ಯಡಿಯೂರಪ್ಪ, ನಿರಾಣಿ ಕೊರಳಿಗೆ ಉರುಳಾದ ಡಿನೋಟಿಫಿಕೇಷನ್ ಕೇಸ್
ಬೆಂಗಳೂರು, ಸೆ. 30: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳ ಎಂಬುವರು ಸೋಮವಾರ(ಸೆ.30)ದಂದು ದೂರು ನೀಡಿದ್ದಾರೆ.
"2009ರಲ್ಲಿ ಬೆಂಗಳೂರಿನ ಹೊರ ವಲಯದ ಆನೇಕಲ್ ನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ)ಗೆ ಸೇರಿದ 9.20 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪವನ್ನು ಅಂದಿನ ಕೈಗಾರಿಕಾ ಸಚಿವ ನಿರಾಣಿ, ಯಡಿಯೂರಪ್ಪ ಮೇಲೆ ಹೊರೆಸಲಾಗಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ನಷ್ಟವಾಗಿದೆ" ಎಂದು ದಿನೇಶ್ ಅವರು ತಮ್ಮ ದೂರಿನಲ್ಲಿ ಹೇಳಿದ್ದಾರೆ.
ಶ್ರೀರಾಂಪುರ, ಆರ್ ಎಂ ವಿ ಬಡಾವಣೆ ಹಾಗೂ ಕೆಂಪಾಪುರದಲ್ಲಿ ಕ್ರಮವಾಗಿ 11 ಎಕರೆ 25 ಗುಂಟೆ, ನಾಗರಬಾವಿಯಲ್ಲಿ 5 ಎಕರೆ 13 ಗುಂಟೆ ಜಾಗವನ್ನು ಯಡಿಯೂರಪ್ಪ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಎಸ್ವೈ ವಿರುದ್ಧ ಪ್ರಕರಣಗಳು ದಾಖಲಾಗಿತ್ತು. ಬೆಂಗಳೂರಿನ ದೇವನಹಳ್ಳಿಯಲ್ಲಿ ಕೆಐಎಡಿಬಿ ಮೂಲಕ ನಕಲಿ ದಾಖಲೆ ಸೃಷ್ಟಿಸಿ 26 ಎಕರೆ ಭೂಮಿಯನ್ನು ತಮ್ಮ ಕಂಪನಿಗೆ ನಿರಾಣಿ ಪಡೆದಿದ್ದಾರೆ. ಇದಕ್ಕೂ ಮೊದಲು 26 ಎಕರೆ ಭೂಮಿಯನ್ನು ಹಾರ್ಡ್ವೇರ್ ಪಾರ್ಕ್ಗಾಗಿ ಮೀಸಲಿಡಲಾಗಿತ್ತು ಎಂಬ ಕೂಡಾ ಈ ಹಿಂದೆ ದೂರುಗಳು ಕೇಳಿ ಬಂದಿದ್ದವು.

ಎಚ್ ಆರ್ ನಿರಾಣಿ, ಶರಣ ಬಸಯ್ಯ, ಕರಿಯಣ್ನನವರ್, ಬೇಗೂರು ರುದ್ರಮೂರ್ತಿ,ಪೂರ್ಣಚಂದ್ರ, ಆರ್ ವಿ ವಡ್ನಾಳ್, ಶಾಂತ ಸುಬೀರ ಬೇಲೂರು, ಮೋಹನ್ ಎಂ, ಹೀರೇಮಠ ಮತ್ತು ಎಂ ರೋಷಯ್ಯ ಎಂಬುವರ ಮೇಲೆ ಆರೋಪವನ್ನು ಹೊರೆಸಲಾಗಿತ್ತು. ಕೈಗಾರಿಕಾ ಉದ್ದೇಶಕ್ಕಾಗಿ ಕೆಐಎಡಿಬಿ ಮೂಲಕ ರಾಜ್ಯದ ವಿವಿಧ ಪ್ರದೇಶದಲ್ಲಿ ವಶಪಡಿಸಿಕೊಂಡಿದ್ದ 1, 690ಕ್ಕೂ ಹೆಚ್ಚು ಎಕರೆ ಭೂಮಿಯನ್ನು ತಮ್ಮ ಕುಟಂಬ ಸದಸ್ಯರ ಮತ್ತು ಆಪ್ತರ ಒಡೆತನದ ಕಂಪೆನಿಗಳಿಗೆ ನಿಯಮ ಬಾಹಿರವಾಗಿ ಮಂಜೂರು ಮಾಡಿದ್ದಾರೆ ಎಂದು ನಿರಾಣಿ ಅವರ ಮೇಲೆ ಆರೋಪವಿತ್ತು.
ಆದರೆ ಕೆಐಎಡಿಬಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿದ್ದ ಅಂದಿನ ಬೃಹತ್ ಕೈಗಾರಿಕಾ ಸಚಿವ ಮರುಗೇಶ್ ನಿರಾಣಿ ಅವರಿಗೆ ಲೋಕಾಯುಕ್ತ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರ ರಾವ್ ಅವರು ನಿರಾಣಿ ಮೇಲಿದ್ದ ಪ್ರಕರಣಗಳನ್ನು ವಜಾಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications