ಗಣಿ ಕಪ್ಪ ಪ್ರಕರಣ: ಹೈ ಕೋರ್ಟ್ಗೆ ಯಡಿಯೂರಪ್ಪ
ಬೆಂಗಳೂರು, ನ. 18: ಜಿಂದಾಲ್ ಸಮೂಹದ ಸೌತ್ವೆಸ್ಟ್ ಮೈನಿಂಗ್ ಕಂಪನಿಯಿಂದ ಗಣಿ ಕಪ್ಪ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. [ಯಡಿಯೂರಪ್ಪ, ಈಶ್ವರಪ್ಪಗೆ ಲೋಕಾಯುಕ್ತದಿಂದ ಸಿಹಿ ಸುದ್ದಿ]
ಗಣಿ ಕಪ್ಪ ಕುರಿತು ನಡೆಸುತ್ತಿರುವ ವಿಚಾರಣೆಯನ್ನು ರದ್ದುಪಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ನ್ಯಾ. ಕೆ.ಎನ್. ಫಣೀಂದ್ರ ಅವರ ಏಕ ಸದಸ್ಯ ಪೀಠ ಯಡಿಯೂರಪ್ಪ ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸಲು ಆದೇಶಿಸಿ, ಸಿಬಿಐಗೆ ನೋಟಿಸ್ ನೀಡಿದೆ. [ಮಂಜುನಾಥ ಸ್ವಾಮಿಗೆ ಯಡಿಯೂರಪ್ಪ ವಿಶೇಷ ಪೂಜೆ]
ಪ್ರಕರಣವೇನು?: ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಿಂದಾಲ್ ಸಮೂಹದ ಸೌತ್ವೆಸ್ಟ್ ಮೈನಿಂಗ್ ಕಂಪನಿಗೆ ಗಣಿ ಪರವಾನಗಿ ಕೊಡಿಸಲು ತಮ್ಮ ಪುತ್ರರ ಒಡೆತನದ ಪ್ರೇರಣಾ ಟ್ರಸ್ಟ್ಗೆ 20 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದರು ಎಂದು ದೂರು ದಾಖಲಾಗಿತ್ತು.
Comments
English summary
Former CM Yadyurappa stepped to high court asking to stop prosecution of CBI special court. And high court issued notice to CBI to submit objection.