ಇವರು ಸಿವಿ ರಾಮನ್ ನಗರದ 'ಸಿಂಗಂ ಭಾಸ್ಕರ್'
ಗರಿಗರಿಯಾಗಿ ಇಸ್ತ್ರೀ ಮಾಡಿದ ಖಾಕಿ, ಕೈಯಲ್ಲಿ ವಾಕಿಟಾಕಿ, ಸಿಂಗಂ ಮೀಸೆ, ಸದಾ ನಗು ಮುಖ. ಸಾರ್ ಈ ಅಡ್ರೆಸ್ ಹೇಳ್ತಿರಾ? ಎಂದು ಕೇಳಿದರೆ ಸೌಜನ್ಯದಿಂದ ದಾರಿ ತೋರಿಸುವ ಶಾಂತ ಗುಣ. ಇವರು ಬೆಂಗಳೂರಿನ ಸಿವಿ ರಾಮನ್ ನಗರದ ಸಂಚಾರಿ ಪೊಲೀಸ್ ಭಾಸ್ಕರ್, ಏರಿಯಾದ ಜನರ ಪಾಲಿನ ನೆಚ್ಚಿನ 'ಸಿಂಗಂ ಭಾಸ್ಕರ್'.
ಪೊಲೀಸರ ಬಳಿ ಮಾತನಾಡುವುದೆಂದರೆ ಜನರು ಹೆದರುತ್ತಾರೆ. ಕಾರಣ ಅವರ ಸಿಡುಕು ಸ್ವಭಾವ. ಆದರೆ, ಸಿವಿ ರಾಮನ್ ನಗರದ ಪುಟ್ಟ ಮಕ್ಕಳು ಭಾಸ್ಕರ್ ಅವರನ್ನು ಯಾವುದೇ ಭಯವಿಲ್ಲದೇ ಮಾತನಾಡಿಸುತ್ತಾರೆ. ಖಡಕ್ ಸಿಂಗಂ ಮೀಸೆ ಹೊಂದಿರುವ ಭಾಸ್ಕರ್ ಎಂದಿಗೂ ಜನರ ಮೇಲೆ ಸಿಡುಕುವುದಿಲ್ಲ. ಅವರಿಗೆ ಕೈಲಾದ ಸಹಾಯ ಮಾಡುತ್ತಾರೆ. ಆದ್ದರಿಂದ ಅವರೆಂದರೆ ಜನರಿಗೆ ಇಷ್ಟ. [ಈ ಟ್ರಾಫಿಕ್ ಪೊಲೀಸ್ ಅಂದ್ರೆ ಜನರಿಗೆ ಅಚ್ಚುಮೆಚ್ಚು]

ಸಿವಿ ರಾಮನ್ ನಗರದ ಜನರ ಪಾಲಿಗೆ ಭಾಸ್ಕರ್ 'ಸಿಂಗಂ ಭಾಸ್ಕರ್'. ತಮ್ಮ ಖಡಕ್ ಸಿಂಗಂ ಮೀಸೆಯಿಂದ ಅವರು ಪ್ರಸಿದ್ಧಿ ಪಡೆದಿಲ್ಲ. ಜನರ ಜೊತೆ ಬೆರೆತು, ಶಾಂತ ರೀತಿಯಿಂದ ವರ್ತಿಸಿ ಅವರಿಗೆ ತಮ್ಮ ಕೈಲಾದ ಸಹಾಯ ಮಾಡುವುದರಿಂದ ಅವರು ಬಡಾವಣೆಯಲ್ಲಿ ತುಂಬಾ ಪ್ರಸಿದ್ಧಿ ಪಡೆದಿದ್ದಾರೆ. [ಸರಗಳ್ಳನನ್ನು ಹಿಡಿದ ಸಂಚಾರಿ ಪೊಲೀಸ್ ಪೇದೆ]
ಸಿಂಗಂ ಭಾಸ್ಕರ್ ಕರ್ತವ್ಯ ಮಾಡುತ್ತಿದ್ದಾರೆ ಎಂದರೆ ಜನರು ತಮ್ಮ ಪಾಡಿಗೆ ತಾವು ಶಿಸ್ತಿನಿಂದ ರಸ್ತೆಯಲ್ಲಿ ಸಾಗುತ್ತಾರೆ. ಸಿಗ್ನಲ್ ಜಂಪ್ ಮಾಡುವುದು, ಅನಗತ್ಯವಾಗಿ ಹಾರನ್ ಹೊಡೆಯುವುದು ಮುಂತಾದವುಗಳನ್ನು ಮಾಡದೆ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುತ್ತಾರೆ. [ಬೆಂಗಳೂರಿನ ಸಿಂಗಂ ಪೊಲೀಸ್ ಕಥೆ!]
ಅಂದಹಾಗೆ 25 ವರ್ಷದ ಸಿಂಗಂ ಭಾಸ್ಕರ್ ಮೂಲತಃ ಮೈಸೂರಿನವರು. ಐದು ವರ್ಷಗಳ ಹಿಂದೆ ಅವರು ಐದು ವರ್ಷಗಳ ಹಿಂದೆ ಬೆಂಗಳೂರು ಸಂಚಾರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಉತ್ತಮ ಕಾರ್ಯ ನಿರ್ವಹಣೆಗಾಗಿ ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರಿಂದ ಇತ್ತೀಚೆಗೆ ಪ್ರಶಸ್ತಿಯನ್ನು ಪಡೆದಿದ್ದಾರೆ.
'ನಾನು ನನ್ನ ಕೆಲಸವನ್ನು ಶ್ರದ್ಧೆಯಿಂದ, ಇಷ್ಟಪಟ್ಟು ಮಾಡುತ್ತೇನೆ' ಎಂಬುದು ಸಿಂಗಂ ಭಾಸ್ಕರ್ ಅವರ ಒಂದು ಸಿಂಪಲ್ ಹೇಳಿಕೆ. ಕೆಲಸ ಮಾಡುವ ಸಂದರ್ಭದಲ್ಲಿ ನಾನು ಹಲವಾರು ಜನರೊಂದಿಗೆ ಮಾತನಾಡುತ್ತೇನೆ. ಅವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ಭಾಸ್ಕರ್ ಹೇಳುತ್ತಾರೆ. ಭಾಸ್ಕರ್ ಕಾರ್ಯವೈಖರಿ ಮೆಚ್ಚಿ ಅವರಿಗೆ ಪ್ರಶಸ್ತಿ ನೀಡಿದ ನಗರ ಪೊಲೀಸ್ ಆಯುಕ್ತರಿಗೆ ನಮ್ಮ ಅಭಿನಂದನೆಗಳು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications