ಲಿಕ್ಕರ್ ಲೈಸನ್ಸ್ ವಿಚಾರದಲ್ಲಿ ಕೆಐಎಡಿಬಿ ಮೂಗು ತೂರಿಸೋ ಹಾಗಿಲ್ಲ!
ಬೆಂಗಳೂರು, ಸೆಪ್ಟೆಂಬರ್ 12: ಮದ್ಯದಂಗಡಿ ಪರವಾನಗಿಯ ನವೀಕರಣ ವಿಚಾರಗಳಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಮೂಗು ತೂರಿಸುವ ಹಾಗಿಲ್ಲ ಎಂದು ರಾಜ್ಯ ಹೈಕೋರ್ಟ್ ಸ್ಪಷ್ಟಪಡಿಸಿದೆ.
2015ರ ಜನವರಿ 31ರಂದು ರಾಜ್ಯ ಅಬಕಾರಿ ಕಮೀಷನರ್ ಅವರಿಗೆ ಪತ್ರ ಬರೆದಿದ್ದ ಕೆಐಎಡಿಬಿ, ಮೈಸೂರಿನಲ್ಲಿರುವ ಕೈಗಾರಿಕಾ ಪ್ರದೇಶಗಳಲ್ಲಿ ನಡೆಸಲಾಗುವ ಬಾರ್ ಹಾಗೂ ರೆಸ್ಟೋರೆಂಟ್ ಗಳ ಪರವಾನಗಿಯನ್ನು ನವೀಕರಿಸದಂತೆ ಪತ್ರ ಬರೆದಿತ್ತು.

ಇದರ ಪರಿಣಾಮವಾಗಿ, 2016-17ರ ಅವಧಿಗೆ ಈ ಹೋಟೆಲ್ ಗಳ ಪರವಾನಗಿ ನವೀಕರಣಕ್ಕೆ ಅಬಕಾರಿ ಇಲಾಖೆ ತಡೆ ಹಾಕಲಾಗಿತ್ತು. ಇದರ ವಿರುದ್ಧ ಆ ಬಾರ್ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಆಗಿನಿಂದಲೂ ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಿತ್ತು.
ಸೋಮವಾರ, ಈ ಬಗ್ಗೆ ಸ್ಪಷ್ಟ ಆದೇಶ ನೀಡಿರುವ ಹೈಕೋರ್ಟ್, ಮದ್ಯದಂಗದಿ ಪರವಾನಗಿ ವಿಚಾರವಾಗಿ ಕೆಐಎಡಿಬಿಗೆ ಮೂಗು ತೂರಿಸುವ ಅಗತ್ಯತೆಯಿಲ್ಲ ಎಂದು ಹೇಳಿದೆ. ಅಲ್ಲದೆ, ಕೆಐಎಡಿಬಿಯಿಂದ ತೊಂದರೆಗೊಳಗಾಗಿರುವ 10 ಮದ್ಯದಂಗಡಿಗಳಿಕೆ ತಲಾ 5 ಸಾವಿರ ರು. ಮೊತ್ತವನ್ನು ದಂಡದ ರೂಪವಾಗಿ ನೀಡಬೇಕೆಂದು ಕೆಐಎಡಿಬಿಗೆ ಆದೇಶಿಸಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications