ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ, ಈಗ ಹಾಲಿನ ದರ ಏರಿಕೆ ಬಿಸಿ
ಬೆಂಗಳೂರು, ಏಪ್ರಿಲ್ 27: ಪೆಟ್ರೋಲ್, ಡೀಸೆಲ್, ತರಕಾರಿ ಬೆಲೆಯಿಂದ ಕಂಗೆಟ್ಟಿರುವ ಜನರಿಗೆ ಹಾಲಿನ ದರ ಏರಿಕೆಯ ಬಿಸಿಯೂ ತಟ್ಟುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಮಾರಾಟ ಮಹಾಮಂಡಳವು ಹಾಲಿನ ದರ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಅವರಿಗೆ ಮನವಿ ಮಾಡಿದೆ. ಪ್ರತಿ ಲೀಟರ್ಗೆ 3 ರೂಪಾಯಿ ಹೆಚ್ಚಿಸಬೇಕೆಂದು ಕೆಎಂಎಫ್ನ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಸಲ್ಲಿಸಿದ್ದಾರೆ. ಸದ್ಯ ಮೇ 1 ರಿಂದಲೇ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತ ಇದೆ ಎನ್ನಲಾಗುತ್ತಿದೆ.
ಈಗಾಗಲೇ ಅಮೂಲ್ ಸೇರಿದಂತೆ ವಿವಿಧ ಖಾಸಗಿ ಸಂಸ್ಥೆಗಳು ಹಾಲಿನ ದರವನ್ನ ಹೆಚ್ಚಿಸಿವೆ. ನಂದಿನಿ ಹಾಲಿನ ದರಕ್ಕೆ ಹೋಲಿಸಿದರೆ ಇತರ ಸಂಸ್ಥೆಗಳ ಹಾಲಿನ ದರವು ಲೀಟರ್ಗೆ 8 ರಿಂದ 10 ರೂಪಾಯಿ ಹೆಚ್ಚಿದೆ. ಹೀಗಾಗಿ ನಂದಿನಿ ಹಾಲಿನ ದರವನ್ನು ಕೂಡ ಲೀಟರ್ಗೆ 3 ರೂಪಾಯಿ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಲಾಗಿದೆ.
ಈ ಹಿಂದೆ ಕರ್ನಾಟಕದ 14 ಹಾಲು ಒಕ್ಕೂಟಗಳು ಪ್ರತಿ ಲೀಟರ್ಗೆ 5 ರೂಪಾಯಿ ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿತ್ತು. ಆದರೆ, ಒಂದೇ ಬಾರಿಗೆ ಇಷ್ಟೋಂದು ದರವನ್ನ ಹೆಚ್ಚಿಸಿದರೆ ಗ್ರಾಹಕರಿಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಈಗ 3 ರೂಪಾಯಿ ಹೆಚ್ಚಿಸಲು ಸಿಎಂ ಬೊಮ್ಮಾಯಿ ಬಳಿ ಬಾಲಚಂದ್ರ ಜಾರಕಿಹೊಳಿ ಕೇಳಿಕೊಂಡಿದ್ದಾರೆ.

ಹಾಲಿನ ದರ ಹೆಚ್ಚಿಸಬೇಕೆಂದು ಹಲವು ತಿಂಗಳುಗಳಿಂದ ಕೆಎಂಎಫ್ ಸರ್ಕಾರದ ಬಳಿ ಮನವಿ ಮಾಡುತ್ತಲೇ ಇತ್ತು. ಹಾಲಿನ ಸಂಸ್ಕರಣೆ, ಕಚ್ಚಾ ಸಾಮಾಗ್ರಿ, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಎಲ್ಲಾ ವೆಚ್ಚಗಳೂ ಶೇ 30 ರಷ್ಟು ಏರಿಕೆಯಾಗಿದೆ. ಹೀಗಾಗಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಕೆಎಂಎಫ್ ಬೇಡಿಕೆ ಇಟ್ಟಿದೆ. ಈ ಬಾರಿಯಾದರೂ ಸರ್ಕಾರ 3 ರೂಪಾಯಿ ದರ ಹೆಚ್ಚಿಸಿದರೆ. ಅದರಲ್ಲಿ 2 ರೂಪಾಯಿ ರೈತರಿಗೆ ಮತ್ತು 1 ರೂಪಾಯಿಯನ್ನು ಹಾಲು ಒಕ್ಕೂಟಗಳಿಗೆ ನೀಡಲಾಗುವುದು ಎಂದು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸದ್ಯ ಕೆಎಂಎಫ್ ಅಧ್ಯಕ್ಷರು ನೀಡಿರುವ ಮನವಿಯನ್ನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ವಿಚಾರದ ಬಗ್ಗೆ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟವರ ಜೊತೆ ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಹಲವು ತಿಂಗಳುಗಳಿಂದ ಕೇಳಿ ಬರುತ್ತಿರುವ ಈ ಬೆಲೆ ಏರಿಕೆ ಬೇಡಿಕೆಗೆ ಈ ಬಾರಿಯಾದರೂ ಸರ್ಕಾರ ಸಹಮತ ಸೂಚಿಸುವ ಎಲ್ಲಾ ಸಾಧ್ಯತೆಗಳಿರುವುದರಿಂದ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ. ಒಂದು ವೇಳೇ ಹೆಚ್ಚಾದರೆ, ಈಗಾಗಲೇ ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಜನರಿಗೆ ಮತ್ತೊಂದು ಹೊರೆ ಬೀಳಲಿದ್ದು, ಅಂಗಡಿಗಳಲ್ಲಿ ಒಂದು ಲೀಟರ್ ಹಾಲಿನ ದರ 25 ರಿಂದ 28 ರೂಪಾಯಿಗೆ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಹೋಟೆಲ್ಗಳಲ್ಲೂ ಸಹ ಟೀ, ಕಾಫಿ ದರವೂ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications