ಕೆಂಪಯ್ಯ ನೇಮಕ : ಗೃಹ ಸಚಿವ ಜಾರ್ಜ್ ಸ್ಪಷ್ಟನೆಗಳು
ಬೆಂಗಳೂರು, ಆ.5 : ನಿವೃತ್ತ ಎಡಿಜಿಪಿ ಕೆಂಪಯ್ಯ ಅವರನ್ನು ಗೃಹ ಸಚಿವರ ಸಲಹೆಗಾರರನ್ನಾಗಿ ನೇಮಿಸಿರುವುದನ್ನು ಕೆ.ಜೆ.ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ. ನನ್ನ ಮನವಿ ಮೇರೆಗೆ ಕೆಂಪಯ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲಹೆಗಾರರನ್ನಾಗಿ ನೇಮಿಸಿದ್ದಾರೆ. ಇದು ಸಂವಿಧಾನ ಬಾಹಿರವಲ್ಲ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಗೃಹ ಸಚಿವ ಕೆ.ಜೆ.ಜಾರ್ಜ್, ನಿವೃತ್ತ ಎಡಿಜಿಪಿ ಕೆಂಪಯ್ಯ ಅವರನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿರುವುದನ್ನು ಸಮರ್ಥಿಸಿಕೊಂಡರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ದಿವಾಕರ್ ಅವರನ್ನು ತಮ್ಮ ಕಾನೂನು ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದರು. ಬೇರೆ ಬೇರೆ ವಿಚಾರಕ್ಕೆ ಬೇರೆ ಸಲಹೆಗಾರರಿದ್ದರು ಎಂದು ಹೇಳಿದರು.

ಕೆಂಪಯ್ಯ ಅವರನ್ನು ನೇಮಕ ಮಾಡಿಕೊಂಡಿರುವುದಕ್ಕೆ ಆಕ್ಷೇಪ ಏಕೆ? ಅಷ್ಟಕ್ಕೂ ಇಲಾಖೆಯಲ್ಲಿ ಸುಧಾರಣೆ ತರಲು ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದು ಸಂವಿಧಾನ ಬಾಹಿರವೂ ಅಲ್ಲ, ಅಧಿಕಾರಿಗಳ ಬಡ್ತಿಗೂ ತೊಂದರೆ ಆಗುವುದಿಲ್ಲ, ಸಾರ್ವಜನಿಕರಿಗೂ ಹಾನಿ ಇಲ್ಲ ಎಂದು ಗೃಹ ಸಚಿವರು ಸ್ಪಷ್ಟನೆ ನೀಡಿದರು. [ಗೃಹ ಸಚಿವರ ಸಲಹೆಗಾರರಾಗಿ ಕೆಂಪಯ್ಯ ನೇಮಕ]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಡದಿಂದ ಕೆಂಪಯ್ಯ ನೇಮಕವಾಗಿದೆ ಎಂಬ ಮಾತನ್ನು ತಳ್ಳಿ ಹಾಕಿದ ಕೆ.ಜೆ.ಜಾರ್ಜ್, ನೇಮಕದ ಬಗ್ಗೆ ನಾನೇ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಕಳುಹಿಸಿದ್ದೆ. ಸಲಹೆಗಾರರನ್ನು ನೇಮಿಸಿಕೊಂಡರೆ ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಬಹುದು ಎಂಬುದು ನನ್ನ ಉದ್ದೇಶವಾಗಿತ್ತು ಎಂದರು ಹೇಳಿದರು. [ಕೆಜೆ ಜಾರ್ಜ್ ನೆಪ ಮಾತ್ರಕ್ಕೆ ಗೃಹ ಸಚಿವರು]
ಯಾವುದೇ ಆಡಳಿತಾತ್ಮಕ ವಿಚಾರದಲ್ಲಿ ಕೆಂಪಯ್ಯ ಅವರು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ ಗೃಹ ಸಚಿವರು, ಈ ಹಿಂದೆ ನಡೆದ ಪೊಲೀಸ್ ವರ್ಗಾವಣೆ ವಿಚಾರದಲ್ಲಿ ಕೆಂಪಯ್ಯನವರು ಮಧ್ಯಪ್ರವೇಶ ಮಾಡಿರಲಿಲ್ಲ. ವರ್ಗಾವಣೆ ಹಾಗೂ ಇತರೆ ಆಡಳಿತಾತ್ಮಕ ವಿಚಾರವನ್ನು ನಾನು ಮತ್ತು ಸಿಎಂ ಸಿದ್ದರಾಮಯ್ಯ ನಿರ್ಧರಿಸುತ್ತೇವೆ ಎಂದರು.
ಬಿಜೆಪಿ ಮಾತು ಕೇಳಬೇಕಿಲ್ಲ : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವವರು ನಾವು. ನೇಮಕ ಹಾಗೂ ಇತರೆ ವಿಚಾರದಲ್ಲಿ ನಾವು ಪ್ರತಿಪಕ್ಷ ಬಿಜೆಪಿಯವರ ಮಾತನ್ನು ಕೇಳಬೇಕಾಗಿಲ್ಲ. ಗೃಹ ಇಲಾಖೆಯಲ್ಲಿನ ಹಲವು ಸಮಸ್ಯೆಗಳಿಗೆ ಹಿಂದಿನ ಸರ್ಕಾರದ ಬೇಜವಾಬ್ದಾರಿತನವೇ ಕಾರಣ ಎಂದು ಜಾರ್ಜ್ ದೂರಿದರು.
ಕೆಂಪಯ್ಯ ಅವರು ನೇಮಕವಾದ ನಂತರ ನಾನು ಹಿರಿಯ ಅಧಿಕಾರಿಗಳ ಸಲಹೆ ತಿರಸ್ಕರಿಸುತ್ತೇನೆ ಎಂದು ಅರ್ಥವಲ್ಲ. ನಮ್ಮ ಅಧಿಕಾರಿಗಳು ಸಮರ್ಥರಿದ್ದಾರೆ. ಗೃಹ ಇಲಾಖೆಗೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳು ಇರುತ್ತವೆ. ಅಂಥ ಸಂದರ್ಭದಲ್ಲಿ ಸಲಹೆಗಾರರು ಇದ್ದರೆ ಇನ್ನಷ್ಟು ಉತ್ತಮವಾಗಿ ಕಾರ್ಯ ನಿರ್ವಹಿಸಬಹುದು ಎಂದು ಜಾರ್ಜ್ ಅಭಿಪ್ರಾಯಪಟ್ಟರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications