ಯುಕೆಯಿಂದ ಬಂದವರಿಗೆ ಕೊವಿಡ್ 19 ಪರೀಕ್ಷೆ ಮೂಲಕ ಸ್ವಾಗತ
ಬೆಂಗಳೂರು, ಜನವರಿ 10: ಭಾರತ ಮತ್ತು ಬ್ರಿಟನ್ ನಡುವಿನ ವಿಮಾನಗಳು ಇಂದು ಪುನರಾರಂಭಗೊಂಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಗಳು ಭಾನುವಾರ ಬೆಳಗ್ಗೆ ಯುಕೆನಿಂದ ಆಗಮಿಸಿದವರನ್ನು ಕೊವಿಡ್ 19 ಪರೀಕ್ಷೆ ಮೂಲಕ ಸ್ವಾಗತಿಸಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ RT-PCR ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಭಾನುವಾರ ಬೆಳಗ್ಗೆ ಬೆಳಗ್ಗೆ 4 ಗಂಟೆಗೆ ಯುಕೆ ಇಂದ ಮೊದಲ ವಿಮಾನ ಲ್ಯಾಂಡ್ ಆಗಿದ್ದು, ಸುಮಾರು 320 ಮಂದಿ ಪ್ರಯಾಣಿಕರು, ಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಯುಕೆನಿಂದ ಬರುವ ಪ್ರಯಾಣಿಕರು ಕೊವಿಡ್ 19 ನೆಗಟಿವ್ ರಿಪೋರ್ಟ್ ಹೊಂದಿದರೂ ಕೆಐಎಎಲ್ ಆವರಣದಲ್ಲಿ ಪರೀಕ್ಷೆ ಕಡ್ಡಾಯ ಎಂದು ಮಾರ್ಗಸೂಚಿ ಹೊರಡಿಸಲಾಗಿದೆ. ವಿಮಾನ ನಿಲ್ದಾಣದಲ್ಲೇ ಪರೀಕ್ಷೆಗೆ ಒಳಪಟ್ಟು ನೆಗಟಿವ್ ಎಂದು ವರದಿ ಬಂದ ನಂತರವೇ ಅವರನ್ನು ನಿಲ್ದಾಣದಿಂದ ಹೊರಕ್ಕೆ ಕಳಿಸಲಾಗುತ್ತಿದೆ. ಹೀಗೆ ನೆಗಟಿವ್ ಬಂದವರು ಮನೆಗೆ ತೆರಳಿದ ಬಳಿಕ ಕ್ವಾರಂಟೈನ್ ನಲ್ಲಿರಬೇಕಾಗುತ್ತದೆ. ಪರೀಕ್ಷಾ ವರದಿ ಬರಲು 5 ರಿಂದ 6 ಗಂಟೆ ಅವಧಿ ಬೇಕಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಡಿಎಚ್ಒ ಡಾ. ಮಂಜುಳಾ ದೇವಿ ಹೇಳಿದ್ದಾರೆ.

ಬೇರೆ ದೇಶಗಳಿಂದ ಬಂದವರಿಗೆ 72 ಗಂಟೆಗಳ ಅಂತರದಲ್ಲಿ ನೆಗಟಿವ್ ರಿಪೋರ್ಟ್ ಇರಬೇಕು. ಇಲ್ಲದಿದ್ದರೆ ಅವರನ್ನು ಪರೀಕ್ಷೆಗೊಳಪಡಿಸಲಾಗುವುದು. ಆರೋಗ್ಯ ಇಲಾಖೆ ಸಹಯೋಗದಲ್ಲಿ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ವ್ಯವಸ್ಥೆ ಮಾಡಲಾಗಿದೆ. ಪಾಸಿಟಿವ್ ವರದಿ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications