ಕೆಜಿಎಫ್ 2 ಚಿತ್ರಕ್ಕೆ ನಿರಾಳ ನೀಡಿದ ಹೈಕೋರ್ಟ್ ಆದೇಶ
Recommended Video
ಬೆಂಗಳೂರು, ಸೆಪ್ಟೆಂಬರ್ 27: ಬಹುನಿರೀಕ್ಷಿತ ಕೆಜಿಎಫ್ 2 ಚಿತ್ರತಂಡಕ್ಕೆ ನಿರಾಳ ಭಾವ ನೀಡಿದೆ ಹೈಕೋರ್ಟ್ ಆದೇಶ.
ಕೆಜಿಎಫ್ 2 ಚಿತ್ರವನ್ನು ಕೋಲಾರದ ಕೆಜಿಎಫ್ ನಲ್ಲಿ ಚಿತ್ರೀಕರಿಸದಂತೆ ಅರ್ಜಿಯೊಂದು ದಾಖಲಾಗಿತ್ತು. ವಿಚಾರಣೆ ನಡೆಸಿದ ಅಧೀನ ನ್ಯಾಯಾಲಯವು ಚಿತ್ರೀಕರಣಕ್ಕೆ ತಡೆ ನೀಡಿತ್ತು. ಇದು ಚಿತ್ರತಂಡಕ್ಕೆ ಭಾರಿ ಹಿನ್ನಡೆ ಆಗಿತ್ತು.
ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕೆಜಿಎಫ್ 2 ಚಿತ್ರ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಧೀನ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ. ಹೈಕೋರ್ಟ್ ಆದೇಶದಂತೆ ಕೆಜಿಎಫ್ 2 ಚಿತ್ರತಂಡವು ಕೆಜಿಎಫ್ ನಲ್ಲಿ ಚಿತ್ರೀಕರಣ ನಡೆಸಬಹುದಾಗಿದೆ.

ಕೆಜಿಎಫ್ನ ಸಂರಕ್ಷಿತ ಸೈನೇಡ್ ದಿಬ್ಬದ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಿ ಪರಿಸರ ಹಾಳು ಮಾಡುತ್ತಿದ್ದಾರೆ ಎಂದು ಕೆಜಿಎಫ್ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ ಎನ್ ಶ್ರೀನಿವಾಸ್ ಎಂಬುವರು ನ್ಯಾಯಾಲಯ ಮೋರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರದ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿ ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ಈಗ ಆದೇಶಕ್ಕೆ ತಡೆ ನೀಡಲಾಗಿದೆ.
ಚಿತ್ರೀಕರಣದ ವೇಳೆ ಸ್ಥಳದಲ್ಲಿ ಪರಿಸರಕ್ಕೆ ಯಾವುದೇ ರೀತಿಯಲ್ಲಿ ಹಾನಿ ಮಾಡುವುದಿಲ್ಲ, 25 ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಸ್ಥಳ ಖಾಲಿ ಮಾಡುತ್ತೇವೆ ಎಂದು ನ್ಯಾಯಪೀಠಕ್ಕೆ ನಿರ್ಮಾಪಕರು ವಾಗ್ದಾನ ನೀಡಿದ ಬಳಿಕವಷ್ಟೆ ಚಿತ್ರೀಕರಣಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಕೆಜಿಎಫ್ ಚಿತ್ರೀಕರಣ ಕೆಜಿಎಫ್ನ ಸೈನೈಡ್ ದಿಬ್ಬದಲ್ಲಿ ನಡೆದಿತ್ತು. ಕೆಜಿಎಫ್ 2 ಚಿತ್ರೀಕರಣವೂ ಸಹ ಇದೇ ಸ್ಥಳದಲ್ಲಿ ಚಿತ್ರೀಕರಣ ಆಗುವುದಿತ್ತು. ಆದರೆ ನ್ಯಾಯಾಲಯದ ಆದೇಶದಿಂದ ಚಿತ್ರೀಕರಣ ತಂಡ ಕಾಯುವಂತಾಗಿತ್ತು.
ಪ್ರಸ್ತುತ ಕೆಜಿಎಫ್ 2 ಚಿತ್ರೀಕರಣವು ಮುಂಬೈನಲ್ಲಿ ನಡೆಯುತ್ತಿದ್ದು, ಚಿತ್ರದ ಖಳನಾಯಕ ಪಾತ್ರಧಾರಿ ಬಾಲಿವುಡ್ನ ಸಂಜಯ್ ದತ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
-
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications