ಹೆಬ್ಬಾಳ ಉದ್ಯಾನ: ಅಶ್ವಾರೂಢ ಕೆಂಪೇಗೌಡ ಪ್ರತಿಮೆಯ ಅನಾವರಣ
ಬೆಂಗಳೂರು, ಮಾರ್ಚ್ 27: ಸ್ಥಳೀಯರ ಆಕ್ಷೇಪದ ನಡುವೆಯೇ ಹೆಬ್ಬಾಳ ಮೇಲ್ಸೇತುವೆ ಬಳಿಯ ಉದ್ಯಾನದಲ್ಲಿನ ಅಶ್ವಾರೂಢ ಕೆಂಪೇಗೌಡರ ಪ್ರತಿಮೆಯನ್ನು ಬಿಡಿಎ ಅನಾವರಣಗೊಳಿಸಿದೆ.
11.5ಮೀಟರ್ ಉದ್ದ ಹಾಗೂ 8 ಮೀಟರ್ ಎತ್ತರದ ಕಾಂಕ್ರೀಟ್ ಗೋಡೆ ನಿರ್ಮಿಸಿರುವ ಬಿಡಿಎ, ಇದರಲ್ಲಿ 4.8 ಮೀಟರ್ ಎತ್ತರದ ನಾಡಪ್ರಭು ಕೆಂಪೇಗೌಡ ಪ್ರತಿಮೆ ಸ್ಥಾಪಿಸಿದೆ. ಒಟ್ಟಾರೆ 1 ಕೋಟಿ ರೂ. ವೆಚ್ಚದಲ್ಲಿ ಖಡ್ಗ ಹಿಡಿದು ಕುದುರೆ ಮೇಲೆ ಕುಳಿತ ಹಿತ್ತಾಳೆ ಮಿಶ್ರಿತ ಪ್ರತಿಮೆ ಇದಾಗಿದೆ.
ಸಚಿವರಾದ ಕೆ.ಜೆ. ಜಾರ್ಜ್ ಹಾಗೂ ಕೃಷ್ಣ ಭೈರೇಗೌಡ ಪ್ರತಿಮೆ ಅನಾವರಣ ಮಾಡಿದರು. ಕಾರ್ಯಕ್ರಮ ಸಂದರ್ಭದಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿದ್ದಿದ್ದ ತ್ಯಾಜ್ಯ ಹಾಗೂ ಉದ್ಯಾನದ ಅಸಮರ್ಪಕ ನಿರ್ವಹಣೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯರು, ಕೆಂಪೇಗೌಡರನ್ನು ಅವಮಾನಿಸಲಾಗುತ್ತಿದೆ ಎಂದರು.

ಉದ್ಯಾನ ಹಾಗೂ ಪ್ರತಿಮೆ ಬಳಿ ತೆರಳಲು ಸಮರ್ಪಕ ಮಾರ್ಗ ಇಲ್ಲ. ತರಾತುರಿಯಲ್ಲಿ ಪ್ರತಿಮೆ ಅನಾವರಣಗೊಳಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾರ್ಜ್ ಹಾಗೂ ಕೃಷ್ಣಭೈರೇಗೌಡ ಮನವೊಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ತೀವ್ರ ಅಸಮಾಧಾನಗೊಂಡು ಸ್ಥಳೀಯರು ಕಾರ್ಯಕ್ರಮ ಬಹಿಷ್ಕರಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ವಾರದೊಳಗೆ ಪಾರ್ಕ್ ಸ್ವಚ್ಛತೆ, ಸಂಪರ್ಕ ಸೇರಿ ಮೂಲಭೂತ ಸೌಕರ್ಯ ಇತ್ಯಾದಿ ಕಾಮಗಾರಿಗಳನ್ನು ಪುರ್ಣಗೊಳಿಸುವಂತೆ ಇದೇ ವೇಳೆ ಅಧಿಕಾರಿಗಳಿಗೆ ಜಾರ್ಜ್ ನಿರ್ದೇಶಿಸಿದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications