ಕಿಚ್ಚ ಸುದೀಪ್ ದಂಪತಿ ವಿರುದ್ಧ ಗರಂ ಆದ ಕೌಟುಂಬಿಕ ಕೋರ್ಟ್!
ವಿವಾಹ ವಿಚ್ಛೇದನ ಅರ್ಜಿ ವಿಚಾರಣೆಗೆ ಹಾಜರಾಗದ ಕಿಚ್ಚ ಸುದೀಪ್ ಹಾಗೂ ಪ್ರಿಯಾ ರಾಧಾಕೃಷ್ಣನ್ ವಿರುದ್ಧ ಕೌಟುಂಬಿಕ ನ್ಯಾಯಲಯ ಗರಂ ಆಗಿದೆ. ಮುಂದಿನ ವಿಚಾರಣೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ.
ಬೆಂಗಳೂರು, ಮಾರ್ಚ್ 09: 'ರಾಜಿ ಆಗಿದ್ರೆ ಅರ್ಜಿ ಹಿಂಪಡೆಯಿರಿ, ಕೋರ್ಟ್ ಸಮಯ ಏಕೆ ವ್ಯರ್ಥ ಮಾಡ್ತೀರಿ, ಜೂನ್ 14ರಂದು ಎಲ್ಲೇ ಇದ್ದರೂ ಇಬ್ಬರೂ(ಕಿಚ್ಚ ಸುದೀಪ್ ಹಾಗೂ ಪ್ರಿಯಾ ರಾಧಾಕೃಷ್ಣನ್) ಅವರು ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆ ಎದುರಿಸಬೇಕು' ಎಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಧೀಶರು ಗುರುವಾರ (ಮಾರ್ಚ್ 09) ದಂದು ಆದೇಶಿಸಿದ್ದಾರೆ.
ಕಿಚ್ಚ ಸುದೀಪ್ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿ, ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಳ್ಳುವುದಕ್ಕೆ ಸುದೀಪ್, ಪತ್ನಿ ಪ್ರಿಯಾ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರುವ ಸುದ್ದಿ 2015ರಿಂದ ನೀವು ಓದಿರುತ್ತಿರುತ್ತೀರಿ. [14 ವರ್ಷದ ಸುದೀಪ್ ದಾಂಪತ್ಯ ಜೀವನದಲ್ಲಿ ಬಿರುಗಾಳಿ: ಡೈವೋರ್ಸ್!]
ಡಿವೋರ್ಸ್ ಪಡೆಯುವುದಕ್ಕೆ ಅಸಲಿ ಕಾರಣ ಏನು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಒಟ್ಟಿಗೆ ಇರಲು ಮಾತ್ರ ಮಗಳು ಸಾನ್ವಿ ಮಾತ್ರ ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ.

ಇಬ್ಬರ ನಡುವೆ ರಾಜಿ ಸಂಧಾನವಾಗಿದೆ. ಮಗಳಿಗಾಗಿ ಇಬ್ಬರು ಒಟ್ಟಿಗೆ ವಾಸಿಸಲು ಅಥವಾ ವಿಚ್ಛೇದನ ಪಡೆಯದೆ ಬೇರೆ ಬೇರೆ ವಾಸಿಸಿ ಮಗಳನ್ನು ಪೋಷಿಸಲು ನಿರ್ಧರಿಸಿದ್ದಾರೆ ಎಂಬ ಸುದ್ದಿಯಿದೆ. ಆದರೆ, ಇದಕ್ಕೆಲ್ಲ ಕಾನೂನಿನ ಮುದ್ರೆ ಬಿದ್ದಿಲ್ಲ.
ಒಂದು ವೇಳೆ ಜೂನ್ 14ರಂದು ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಕೋರ್ಟಿಗಿರುತ್ತದೆ.
And to all those who r responsible fr me to see this day,,,,tnx a ton :) .. stay happy n blessed... I wsh only good to all.
— Kichcha Sudeepa (@KicchaSudeep) September 11, 2015
ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದಾಗ ಸರಣಿ ಟ್ವೀಟ್ ಮಾಡಿದ್ದ ಸುದೀಪ್ ಅವರು ನಂತರ ಈ ಬಗ್ಗೆ ಹೆಚ್ಚು ಮಾತನಾಡಿಲ್ಲ. ಪತ್ನಿ ಪ್ರಿಯಾಗೆ ಅನ್ಯಾಯವಾಗಿದೆ ಎಂದು ಒಮ್ಮೆ ಹೇಳಿದ್ದು ಬಿಟ್ಟರೆ, ಇದು ನನ್ನ ವೈಯಕ್ತಿಕ ವಿಚಾರ ಮಾಧ್ಯಮಗಳು, ಅಭಿಮಾನಿಗಳು, ಸಾರ್ವಜನಿಕರು ನನ್ನ ಖಾಸಗಿತನಕ್ಕೆ ಬೆಲೆ ನೀಡುವ ಭರವಸೆ ಇದೆ ಎಂದಿದ್ದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications