ಕಿಡ್ನಿ ಡಯಾಲಿಸಿಸ್ ಮನೆಯಲ್ಲೇ ಮಾಡಿಸಿ: ಮಾರ್ಚ್ನಿಂದ ಸೇವೆ ಆರಂಭ
ಬೆಂಗಳೂರು, ಫೆಬ್ರವರಿ 15: ಇನ್ನುಮುಂದೆ ಕಿಡ್ನಿ ಸಮಸ್ಯೆ ಎದುರಿಸುತ್ತಿರುವವರು ಆಸ್ಪತ್ರೆಗೆ ಹೋಗುವ ಅಗತ್ಯವಿಲ್ಲ ಮನೆಯಲ್ಲೇ ಡಯಾಲಿಸಿಸ್ ಮಾಡಿಸಿಕೊಳ್ಳಬಹುದಾಗಿದೆ.
ಕೇರಳದ ಬಳಿಕ ಈ ಮಾದರಿಯಲ್ಲಿ ಸೇವೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ತನ್ನ ಹೆಜ್ಜೆಯನ್ನು ಮುಂದಿರಿಸಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ ಸಹಯೋಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗೃಹ ಆಧಾರಿತ ಡಯಾಲಿಸಿಸ್ ಯೋಜನೆ ರೂಪಿಸಿವೆ. ಇದು ಮಾರ್ಚ್ ನಿಂದ ಜಾರಿಗೆ ಬರಲಿದೆ.
ಮನೆಯಲ್ಲಿ ಚಿಕಿತ್ಸೆ ಹೇಗೆ ನಡೆಯುತ್ತೆ?: ಡಯಾಲಿಸಿಸ್ ಮಾಡಿಸಬೇಕಿರುವ ರೋಗಿಗಳನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು , ಎರಡು ವಾರ ತರಬೇತಿ ನೀಡಲಾಗುತ್ತದೆ.

ರೋಗಿಯ ಹೊಟ್ಟೆಯ ಭಾಗಕ್ಕೆ ಸಣ್ಣ ಚಿಕಿತ್ಸೆಯ ಮೂಲಕ ಟ್ಯೂಬ್ ಅಳವಡಿಸಲಾಗುತ್ತದೆ. ಅದರೊಳಗೆ ಫ್ಲುಯಿಡ್ಗಳನ್ನು ಹಾಕುವ ಮೂಲಕ ಡಯಾಲಿಸಿಸ್ ಮಾಡಲಾಗುತ್ತದೆ. ಈ ವಿಧಾನವನ್ನು ರೋಗಿಗಳಿಗೂ ಹೇಳಿಕೊಡಲಾಗುತ್ತದೆ. ಕಲಿತುಕೊಂಡ ಬಳಿಕ ಅಗತ್ಯವಿರುವ ದ್ರವಾಂಶವನ್ನು ನೀಡಲಾಗುತ್ತದೆ.
ಬಿಪಿಎಲ್ ಕುಟುಂಬಗಳಿಗೆ ಉಚಿತ ಡಯಾಲಿಸಿಸ್: ಯಂತ್ರದ ಮೂಲಕ ಮಾಡುವ ರಕ್ತ ಶುದ್ಧೀಕರಣಕ್ಕೆ ಹಿಮೋಡಯಾಲಿಸಿಸ್ ಎಂದು ಕರೆಯುತ್ತಾರೆ. ಮನೆಯಲ್ಲಿ ಮಾಡುವ ಡಯಾಲಿಸಿಸ್ಗೆ ಪೆರಿಟೋನಿಯಲ್ ಡಯಾಲಿಸಿಸ್ ಎಂದು ಕರೆಯಾಗುತ್ತದೆ. ಗ್ಲುಕೋಸ್ ನೀಡುವ ಮಾದರಿಯಲ್ಲೇ ದ್ರವಾಂಶವನ್ನು ನೀಡುವ ಮೂಲಕ ಡಯಾಲಿಸಿಸ್ ಮಾಡಿಕೊಳ್ಳಬಹುದಾಗಿದೆ.
ಆಸ್ಪತ್ರೆಯಲ್ಲಿ ಕೆಲವೊಮ್ಮೆ ಹಾಸಿಗೆ ಕೊರತೆ, ನೀರು, ವಿದ್ಯುತ್, ವೈದ್ಯರ ಕೊರತೆ ಕಾಡುತ್ತಿರುತ್ತದೆ. ಡಯಾಲಿಸಿಸ್ ಮಾಡಿಸಿಕೊಳ್ಳಲು ಒಬ್ಬರಿಗೆ ಕನಿಷ್ಠವೆಂದರೂ 10 ರಿಂದ 15 ಸಾವಿರ ರೂ ವೆಚ್ಚಮಾಡಬೇಕಾಗುತ್ತದೆ.
-
Vastu Plants: ಮನೆಯಲ್ಲೇ ಐಶ್ವರ್ಯ ಹೆಚ್ಚಿಸಬೇಕಾ? ಈ 5 ಸಸ್ಯಗಳನ್ನು ಬೆಳೆಸಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್











Click it and Unblock the Notifications