Nandini Milk: ಹಾಲು ಮಾರಾಟದಲ್ಲಿ ಹೊಸ ದಾಖಲೆ ಬರೆದ ಕೆಎಂಎಫ್: ಒಂದೇ ದಿನ 51 ಲಕ್ಷ ಲೀಟರ್ ಮಾರಾಟ
ತಾಪಮಾನ ಹೆಚ್ಚಳದಿಂದ ಬಸವಳಿದ ಜನ ಹಾಲು, ಮೊಸರು, ಐಸ್ ಕ್ರೀಮ್ ಬಳಕೆಯನ್ನು ಹೆಚ್ಚಿಸಿದ್ದಾರೆ. ತಾಪಮಾನ ಹೆಚ್ಚಳದಿಂದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹಾಲು, ಮೊಸರು ಮಾರಾಟದಲ್ಲಿ ಹೊಸ ದಾಖಲೆ ಬರೆದಿದೆ.
ಕೆಎಂಎಫ್ ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮತ್ತು 16.5 ಲಕ್ಷ ಲೀಟರ್ ಮೊಸರನ್ನು ಮಾರಾಟ ಮಾಡುವ ಮೂಲಕ ತನ್ನದೇ ದಾಖಲೆಯನ್ನು ಮುರಿದಿದೆ. ಅಲ್ಲದೆ ಐಸ್ ಕ್ರೀಮ್ ಮಾರಾಟದಲ್ಲಿ ಕೂಡ ಭಾರಿ ಏರಿಕೆ ಕಂಡಿದೆ. ಇದು ಕೆಎಂಎಫ್ನ ಐಸ್ಕ್ರೀಮ್ ಮಾರುಕಟ್ಟೆಯಲ್ಲಿ ಅಧಿಕವಾಗಿದೆ.

ಏಪ್ರಿಲ್ ಸಮಯದಲ್ಲಿ ಏಪ್ರಿಲ್ 9 ಮತ್ತು 15 ರ ನಡುವೆ - ಯುಗಾದಿ, ರಾಮ ನವಮಿ ಮತ್ತು ಈದ್-ಉಲ್-ಫಿತರ್ನಂತಹ ಹಬ್ಬಗಳು ಒಂದರ ನಂತರ ಒಂದರಂತೆ ಬಂದಿದ್ದು, ಹಾಲು ಮೊಸರಿನ ಮಾರಾಟ ಹೆಚ್ಚಳಕ್ಕೆ ಕಾರಣಗಳಲ್ಲಿ ಒಂದಾಗಿದೆ ಎಂದು ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ಹೇಳಿರುವುದಾಗಿ ಟಿಎನ್ಇಐ ವರದಿ ಮಾಡಿದೆ.
"ಈ ಬಾರಿ, ನಾವು ಮೊಸರು ತಯಾರಿಕೆಯಲ್ಲಿ ಸುಧಾರಣೆಗಳನ್ನು ಮಾಡಿದ್ದೇವೆ ಮತ್ತು ಮೊಸರು ಮಾರಾಟದಲ್ಲಿ ಭಾರಿ ಹೆಚ್ಚಳವಾಗುತ್ತಿರುವುದನ್ನು ನೋಡುತ್ತಿದ್ದೇವೆ. ನಾವು ದಿನಕ್ಕೆ ಎರಡು ಬಾರಿ ಉತ್ಪನ್ನಗಳನ್ನು ಪೂರೈಸುತ್ತೇವೆ, ಆದರೆ ಕೆಲವು ಪ್ರದೇಶಗಳಲ್ಲಿ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಮೂರು ಬಾರಿ ಉತ್ಪನ್ನಗಳನ್ನು ಪೂರೈಸಲಾಗಿದೆ" ಎಂದು ಹೇಳಿದ್ದಾರೆ.
ಹಲವು ಸುಧಾರಣಾ ಕ್ರಮಗಳು
ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಹಲವಾರು ಪೂರೈಕೆ-ಸರಪಳಿ ಸುಧಾರಣೆಗಳನ್ನು ಮಾಡಲಾಗಿದೆ. ರಾಜ್ಯದಲ್ಲಿ ಕೋಲ್ಡ್ ಸ್ಟೋರೇಜ್ಗಳ ಕಾರ್ಯನಿರ್ವಹಣೆ ಮತ್ತು ನಿರ್ವಹಣೆಯನ್ನು ಹೆಚ್ಚಿಸಿದೆ ಎಂದು ಅವರು ಜಗದೀಶ್ ಹೇಳಿದ್ದಾರೆ.
ಈ ಮೊದಲು ನಂದಿನಿ ಹಾಲು ಮಾರಾಟ 44 ಲಕ್ಷ ಲೀಟರ್ ದಾಟಿರಲಿಲ್ಲ. ಈ ವರ್ಷ ಒಂದೇ ದಿನದಲ್ಲಿ 48 ಲಕ್ಷ ಲೀಟರ್ ಮಾರಾಟವಾಗಿತ್ತು. ಮೊಸರು ಮತ್ತು ಮಜ್ಜಿಗೆ ಕೂಡ ಇದೇ ರೀತಿ ಆಗಿತ್ತು. ದಿನಕ್ಕೆ 8 ರಿಂದ 8.5 ಲಕ್ಷ ಲೀಟರ್ಗಳ ನಡುವೆ ಮಾರಾಟವಾಗುತ್ತಿತ್ತು. ಈ ಬಾರಿ ಅದು ದ್ವಿಗುಣವಾಗಿದೆ.
ಈ ತಿಂಗಳು, ನಾವು ಮೊಸರು ಮಾರಾಟದಲ್ಲಿ ಎರಡು ಮೈಲಿಗಲ್ಲುಗಳನ್ನು ಮುಟ್ಟಿದ್ದೇವೆ. ಮೊದಲ ವಾರದಲ್ಲಿ, ನಾವು 11.5 ಲಕ್ಷ ಲೀಟರ್ ಮಾರಾಟವಾಗಿದೆ. ಐದು ದಿನಗಳಲ್ಲಿ, ಇದು 16.5 ಲಕ್ಷ ಲೀಟರ್ಗೆ ಏರಿಕೆಯಾಗಿದೆ, ನಂದಿನಿಯನ್ನು ಆದ್ಯತೆಯ ಬ್ರಾಂಡ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಐಸ್ಕ್ರೀಂ ಮಾರಾಟ ಕೂಡ ಹೆಚ್ಚಳ
ನಂದಿನಿ ಐಸ್ಕ್ರೀಂ ಮಾರಾಟದಲ್ಲಿ ಕೂಡ ಭಾರಿ ಹೆಚ್ಚಳವಾಗಿದೆ. ಈ ವರ್ಷ ಐಸ್ಕ್ರೀಮ್ ಮಾರಾಟದಲ್ಲಿ 40% ಏರಿಕೆ ಕಂಡಿದೆ. ಫೆಬ್ರವರಿಯಲ್ಲೇ ರಾಜ್ಯದಲ್ಲಿ ತಾಪಮಾನ ಹೆಚ್ಚಿದ್ದ ಕಾರಣ, ಹೆಚ್ಚುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಪೂರೈಕೆಗೆ ನಾವು ಸಿದ್ಧರಾಗಿದ್ದೇವೆ ಎಂದರು.
ಮಾರಾಟ ಹೆಚ್ಚಳದೊಂದಿಗೆ ಈ ವರ್ಷದ ಈ ತ್ರೈಮಾಸಿಕದಲ್ಲಿ ಕೆಎಂಎಫ್ ಉತ್ತಮ ಆದಾಯದ ನಿರೀಕ್ಷೆಯಲ್ಲಿದೆ. ಶೀಘ್ರದಲ್ಲೇ ಬೇಸಿಗೆಯ ವಿಶೇಷ ಪಾನೀಯಗಳನ್ನು ಮಾರುಕಟ್ಟೆಗೆ ತರಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications