ಬೆಂಗಳೂರು : 'ಕಿಸ್ ಆಫ್ ಲವ್' ನಡೆಯುತ್ತಾ?
ಬೆಂಗಳೂರು, ನ.29 : ಬೆಂಗಳೂರಿನಲ್ಲಿ 'ಕಿಸ್ ಆಫ್ ಲವ್' ಆಚರಣೆ ನಡೆಯಲಿದೆಯೇ? ಇಲ್ಲವೇ? ಈ ಪ್ರಶ್ನೆಗೆ ಇನ್ನೂ ಉತ್ತರ ದೊರಕಿಲ್ಲ. ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ. ಆದರೆ, 'ಕಿಸ್ ಆಫ್ ಲವ್' ಆಯೋಜಕರು ಭಾನುವಾರ ಕಾರ್ಯಕ್ರಮ ನಡೆಸುತ್ತೇವೆ ಎಂದು ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ.
'ಕಿಸ್ ಆಫ್ ಲವ್'ನ ಮೊದಲಿನ ಸ್ವರೂಪವನ್ನು ಬದಲಾವಣೆ ಮಾಡಿ, ಯಾರಿಗೂ ತೊಂದರೆಯಾಗದಂತೆ ಭಾನುವಾರ ಸಂಜೆ 4 ಗಂಟೆಗೆ ಟೌನ್ಹಾಲ್ ಮುಂಭಾಗದಲ್ಲಿದಲ್ಲಿ 'ಕಿಸ್ ಆಫ್ ಲವ್' ಆಚರಿಸುವ ಬಗ್ಗೆ ಯೋಜನೆ ರೂಪಿಸುತ್ತಿದ್ದೇವೆ ಎಂದು ಆಯೋಜಕರು ಹೇಳಿದ್ದಾರೆ. [ಕಿಸ್ ಲವ್ ನಡೆಸಲು ಪೊಲೀಸರ ಒಪ್ಪಿಗೆ ಇಲ್ಲ]

ಬೆಂಗಳೂರು ನಗರ ಪೊಲೀಸರು 'ಕಿಸ್ ಆಫ್ ಲವ್' ನಡೆಸಲು ಅನುಮತಿ ನಿರಾಕರಿಸಿರುವ ಆದೇಶದ ಪ್ರತಿ ನಮಗೆ ಲಭಿಸಿದೆ. ಶನಿವಾರ ಸಂಜೆ ಸಂಘಟನೆಯ ಸದಸ್ಯರೆಲ್ಲಾ ಸಭೆ ಸೇರಿ ಮುಂದಿನ ಯೋಜನೆ ರೂಪಿಸುತ್ತೇವೆ ಎಂದು ಆಯೋಜಕರು ತಿಳಿಸಿದ್ದಾರೆ. [ಕಿಸ್ ಆಫ್ ಲವ್ ವಿದ್ಯಾರ್ಥಿಗಳು ಹೇಳೋದೇನು?]
ಅನುಮತಿ ಕೊಡಬೇಡಿ : ಟೌನ್ಹಾಲ್ ಮುಂದೆ 'ಕಿಸ್ ಆಫ್ ಲವ್' ನಡೆಸಲು ಅನುಮತಿ ನೀಡಬೇಡಿ ಎಂದು ಪುಟ್ಟಣ್ಣ ಚೆಟ್ಟಿ ಕುಟುಂಬದವರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಇಂಥ ಅಸಭ್ಯ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟರೆ, ಪುಟ್ಟಣ್ಣ ಚೆಟ್ಟಿ ಅವರ ಗೌರವಕ್ಕೆ ಧಕ್ಕೆ ಬರಲಿದೆ ಎಂದು ಅವರು ಪೊಲೀಸರಿಗೆ ಮಾಡಿರುವ ಮನವಿಯಲ್ಲಿ ತಿಳಿಸಿದ್ದಾರೆ. [ಕಿಸ್ ಆಫ್ ಲವ್ ವಿರುದ್ಧ ಒನಕೆ ಚಳವಳಿ]
ನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸಿ ಕಾನೂನು ಚೌಕಟ್ಟಿನೊಳಗೆ ಪ್ರತಿಭಟನೆ ಮಾಡಬಹುದು. ಆದರೆ, ಸಾರ್ವಜನಿಕ ಸ್ಥಳದಲ್ಲಿ ಚುಂಬಿಸುವುದು, ಅಶ್ಲೀಲವಾಗಿ ವರ್ತಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. [ಕಿಸ್ ಆಫ್ ಲವ್ ನಿಮ್ಮ ಅಭಿಪ್ರಾಯ ತಿಳಿಸಿ]
'ಕಿಸ್ ಆಫ್ ಲವ್' ನಡೆಸಲು ಅನುಮತಿ ಕೋರಿ ಆಯೋಜಕರು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಆದರೆ, ಅಲೋಕ್ ಕುಮಾರ್ ಸಹ ಒಪ್ಪಿಗೆ ನೀಡಲು ಸಾಧ್ಯವಿಲ್ಲ ಎಂದು ಮನವಿಯನ್ನು ತಿರಸ್ಕರಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications