KMF Buffalo Milk: ಎಮ್ಮೆ ಹಾಲು ಮಾರಾಟ ಸ್ಥಗಿತಕ್ಕೆ ಕೆಎಂಎಫ್ ಚಿಂತನೆ
ಬೆಂಗಳೂರು, ಮಾರ್ಚ್ 19: ಹೆಚ್ಚುತ್ತಿರುವ ಗ್ರಾಹಕರ ಬೇಡಿಕೆಯಿಂದಾಗಿ, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮಾರುಕಟ್ಟೆಗೆ ಎಮ್ಮೆ ಹಾಲನ್ನು ಡಿಸೆಂಬರ್ 21 ಮತ್ತು 22 ರಿಂದ ಬಿಡುಗಡೆ ಮಾಡಿತ್ತು. ಮಾರುಕಟ್ಟೆಗೆ ಮೂರು ತಿಂಗಳ ಹಿಂದಷ್ಟೇ ಬಿಡುಗಡೆ ಮಾಡಲಾಗಿದ್ದ ಎಮ್ಮೆ ಹಾಲಿನ ಮಾರಾಟವನ್ನು ಸ್ಥಗಿತಗೊಳಿಸಲು ಚಿಂತನೆ ನಡೆಯುತ್ತಿದೆ.
ಹೌದು... ಕೇವಲ ಮೂರು ತಿಂಗಳಿಗೆನೇ ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್) ಎಮ್ಮೆ ಹಾಲು ಮಾರಾಟ ನಿಲ್ಲಿಸಲು ಗಂಭೀರ ಚಿಂತನೆ ನಡೆಸಿದೆ. ಬೇಡಿಕೆ ಹೆಚ್ಚಾಗಿದೆ ಎಂದು ಮಾರುಕಟ್ಟೆಗೆ ಎಮ್ಮೆ ಹಾಲು ಬಿಡುಗಡೆ ಮಾಡಿ ಈಗ ಮತ್ತೆ ಬೇಡಿಕೆ ಕಡಿಮೆಯಾಗಿದೆ ಎಂದು ಹಾಳು ಮಾರಾಟ ಸ್ಥಗಿತಗೊಳಿಸಲಾಗುತ್ತಿದೆ.

ಕಳೆದ ಡಿಸೆಂಬರ್ 21 ಮತ್ತು 22 ರಂದು ರಾಜ್ಯಾದ್ಯಂತ ಕೆಎಂಎಫ್ ರಾಜ್ಯಾದ್ಯಂತ ಮಾರುಕಟ್ಟೆಗೆ ಎಮ್ಮೆ ಹಾಲು ಬಿಡುಗಡೆ ಮಾಡಿತ್ತು. ಬೆಂಗಳೂರು ಸೇರಿದಂತೆ ಮಹಾರಾಷ್ಟ್ರ, ಗೋವಾ ರಾಜ್ಯಗಳಿಗೂ ಎಮ್ಮೆ ಹಾಲು ಸರಬರಾಜು ಮಾಡುವ ಉದ್ದೇಶವನ್ನು ಕೆಎಂಎಫ್ ಹೊಂದಿತ್ತು. ಆದರೆ, ಕೆಎಂಎಫ್ ಲೆಕ್ಕಾಚಾರ ಉಲ್ಟಾ ಹೊಡೆದಿದ್ದು, ಎಮ್ಮೆ ಹಾಲಿಗೆ ಬೇಡಿಕೆ ಕಡಿಮೆಯಾಗಿದೆ. ಒಂದು ದಿನಕ್ಕೆ ಕೇವಲ ಎರಡು ಸಾವಿರ ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ ಎಂಬ ಮಾಹಿತಿಯಿದೆ.
ಕೇವಲ ಎರಡು ಸಾವಿರ ಲೀಟರ್ ಹಾಲು ಮಾರಾಟದಿಂದ ಸಂಸ್ಥೆಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಹಾಗಾಗಿ ಎಮ್ಮೆ ಹಾಲಿನ ಮಾರಾಟ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಎಮ್ಮೆ ಹಾಲಿಗೆ ಪ್ರತಿ ಲೀಟರ್ಗೆ 60 ರೂಪಾಯಿ ನಿಗದಿಪಡಿಸಲಾಗಿದೆ. ರೈತರಿಂದ ಪ್ರತಿ ಲೀಟರ್ಗೆ 39.50 ರೂಪಾಯಿಯಂತೆ ಹಾಲು ಖರೀದಿ ಮಾಡಲಾಗುತ್ತದೆ.

ಎರಡು ವರ್ಷಗಳ ಹಿಂದೆ, ಕೆಎಂಎಫ್ ಅಂದಾಜು 4,000 ರಿಂದ 5,000 ಲೀಟರ್ ಎಮ್ಮೆ ಹಾಲನ್ನು ಮಾರಾಟ ಮಾಡುತ್ತಿತ್ತು. ಆದರೆ ಪೂರೈಕೆ ಕೊರತೆಯಿಂದಾಗಿ ಮಾರಾಟವನ್ನು ನಿಲ್ಲಿಸಬೇಕಾಯಿತು. ಆದರೆ, ಎಮ್ಮೆ ಹಾಲಿಗೆ ಬೇಡಿಕೆ ಮಾತ್ರ ಹೆಚ್ಚಾಗಿತ್ತು. ಇದೇ ಕಾರಣಕ್ಕೆ ಮೂರು ತಿಂಗಳ ಹಿಂದೆ ಮತ್ತೆ ಎಮ್ಮೆ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು.
ಕರ್ನಾಟಕ ಹಾಲು ಒಕ್ಕೂಟವು ಪ್ರತಿನಿತ್ಯ ರಾಜ್ಯದಲ್ಲಿ 46 ಲಕ್ಷ ಲೀಟರ್ ಹಾಲು ಮತ್ತು 10 ಲಕ್ಷ ಲೀಟರ್ ಹಾಲು ಮಾರಾಟ ಮಾಡುತ್ತಿದೆ. ಎಲ್ಲಾ ಒಕ್ಕೂಟಗಳು ಎಮ್ಮೆ ಹಾಲು ಪೂರೈಕೆಗೆ ಸಾಕಷ್ಟು ಸಂಖ್ಯೆಯ ಎಮ್ಮೆಗಳನ್ನು ಹೊಂದಿಲ್ಲದ ಕಾರಣ ವಿಜಯಪುರ ಮತ್ತು ಬೆಳಗಾವಿಯ ರೈತರಿಂದ ಹಾಲು ಪಡೆಯಲಾಗುತ್ತಿತ್ತು. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಎಮ್ಮೆಗಳ ಸಂಖ್ಯೆ ಇರುವುದರಿಂದ ಆ ಪ್ರದೇಶದಿಂದ ಖರೀದಿ ನಡೆಸಲಾಗುತ್ತಿತ್ತು. ಎಮ್ಮೆ ಹಾಲು ಮಾರಾಟ ಸ್ಥಗಿತದಿಂದಾಗಿ ಆ ಭಾಗದ ರೈತರಿಗೆ ಹೆಚ್ಚು ನಷ್ಟವಾಗಲಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications