ಅಪಾರ್ಟ್ಮೆಂಟ್ಗಳಲ್ಲಿ ಸ್ಥಾಪನೆಯಾಗಲಿದೆ ನಂದಿನಿ ಬೂತ್
ಬೆಂಗಳೂರು, ಫೆಬ್ರವರಿ 10 : ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್) ತನ್ನ ಉದ್ಯಮವನ್ನು ವಿಸ್ತರಣೆ ಮಾಡಲು ಯೋಜನೆ ರೂಪಿಸಿದೆ. ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ನಂದಿನಿ ಹಾಲಿನ ಬೂತ್ಗಳನ್ನು ತೆರೆಯಲು ನಿರ್ಧರಿಸಿದೆ. ಪ್ರಾಯೋಗಿಕವಾಗಿ 100 ಬೂತ್ಗಳನ್ನು ತೆರೆಯಲಾಗುತ್ತದೆ.
ಕಳೆದವಾರ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಅಪಾರ್ಟ್ಮೆಂಟ್ ಸಂಘದವರೊಂದಿಗೆ ಸಭೆ ನಡೆಸಿ, ನಂತರ ನಂದಿನಿ ಬೂತ್ಗಳನ್ನು ಸ್ಥಾಪನೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. [ಹಾಲಿನ ದರ 4 ರೂ ಏರಿಕೆ, ಎಲ್ಲಿ ದರ ಎಷ್ಟಿದೆ?]

ಒಂದು ನಂದಿನಿ ಬೂತ್ ಸ್ಥಾಪನೆಗೆ ಸುಮಾರು 80 ಸಾವಿರ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಅಪಾರ್ಟ್ಮೆಂಟ್ನಲ್ಲಿ ತರಕಾರಿ ಮಾರುಕಟ್ಟೆ, ಅಂಗಡಿಗಳ ಸ್ಥಾಪನೆಗೆ ಜಾಗವನ್ನು ಮೀಸಲಾಗಿಡಲಾಗಿರುತ್ತದೆ, ಅಲ್ಲಿಯೇ ಬೂತ್ ಸ್ಥಾಪಿಸಲು ಕೆಎಂಎಫ್ ನಿರ್ಧರಿಸಿದೆ. [ಕೆಎಂಎಫ್ ನಂತೆ ಬ್ರಾಂಡೆಡ್ ಮಟನ್ ಸ್ಟಾಲ್ ಸ್ಥಾಪನೆ]
ಅಪಾರ್ಟ್ಮೆಂಟ್ನಲ್ಲಿರುವ ಸಹಕಾರಿ ಸಂಘದವರೇ ಒಬ್ಬರನ್ನು ನೇಮಿಸಿ ಈ ಬೂತ್ಗಳನ್ನು ಮುನ್ನಡೆಸಬೇಕಾಗುತ್ತದೆ. ಬೂತ್ಗೆ ಅಗತ್ಯವಿರುವ ಕೂಲರ್ಗಳನ್ನು ಖರೀದಿಸಲು ಕೆಎಂಎಫ್ ಸಬ್ಸಿಡಿ ನೀಡಲಿದೆ. ಸದ್ಯ, ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ 100 ಬೂತ್ಗಳನ್ನು ಸ್ಥಾಪಿಸಲು ಕೆಎಂಎಫ್ ಚಿಂತನೆ ನಡೆಸಿದೆ.
ನಂದಿನಿ ಬೂತ್ಗಳಲ್ಲಿ ಕೆಎಂಎಫ್ನ 50ಕ್ಕೂ ಹೆಚ್ಚು ಉತ್ಪನ್ನಗಳು ಲಭ್ಯವಿದೆ. ರಾಜ್ಯಾದ್ಯಂತ ಕೆಎಂಎಫ್ 800ಕ್ಕೂ ಅಧಿಕ ಬೂತ್ಗಳನ್ನು ಹೊಂದಿದ್ದು, ಬೆಂಗಳೂರು ನಗರದಲ್ಲಿಯೇ 400ಕ್ಕೂ ಅಧಿಕ ಬೂತ್ಗಳಿವೆ. ಎಲ್ಲವೂ ಅಂದುಕೊಂಡಂತೆ ಆದರೆ, ಕೆಲವೇ ದಿನಗಳಲ್ಲಿ ಅಪಾರ್ಟ್ಮೆಂಟ್ನಲ್ಲಿಯೇ ನಂದಿನಿ ಹಾಲು ಸಿಗಲಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications