ಬೆಂಗಳೂರಲ್ಲಿ ನೀರಿನ ಅಭಾವ: ಬಿಬಿಸಿ ವರದಿ ತಳ್ಳಿ ಹಾಕಿದ ಜಾರ್ಜ್
ಬೆಂಗಳೂರು, ಫೆಬ್ರವರಿ 12 : ಬೆಂಗಳೂರಿಗೆ 1004 ಎಂಎಲ್ ಡಿ ನೀರು ಹರಿದುಬರುತ್ತಿದೆ.775 ಎಂಎಲ್ ಡಿಯಷ್ಟು ನೀರು ಕಾವೇರಿ 5 ನೇ ಹಂತದಿಂದ ಬರುತ್ತಿದೆ ಹಾಗಾಗಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಭರಸವೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಜಲಕ್ಷಾಮ ಎಂದು ಬಿಬಿಸಿ ಸುದ್ದಿವಾಹಿನಿ ಪ್ರಕಟಿಸಿದ ವರದಿಯ ಕುರಿತು ಜಲಮಂಡಳಿಯಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ನೀರಿನ ಸೋರಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಿದ್ದೇವೆ. ಎಲ್ಲ ಕಟ್ಟಡಗಳಲ್ಲಿ ಎಸ್ ಟಿ ಪಿ ಅಳವಡಿಸಲು ಸೂಚಿಸಿದ್ದೇವೆ. ಎಸ್ ಟಿಪಿ ಅವಳವಡಿಕೆಯನ್ನು ಕಡ್ಡಾಯ ಗೊಳಿಸಿದ್ದೇವೆ ಹಾಗಾಗಿ ನೀರಿನ ಅಭಾವವಿರುವುದಿಲ್ಲ ಎಂದರು.

ಶರವಾತಿ ನದಿಯಿಂದ ನೀರು ತರುವ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಅಣೆ ಕಟ್ಟು ಕಟ್ಟಿ ನೀರಿನ ಶುದ್ಧ ಯೋಜನೆಯನ್ನು ಮಾಡಲು ಚಿಂತನೆ ನಡೆಸಲಾಗಿದೆ. ಬೆಂಗಳೂರು ಬ್ರ್ಯಾಂಡ್ ನ್ನು ಹಾಳು ಮಾಡುವ ಯತ್ನ ನಡೆಯುತ್ತಿದೆ ಎಂದು ವರದಿಯನ್ನು ತಳ್ಳಿ ಹಾಕಿದರು.
ಕುಡಿಯುವ ನೀರಿನ ಅಭಾವ ಹೊಂದಿರುವ ಜಗತ್ತಿನ 11 ಮಹಾನಗರಗಳ ಸಮಸ್ಯೆಯನ್ನು ಬಿಬಿಸಿ ನ್ಯೂಸ್ ವಾಹಿನಿ ತೆರೆದಿಟ್ಟಿದ್ದು, ಅಂತಹ ಬಾಯಾರಿದ ನಗರಗಳ ಸಾಲಿನಲ್ಲಿ ಬೆಂಗಳೂರು ಕೂಡ ಒಂದಾಗಿದೆ.
ಇನ್ನೂ ಗಂಭೀರ ವಿಷಯವೆಂದರೆ ಹೀಗೆ ವಿಶ್ವದಲ್ಲಿ ನೀರಿನ ಗಂಭೀರ ಕೊರತೆ ಎದುರಿಸುತ್ತಿರ ಬಹುದಾದ 11 ನಗರಗಳ ಪೈಕಿ ಬೆಂಗಳೂರು ವಿಶ್ವದಲ್ಲೇ 2 ನೇ ಸ್ಥಾನದಲ್ಲಿದೆ. ಅಭಿವೃದ್ಧಿ ನಗರೀಕರಣದ ನೆಪದಲ್ಲಿ ನೈಸರ್ಗಿಕ ಸಂಪನ್ಮೂಲಗಳನ್ನು ಕಳೆದುಕೊಂಡಿರುವ ನಗರಗಳು ಮತ್ತು ಅಲ್ಲಿನ ದುಸ್ಥಿತಿ ಕುರಿತು ವಾಹಿನಿ ವರದಿ ಮಾಡಿತ್ತು.
ವರದಿ ಪ್ರಕಾರ 2030 ರ ವೇಳೆಗೆ ಜಗತ್ತಿನಾದ್ಯಂತ, ಶೇ.40 ರಷ್ಟು ಶುದ್ಧ ನೀರಿನ ಕೊರತೆ ಎದುರಾಗಲಿದೆ. ನಗರಗಳಿಗೆ ಹರಿದು ಬರುತ್ತಿರುವ ಭಾರಿ ಜನಸಂಖ್ಯೆ, ನೀರಿನ ಸೂಕ್ತನಿರ್ವಹಣೆ ಕೊರತೆ, ನೀರಿನ ಮರುಬಳಕೆ ತಂತ್ರಜ್ಞಾನ ಬಳಕೆ ಮಾಡದಿರುವುದು ಮತ್ತು ಭಾರೀ ಪ್ರಮಾಣದಲ್ಲಿ ನೀರಿನ ಬಳಕೆ ಮಾಡುತ್ತಿರುವ ಕಾರಣ, ಜಗತ್ತಿನ ಹಲವು ನಗರಗಳು ಮುಂದಿನ ದಿನಗಳಲ್ಲಿ ಗಂಭೀರವಾದ ನೀರಿನ ಸಮಸ್ಯೆ ಎದುರಿಸಲಿದೆ ಎಂದು ವರದಿ ಹೇಳಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications