ಮುಕ್ತ ಮುತ್ತು ಪ್ರೇಮಿಗಳಿಗೆ ಕೆಜೆ ಜಾರ್ಜ್ ಎಚ್ಚರಿಕೆ
ಬೆಂಗಳೂರು, ನ.18 : ರಾಷ್ಟ್ರಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿರುವ 'ಕಿಸ್ ಆಫ್ ಲವ್' ಕಾರ್ಯಕ್ರಮ ಉದ್ಯಾನನಗರಿ ಬೆಂಗಳೂರಿಗೂ ಬಂದಿದೆ. ಕಿಸ್ ಆಫ್ ಲವ್ ಹೆಸರಿನಲ್ಲಿ ಕಾನೂನಿನ ಹೊರತಾದ ಚಟುವಟಿಕೆ ನಡೆಸಿದರೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಕೆ.ಜೆ.ಜಾರ್ಜ್, ಕಾನೂನಿನಲ್ಲಿ ಅವಕಾಶ ಇರುವುದಕ್ಕೆ ಮಾತ್ರ ಅನುಮತಿ ನೀಡಲಾಗುವುದು. ಕಾನೂನು ವಿರುದ್ಧವಾಗಿ ನಡೆದರೆ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ಹೇಳಿದರು. [ಬೆಂಗಳೂರಿಗೂ ಬಂತು 'ಕಿಸ್ ಆಫ್ ಲವ್'!]

ಕೇರಳದಲ್ಲಿ ನಡೆಯುತ್ತಿರುವ 'ನೈತಿಕ ಪೊಲೀಸ್ ಗಿರಿ' ವಿರೋಧಿಸಿ ಕೆಲವು ದಿನಗಳ ಹಿಂದೆ ಕೊಚ್ಚಿಯಲ್ಲಿ ಕೆಲವು ಪ್ರಗತಿಪರ ಸಂಘಟನೆಗಳು 'ಕಿಸ್ ಆಫ್ ಲವ್' ಆಯೋಜಿಸಿದ್ದವು. ನಂತರ ರಾಷ್ಟ್ರಮಟ್ಟದಲ್ಲಿ 'ಕಿಸ್ ಆಫ್ ಲವ್' ಪರ ಮತ್ತು ವಿರೋಧ ಚರ್ಚೆ, ಪ್ರತಿಭಟನೆಗಳು ನಡೆಯುತ್ತಿವೆ.
ಸದ್ಯ ನವೆಂಬರ್ ಅಂತ್ಯದೊಳಗೆ ಬೆಂಗಳೂರಿನಲ್ಲಿ ಕಿಸ್ ಆಫ್ ಲವ್ ಆಯೋಜಿಸುವ ಕುರಿತು ಚರ್ಚೆಗಳು ಆರಂಭವಾಗಿವೆ. ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ದಿನಾಂಕ ನಿಗದಿಯಾಗಿಲ್ಲ. ಇದಕ್ಕೆ ಅನುಮತಿ ನೀಡಬೇಕೆ? ಬೇಡವೆ? ಎಂಬ ಕುರಿತು ಚರ್ಚೆ ಆರಂಭವಾಗಿದೆ.
ಅನುಮತಿ ಕೋರಿಲ್ಲ : ಬೆಂಗಳೂರಿನಲ್ಲಿ ಕಿಸ್ ಆಫ್ ಲವ್ ಆಯೋಜಿಸಲು ಯಾವ ಸಂಘಟನೆಯವರು ಅನುಮತಿ ಕೇಳಿ ಮನವಿ ಸಲ್ಲಿಸಿಲ್ಲ ಎಂದು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ. ಮನವಿ ಸಲ್ಲಿಸಿದರೆ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications