ವರ್ತೂರು ಪ್ರಕಾಶ್ ಅಪಹರಣ; ಪೊಲೀಸರು ಕೊಟ್ಟ ವಿವರ
ಬೆಂಗಳೂರು, ಡಿಸೆಂಬರ್ 02 : ಕೋಲಾರದ ಮಾಜಿ ಶಾಸಕ, ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ತನಿಖೆಯನ್ನು ಕೋಲಾರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಅಪಹರಣ ಪ್ರಕರಣದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.
ಬುಧವಾರ ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಡಿ. ದೇವರಾಜ್ ಅಪಹರಣ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. "ಮಂಗಳವಾರ ಬೆಳಗ್ಗೆ ಬೆಳ್ಳಂದೂರು ಪೊಲೀಸ್ ಠಾಣೆ ದೂರವಾಣಿ ಕರೆ ಬಂದಿತ್ತು. ಕೆರೆಯ ಬಳಿ ಕಾರೊಂದು ನಿಂತಿರುವ ಕುರಿತು ಮಾಹಿತಿ ನೀಡಲಾಗಿತ್ತು" ಎಂದರು.
"ಪೊಲೀಸರು ಕಾರಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ಖಾರದ ಪುಡಿ ಪತ್ತೆಯಾಗಿತ್ತು. ಪ್ರಾಥಮಿಕವಾಗಿ ಅಪರಾಧ ಪ್ರಕರಣಕ್ಕೆ ಕಾರನ್ನು ಬಳಕೆ ಮಾಡಿರುವುದು ತಿಳಿದುಬಂತು. ಮಧ್ಯಾಹ್ನ 3.30ಕ್ಕೆ ಕಾರು ಕೋಲಾರದ ಮಾಜಿ ಶಾಸಕ ವರ್ತೂರು ಪ್ರಕಾಶ್ಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಯಿತು" ಎಂದು ಹೇಳಿದರು.

"ಬಳಿಕ ವರ್ತೂರು ಪ್ರಕಾಶ್ ನನ್ನ ಬಳಿ ಬಂದು ಘಟನೆಯ ಬಗ್ಗೆ ಮಾಹಿತಿ ನೀಡಿದರು. ಕೋಲಾರದಿಂದ ಮದುವೆಗೆ ಹೋಗುವಾಗ ಎರಡು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಣ ಮಾಡಿದರು ಎಂಬ ಮಾಹಿತಿ ನೀಡಿದರು" ಎಂದು ದೇವರಾಜ್ ಘಟನೆ ವಿವರಿಸಿದರು.
"ಕಾರು ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ದೂರು ದಾಖಲಿಸಲು ತಿಳಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಸಂಜೆ 7.30ಕ್ಕೆ ಅಪಹರಣ ನಡೆದಿದೆ" ಎಂದು ಪೊಲೀಸರು ವಿವರಿಸಿದರು.
"ಕೋಲಾರ, ಮುಳಬಾಗಿಲು , ಅಂತರಗಂಗೆ, ನರಸಾಪುರ, ಕೈವಾರ, ಮುರುಗುಮಲ್ಲ ಮುಂತಾದ ಕಡೆ ಗುರುವಾರ ರಾತ್ರಿ ಸುತ್ತಾಡಿಸಿದ್ದಾರೆ. ಶುಕ್ರವಾರ ರಾತ್ರಿ ಕೂಡಿ ಹಾಕಿದ್ದಾರೆ. ಮೊಣಕಾಲಿನಲ್ಲಿ ಎರಡು ಗಾಯವಾಗಿವೆ. ರಕ್ತ ಹೆಪ್ಪುಗಟ್ಟುವಂತಹ ಗಾಯವದು" ಎಂದು ಮಾಹಿತಿ ಕೊಟ್ಟರು.
"ಅಪಹರಣ ಮಾಡಿದವರು ಕನ್ನಡ, ತಮಿಳು ಮಾತನಾಡುತ್ತಿದ್ದರು. ಹಣ ಮಾಡಿದ್ದೀರಿ, ಹಣ ತರಿಸಿ ಎಂದು ಹೇಳಿದ್ದಾರೆ ಬಳಿಕ ನಂದಗುಡಿ ಸಮೀಪ ಶಿವನಾಪುರ ಬಳಿ ಬಿಟ್ಟು ಹೋಗಿದ್ದಾರೆ. ಇವರು ಕೆ. ಆರ್. ಪುರಂ ಮೂಲಕ ಮನೆ ತಲುಪಿದ್ದಾರೆ" ಎಂದರು.
"ಈ ಘಟನೆ ಸಂಪೂರ್ಣವಾಗಿ ಕೋಲಾರ ಸುತ್ತಮುತ್ತ ನಡೆದಿದೆ. ಆದ್ದರಿಂದ, ನ್ಯಾಯಾಲಯ ಅನುಮತಿ ಪಡೆದು ಕೋಲಾರ ಗ್ರಾಮಾಂತರ ಠಾಣೆಗೆ ಪ್ರಕರಣವನ್ನು ವರ್ಗಾವಣೆ ಮಾಡುತ್ತಿದ್ದೇವೆ" ಎಂದು ಡಿ. ದೇವರಾಜ್ ಹೇಳಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications