ಕಿರಣ್ ಮಜುಂದಾರ್ ಷಾ ವಿರುದ್ಧ ವಾಟಾಳ್ ವಾಗ್ದಾಳಿ
ಬೆಂಗಳೂರು, ಸೆಪ್ಟೆಂಬರ್ 09 : "ಕಿರಣ್ ಮಜುಂದಾರ್ ಷಾ ಅವರನ್ನು ನಿಮ್ಹಾನ್ಸ್ಗೆ ಸೇರಿಸಬೇಕು, ಅವರಿಗೆ ಹುಚ್ಚುಹಿಡಿದೆ. ಬೆಂಗಳೂರನ್ನು 'ಬಂದ್ಳೂರು' ಅಂತ ಕರೆಯಲು ಅವರು ಯಾರು? ಕನ್ನಡಿಗರ ಪರವಾಗಿ ಹೋರಾಟ ಮಾಡಲು ಇಷ್ಟವಿಲ್ಲದಿದ್ದರೆ ಕರ್ನಾಟಕ ಬಿಟ್ಟು ಹೋಗಲಿ."
ಹೀಗೆಂದು ಆಕ್ರೋಶ ವ್ಯಕ್ತಪಡಿಸಿದವರು ಕನ್ನಡ ಕಟ್ಟಾಳು, ಕರ್ನಾಟಕ ಬಂದ್ ಹೋರಾಟದ ನೇತೃತ್ವ ವಹಿಸಿರುವ ವಾಟಾಳ್ ನಾಗರಾಜ್ ಅವರು. ವಿಶೇಷವಾಗಿ ರೂಪಿಸಿರುವ ಆಟೋದಲ್ಲಿ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಗೆ ತೆರಳುವ ಮುನ್ನ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ವಿರುದ್ಧ ಕಿಡಿಕಾರಿದರು.[ಹೊಸ ತಲೆಮಾರಿನ ಹೋರಾಟಗಾರರು, ಗಟ್ಟಿ ದನಿ, ಆಕ್ರೋಶ]

ಕನ್ನಡಿಗರಿಗೆ ಕುಡಿಯಲು, ನೀರಾವರಿಗೆ ಸಾಕಷ್ಟು ನೀರಿಲ್ಲದಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದಕ್ಕಾಗಿ ಆಕ್ರೋಶಗೊಂಡಿರುವ ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಕಳೆದ ಆರು ತಿಂಗಳಲ್ಲಿ ಕರ್ನಾಟಕ ಬಂದ್ಗೆ ನೀಡಲಾಗಿರುವ ನಾಲ್ಕನೇ ಕರೆ ಇದು.[ಕಾವೇರಿ: ಉರಿಯೋ ಬೆಂಕಿಗೆ ತುಪ್ಪ ಸುರಿದ ತಮಿಳುನಾಡು]
ಇದಕ್ಕೆ ಪ್ರತಿಯಾಗಿ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರು ಟ್ವಿಟ್ಟರ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಬಂದ್ನಿಂದ ಎರಡೂ ರಾಜ್ಯದ ರೈತರಿಗೆ ಪ್ರಯೋಜನವಾಗುವುದಿಲ್ಲ. ಉತ್ಪನ್ನ ಕುಂಠಿತವಾಗುತ್ತದೆ ಎಂದು ವಾಗ್ಝರಿಯನ್ನು ಹರಿಯಬಿಟ್ಟಿದ್ದರು.[ಬಂದ್ ಬಗ್ಗೆ ಬಯೋಕಾನ್ ಕಿರಣ್ ಕಿಡಿ, ಟ್ವಿಟ್ಟರ್ ನಲ್ಲಿ ಉರಿ]
ಇಡೀ ಕರ್ನಾಟಕವೇ ಕಾವೇರಿ ನೀರಿಗಾಗಿ ಬಂದ್ನಲ್ಲಿ ಧುಮುಕಿರುವಾಗ ಕಿರಣ್ ಮಜುಂದಾರ್ ಷಾ ಅವರು ಈರೀತಿ ಹೇಳಿದರೆ ವಾಟಾಳ್ ನಾಗರಾಜ್ ಸುಮ್ಮನಿದ್ದಾರಾ? ಕಿರಣ್ ಅವರಿಗೆ ಹುಚ್ಚು ಹಿಡಿದಿದೆ.. ಕರ್ನಾಟಕದಲ್ಲಿ ಇರಲು ಇಷ್ಟವಿಲ್ಲದಿದ್ದರೆ ರಾಜ್ಯ ಬಿಟ್ಟು ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.[LIVE: ದೇವರಿದ್ದಾನೆ, ಎಲ್ಲವನ್ನು ನೋಡುತ್ತಿದ್ದಾನೆ: ಉಪೇಂದ್ರ]
Pls read my message don't listen to media twist. I hv always stood by farmers n people of Karnataka https://t.co/ih5Y5EgXqx
— Kiran Mazumdar Shaw (@kiranshaw) September 9, 2016
ಕಿರಣ್ ಸಮಜಾಯಿಷಿ : ಕನ್ನಡಿಗರ ಆಕ್ರೋಶ ಭುಗಿಲೇಳುತ್ತಿದ್ದಂತೆ ತಮ್ಮ ಟ್ವೀಟನ್ನು ತೆಗೆದುಹಾಕಿರುವ ಕಿರಣ್ ಮಜುಂದಾರ್ ಷಾ, ಮಾಧ್ಯಮದವರು ನನ್ನ ಹೇಳಿಕೆಯನ್ನು ತಿರುಚಿ ಹಾಕಿದ್ದಾರೆ. ಅವರ ಮಾತಿಗೆ ಕಿವಿಯಾಗಬೇಡಿ. ನಾನು ಯಾವಾಗಲೂ ಕರ್ನಾಟಕದ ರೈತರ ಪರ ದನಿಯೆತ್ತಿದ್ದೇನೆ. ಎರಡೂ ರಾಜ್ಯಗಳ ನಡುವಿನ ವ್ಯಾಜ್ಯ ಅಹಿಂಸಾತ್ಮಕವಾಗಿ ಬಗೆಹರಿಯಬೇಕು ಎಂದಷ್ಟೇ ಹೇಳಿದ್ದು ಎಂದು ಅವರು ಸಮಜಾಯಿಷಿ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications