಧಾರಿತ ರ್ಯಾಪಿಡೋ ಬೈಕ್ ಚಾಲಕ ಮತ್ತು ಆತನ ಸಹಚರರನ್ನು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಕಳೆದ ಶುಕ್ರವಾರ ರಾತ್ರಿ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ರ್ಯಾಪಿಡೋ ಬೈಕ್ ಚಾಲಕ 26 ವರ್ಷದ ಶಹಾಬುದ್ದೀನ್ ಮತ್ತು ಆತನ ಸಹಚರ 24 ವರ್ಷದ ಅಖ್ತರ್ ಎಂಬುವರನ್ನು ಬಂಧಿಸಲಾಗಿದ್ದು, ಘಟನೆಗೆ ಸಹಕರಿಸಿದ್ದ, ವಿಷಯ ಮುಚ್ಚಿಟ್ಟ ಅವರ ಸ್ನೇಹಿತೆಯನ್ನು ಬಂಧಿಸಲಾಗಿದೆ.
ಬಿಟಿಎಂ ಲೇಔಟ್ನಲ್ಲಿ ತನ್ನ ಸ್ನೇಹಿತರ ಮನೆಯಲ್ಲಿ ಪಾರ್ಟಿ ಮುಗಿಸಿಕೊಂಡು ಎಲೆಕ್ಟ್ರಾನಿಕ್ಸ್ ಸಿಟಿ ಬಳಿ ಇರುವ ನೀಲಾದ್ರಿ ನಗರಕ್ಕೆ ಸಂತ್ರಸ್ತ ಯುವತಿ ರ್ಯಾಪಿಡೋ ಬುಕ್ ಮಾಡಿದ್ದರು. ಈ ವೇಳೆ ಆಕೆ ಪಾನಮತ್ತಳಾಗಿರುವುದನ್ನು ಗಮನಿಸಿದ ಚಾಲಕ, ಆಕೆಯನ್ನು ಮನೆಗೆ ಬಿಡದೇ ತನ್ನ ರೂಮ್ಗೆ ಎಳೆದುಕೊಂಡು ಹೋಗಿದ್ದಾನೆ. ಅಲ್ಲಿ ಆತ ತನ್ನ ಸ್ನೇಹಿತನನ್ನು ಕರೆದುಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ನಡೆದಾಗ ರೂಮ್ನಲ್ಲಿ ಮತ್ತೊಬ್ಬ ಯುವತಿ ಇದ್ದರು. ಆದರೆ, ಆಕೆ ಕೃತ್ಯವನ್ನು ನೊಡುತ್ತಾ ಸುಮ್ಮನಿದ್ದರು ಎನ್ನಲಾಗಿದೆ. ಮರುದಿನ ಬೆಳಗ್ಗೆ ಸಂತ್ರಸ್ತ ಯುವತಿಗೆ ಪ್ರಜ್ಞೆ ಬಂದಾಗ, ಆಕೆಯ ಮೇಲಾಗಿರುವ ಅತ್ಯಾಚಾರ ಮತ್ತು ವಿಪರೀತ ನೋವಿನಿಂದ ಬಳಲುತ್ತಿರುವುದು ಗಮನಕ್ಕೆ ಬಂದಿದೆ. ಹತ್ತಿರದ ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲಿ ವೈದ್ಯರು ಆಕೆಯನ್ನು ಪರೀಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಯುವತಿಯ ದೂರಿನ ಆಧಾರದ ಇಬ್ಬರು ಯುವಕರು ಮತ್ತು ಒಬ್ಬ ಯುವತಿಯನ್ನು ಬಂಧಿಸಲಾಗಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications