ಬೆಂಗಳೂರಲ್ಲಿ ನೀರಿನ ಅಭಾವ: ಬಿಬಿಸಿ ವರದಿ ತಳ್ಳಿ ಹಾಕಿದ ಜಾರ್ಜ್
ಬೆಂಗಳೂರು, ಫೆಬ್ರವರಿ 12 : ಬೆಂಗಳೂರಿಗೆ 1004 ಎಂಎಲ್ ಡಿ ನೀರು ಹರಿದುಬರುತ್ತಿದೆ.775 ಎಂಎಲ್ ಡಿಯಷ್ಟು ನೀರು ಕಾವೇರಿ 5 ನೇ ಹಂತದಿಂದ ಬರುತ್ತಿದೆ ಹಾಗಾಗಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಭರಸವೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಜಲಕ್ಷಾಮ ಎಂದು ಬಿಬಿಸಿ ಸುದ್ದಿವಾಹಿನಿ ಪ್ರಕಟಿಸಿದ ವರದಿಯ ಕುರಿತು ಜಲಮಂಡಳಿಯಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ನೀರಿನ ಸೋರಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಿದ್ದೇವೆ. ಎಲ್ಲ ಕಟ್ಟಡಗಳಲ್ಲಿ ಎಸ್ ಟಿ ಪಿ ಅಳವಡಿಸಲು ಸೂಚಿಸಿದ್ದೇವೆ. ಎಸ್ ಟಿಪಿ ಅವಳವಡಿಕೆಯನ್ನು ಕಡ್ಡಾಯ ಗೊಳಿಸಿದ್ದೇವೆ ಹಾಗಾಗಿ ನೀರಿನ ಅಭಾವವಿರುವುದಿಲ್ಲ ಎಂದರು.

ಶರವಾತಿ ನದಿಯಿಂದ ನೀರು ತರುವ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಅಣೆ ಕಟ್ಟು ಕಟ್ಟಿ ನೀರಿನ ಶುದ್ಧ ಯೋಜನೆಯನ್ನು ಮಾಡಲು ಚಿಂತನೆ ನಡೆಸಲಾಗಿದೆ. ಬೆಂಗಳೂರು ಬ್ರ್ಯಾಂಡ್ ನ್ನು ಹಾಳು ಮಾಡುವ ಯತ್ನ ನಡೆಯುತ್ತಿದೆ ಎಂದು ವರದಿಯನ್ನು ತಳ್ಳಿ ಹಾಕಿದರು.
ಕುಡಿಯುವ ನೀರಿನ ಅಭಾವ ಹೊಂದಿರುವ ಜಗತ್ತಿನ 11 ಮಹಾನಗರಗಳ ಸಮಸ್ಯೆಯನ್ನು ಬಿಬಿಸಿ ನ್ಯೂಸ್ ವಾಹಿನಿ ತೆರೆದಿಟ್ಟಿದ್ದು, ಅಂತಹ ಬಾಯಾರಿದ ನಗರಗಳ ಸಾಲಿನಲ್ಲಿ ಬೆಂಗಳೂರು ಕೂಡ ಒಂದಾಗಿದೆ.
ಇನ್ನೂ ಗಂಭೀರ ವಿಷಯವೆಂದರೆ ಹೀಗೆ ವಿಶ್ವದಲ್ಲಿ ನೀರಿನ ಗಂಭೀರ ಕೊರತೆ ಎದುರಿಸುತ್ತಿರ ಬಹುದಾದ 11 ನಗರಗಳ ಪೈಕಿ ಬೆಂಗಳೂರು ವಿಶ್ವದಲ್ಲೇ 2 ನೇ ಸ್ಥಾನದಲ್ಲಿದೆ. ಅಭಿವೃದ್ಧಿ ನಗರೀಕರಣದ ನೆಪದಲ್ಲಿ ನೈಸರ್ಗಿಕ ಸಂಪನ್ಮೂಲಗಳನ್ನು ಕಳೆದುಕೊಂಡಿರುವ ನಗರಗಳು ಮತ್ತು ಅಲ್ಲಿನ ದುಸ್ಥಿತಿ ಕುರಿತು ವಾಹಿನಿ ವರದಿ ಮಾಡಿತ್ತು.
ವರದಿ ಪ್ರಕಾರ 2030 ರ ವೇಳೆಗೆ ಜಗತ್ತಿನಾದ್ಯಂತ, ಶೇ.40 ರಷ್ಟು ಶುದ್ಧ ನೀರಿನ ಕೊರತೆ ಎದುರಾಗಲಿದೆ. ನಗರಗಳಿಗೆ ಹರಿದು ಬರುತ್ತಿರುವ ಭಾರಿ ಜನಸಂಖ್ಯೆ, ನೀರಿನ ಸೂಕ್ತನಿರ್ವಹಣೆ ಕೊರತೆ, ನೀರಿನ ಮರುಬಳಕೆ ತಂತ್ರಜ್ಞಾನ ಬಳಕೆ ಮಾಡದಿರುವುದು ಮತ್ತು ಭಾರೀ ಪ್ರಮಾಣದಲ್ಲಿ ನೀರಿನ ಬಳಕೆ ಮಾಡುತ್ತಿರುವ ಕಾರಣ, ಜಗತ್ತಿನ ಹಲವು ನಗರಗಳು ಮುಂದಿನ ದಿನಗಳಲ್ಲಿ ಗಂಭೀರವಾದ ನೀರಿನ ಸಮಸ್ಯೆ ಎದುರಿಸಲಿದೆ ಎಂದು ವರದಿ ಹೇಳಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications