ಕಿಸ್ ಆಫ್ ಲವ್ನಲ್ಲಿ ಪಾಲ್ಗೊಳ್ಳುವವರಿಗೆ ಸಿಎಂ ಎಚ್ಚರಿಕೆ
ಬೆಂಗಳೂರು, ನ.19 : 'ನೈತಿಕ ಪೊಲೀಸ್ ಗಿರಿ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಿ, ಅಶ್ಲೀಲ, ಅಸಭ್ಯವಾಗಿ ವರ್ತಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ' ಎಂದು ಕಿಸ್ ಆಫ್ ಲವ್ ಆಚರಣೆ ಮಾಡುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಕಿಸ್ ಆಫ್ ಲವ್ ಆಚರಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಅಶ್ಲೀಲ, ಅಸಭ್ಯವಾಗಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. [ಕಿಸ್ ಆಫ್ ಲವ್ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ]

ನೈತಿಕ ಪೊಲೀಸ್ ಗಿರಿ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಿದರೆ ಯಾವುದೇ ತೊಂದರೆಯಿಲ್ಲ, ಆದರೆ, ಬೀದಿಗಳಲ್ಲಿ ಕಿಸ್ ಡೇ ಆಚರಿಸುವ ಮೂಲಕ ಅಶ್ಲೀಲವಾಗಿ ಪ್ರತಿಭಟನೆ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಎಂ ತಿಳಿಸಿದರು. [ಮುಕ್ತ ಮುತ್ತು ಪ್ರೇಮಿಗಳಿಗೆ ಕೆಜೆ ಜಾರ್ಜ್ ಎಚ್ಚರಿಕೆ]
ತಂದೆ-ತಾಯಿಗಳು ವಿರೋಧಿಸಬೇಕು : ಕಿಸ್ ಆಫ್ ಲವ್ ಕಾರ್ಯಕ್ರಮನ್ನು ಎಲ್ಲ ತಂದೆ ತಾಯಿ ವಿರೋಧಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಡ್ರೂಮ್ನಲ್ಲಿ ಮಾಡುವುದನ್ನು ರಸ್ತೆಯಲ್ಲಿ ಮಾಡುವುದು ನೈತಿಕತೆ ಅಲ್ಲ, ಇದರಿಂದ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. [ಬಂತು ಬೆಂಗಳೂರಿಗೂ ಬಂತು 'ಕಿಸ್ ಆಫ್ ಲವ್'!]
ಅನುಮತಿ ನೀಡಬೇಡಿ : ಕಿಸ್ ಆಫ್ ಲವ್ ನಂತರ ಪ್ರತಿಭಟನೆಯನ್ನು ನಡೆಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡಬಾರದು ಎಂದು ಹಿರಿಯ ಸಂಶೋಧಕ ಎಂ.ಚಿದಾನಂದ ಮೂರ್ತಿ ಅವರು ಒತ್ತಾಯಿಸಿದ್ದಾರೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಮರ್ಯಾದೆ ಹತ್ಯೆಗೆ ಬೀಳಲಿದೆ ಬ್ರೇಕ್: ವಿಧಾನಸಭೆಯಲ್ಲಿ ಐತಿಹಾಸಿಕ 'ಇವ ನಮ್ಮವ' ಮಸೂದೆ ಮಂಡಿಸಿದ ಸರ್ಕಾರ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ












Click it and Unblock the Notifications