ಬೆಂಗಳೂರು: ಭಾನುವಾರದ ಕಿಸ್ ಆಫ್ ಲವ್ 'ಠುಸ್'
ಬೆಂಗಳೂರು, ಡಿ. 1 : ಬೆಂಗಳೂರಿನಲ್ಲಿ ಭಾನುವಾರ ನಡೆಯಬೇಕಿದ್ದ ಕಿಸ್ ಆಫ್ ಲವ್ ಗೆ ದಂತಭಗ್ನವಾಗಿದೆ. ಪೊಲೀಸರಿಂದ ಅನುಮತಿ ನಿರಾಕರಣೆ, ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿತ ಪ್ರಮಾಣದ ಬೆಂಬಲ ವ್ಯಕ್ತವಾಗದ್ದರಿಂದ ಕಿಸ್ 'ಠುಸ್ ' ಆಗಿದೆ.
ಮೊದಲು ಮಹತ್ಮಾ ಗಾಂಧಿ ರಸ್ತೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ನಂತರ ಟೌನ್ ಹಾಲ್ ಮುಂಭಾಗಕ್ಕೆ ಬದಲಾಯಿಸಲಾಗಿತ್ತು. ಹಲವಾರು ಯುವ ಪ್ರೇಮಿಗಳು ರಸ್ತೆಯಲ್ಲೇ ಚುಂಬನದ ಮಳೆಗರೆಯಬೇಕೆಂದುಕೊಂಡಿದ್ದು ಆಯೋಜಕರ ಹಿನ್ನಡೆ ಪರಿಣಾಮ ಕೊಚ್ಚಿಕೊಂಡು ಹೋಗಿದೆ.[ಮುತ್ತಿನ ಕಿಮ್ಮತ್ತು ಗಮ್ಮತ್ತೇನೆಂದು ಬಲ್ಲವರಾರು?]

ನವೆಂಬರ್ 22 ಕ್ಕೆ ನಡೆಯಬೇಕಿದ್ದ ಕಿಸ್ ಆಫ್ ಲವ್ ನವೆಂಬರ್ 30 ಕ್ಕೆ ಮುಂದೂಡಿಕೆಯಾಗಿತ್ತು. ಪೊಲೀಸರು ಭಾನುವಾರ ಮುಂಜಾಗೃತಾ ಕ್ರಮ ತೆಗೆದುಕೊಂಡು ಟೌನ್ ಹಾಲ್ ಎದುರಿನ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿದ್ದರು. ಅಲ್ಲದೇ ಭದ್ರತಾ ಸಿಬ್ಬಂದಿಯನ್ನು ಆಯೋಜನೆ ಮಾಡಿದ್ದರು.
ಹಿಂದು ಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಕಿಸ್ ಆಫ್ ಲವ್ ಗೆ ವಿರೋಧ ವ್ಯಕ್ತಪಡಿಸಿದ್ದವು. ನೈತಿಕ ಪೊಲೀಸ್ ಗಿರಿ ವಿರುದ್ಧ ಪ್ರತಿಭಟನೆ ಮಾಡಲು ಹಲವಾರು ದಾರಿಗಳಿವೆ. ಅದಕ್ಕೆ ಇಂಥ ಅಸಂಸ್ಕೃತ ಹಾದಿ ಹಿಡಿಯಬಾರದು ಎಂಬ ಅಭಿಪ್ರಾಯ ಮಾಧ್ಯಮಗಳಲ್ಲಿ ವ್ಯಕ್ತವಾಗಿತ್ತು.[ಹಿಂದೆ ಸರಿದ ರಚಿತಾ ತನೇಜಾ]

ಇಲ್ಲಿಯವರೆಗೆ ಫೇಸ್ ಬುಕ್ ನಲ್ಲಿ ಕ್ರಿಯಾಶೀಲವಾಗಿದ್ದ ಕಿಸ್ ಆಫ್ ಲವ್ ಕಮ್ಯೂನಿಟಿ ನವೆಂಬರ್ 29 ರಿಂದ ಮರೆಯಾಗಿದೆ. ಯಾವುದೇ ಅಪ್ ಡೇಟ್ ಗಳನ್ನು ಹಾಕಿಲ್ಲ. ನಾಯಕತ್ವ ವಹಿಸಿಕೊಂಡವರ ಪತ್ತೆಯೂ ಇಲ್ಲ.
ಕೇರಳ, ಹೈದ್ರಾಬಾದ್ ಮತ್ತು ಚೆನ್ನೈನಲ್ಲಿ ನಡೆದಂತೆ ಇಲ್ಲಿಯೂ ಕಿಸ್ ಆಫ್ ಲವ್ ನಡೆಯುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಈಗ ಆಯೋಜಕರೆ ನಾಪತ್ತೆಯಾಗಿರುವುದು ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಫುಲ್ ಸ್ಟಾಫ್ ಹಾಕಿದೆ ಎಂದೇ ಹೇಳಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications