ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಸಲ್ ಭೀಮಾ ಯೋಜನೆ ಸಂಪೂರ್ಣ ವಿಫಲ: ಕೇಂದ್ರದ ವಿರುದ್ಧ ಖಂಡ್ರೆ ಕಿಡಿ

By Nayana
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 4: ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ, ಈ ಯೋಜನೆ ಕೇವಲ ಖಾಸಗಿ ವಿಮಾ ಸಂಸ್ಥೆಗಳಿಗೆ ಸಹಾಯವಾಗುತ್ತಿದೆ, ಈ ಬಗ್ಗೆ ಕೂಡಲೇ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಕರ್ನಾಟಕದ ರೈತರಿಗೆ ವರದಾನವಾದ ಫಸಲ್ ಭೀಮಾ ಕರ್ನಾಟಕದ ರೈತರಿಗೆ ವರದಾನವಾದ ಫಸಲ್ ಭೀಮಾ

ರೈತರ ಹೆಸರಿನಲ್ಲಿ ಖಾಸಗಿ ವಿಮಾ ಕಂಪನಿಗಳಿಂದ ಮೋಸ ಮಾಡಲಾಗುತ್ತಿದೆ.ರೈತರು ಕಷ್ಟ ಅನುಭವಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಕೇವಲ ಭಾಷಣಕ್ಕೆ ಸೀಮಿತವಾಗಿದ್ದಾರೆ, 2018-19ನೇ ಸಾಲಿನ ಬಜೆಟ್ ನಲ್ಲಿ 13ಸಾವಿರ ಕೋಟಿ ನೀಡಲಾಗಿದೆ. ಆದರೆ ಇದರಲ್ಲಿ 10-15ಸಾವಿರ ಕೋಟಿ ಲಾಭವಾಗುತ್ತಿದೆ. ಆದರೆ ರೈತರಿಗೆ ಇದರಿಂದ ಯಾವುದೇ ಲಾಭವಿಲ್ಲ ಎಂದರು.

Khandre criticizes crop insurance scheme is a failure one

ಅನ್ನದಾತನ ಕೈಹಿಡಿದಿರುವ ಮಹತ್ವಾಕಾಂಕ್ಷಿ ಯೋಜನೆಗಳು ಅನ್ನದಾತನ ಕೈಹಿಡಿದಿರುವ ಮಹತ್ವಾಕಾಂಕ್ಷಿ ಯೋಜನೆಗಳು

1999-2000ರಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಮೆ ಯೋಜನೆ ಜಾರಿಗೆ ತಂದಿತ್ತು. 2016ರಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತಂದಿತು. ಆದರೂ ಈ ಯೋಜನೆಯ ಪಾಲ್ಗೊಳ್ಳ್ಳುವಿಕೆ ನಿರೀಕ್ಷಿತ ಮಟ್ಟ ತಲುಪಿಲ್ಲ. ರೈತರು ಬೆಳೆ ವಿಮೆ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ.

English summary
KPCC working president Eshwar Khandre has criticized central government's crop insurance scheme, Phasal Bima Yojana which was failed to ensure returns to the farmers on their crop loss.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X