ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸುದೀರ್ಘ ವಿದ್ಯುತ್ ಕಡಿತ, ಎಲ್ಲೆಲ್ಲೆ ಕರೆಂಟ್‌ ಇರಲ್ಲ ತಿಳಿಯಿರಿ

ಬೆಂಗಳೂರು, ಅಕ್ಟೋಬರ್‌ 24: ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಭಾರಿ ಕುಸಿತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಶುಕ್ರವಾರದವರೆಗೆ ವಿದ್ಯುತ್ ಕಡಿತವಾಗಲಿದೆ ಎಂದು ವರದಿಯಾಗಿದೆ.

ವಿದ್ಯುತ್ ಸರಬರಾಜು ಕಂಪನಿಗಳಾದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಗರದಲ್ಲಿ ಹಲವಾರು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ಶುಕ್ರವಾರದವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ.

Know that there is a long power cut in many areas of Bengaluru, there is no electricity everywhere

ನಗರದಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ. ನಿರ್ವಹಣಾ ಕಾರ್ಯಗಳಲ್ಲಿ ಓವರ್‌ಹೆಡ್‌ನಿಂದ ಭೂಗತಕ್ಕೆ ಕೇಬಲ್‌ಗಳನ್ನು ಬದಲಾಯಿಸುವುದು, ಡಿಟಿಸಿ ರಚನೆ ನಿರ್ವಹಣೆ, ಲೈನ್ ನಿರ್ವಹಣೆ, ಜಂಪ್‌ಗಳನ್ನು ಬಿಗಿಗೊಳಿಸುವುದು, ಹದಗೆಟ್ಟ ಕಂಬಗಳ ಬದಲಾವಣೆ, ಭೂಗತ ಕೇಬಲ್ ಹಾನಿ ಸರಿಪಡಿಸುವಿಕೆ, ಮರ ಟ್ರಿಮ್ಮಿಂಗ್, ಜಲಸಿರಿ 24×7 ನೀರು ಸರಬರಾಜು ಕೆಲಸ, ಓರೆಯಾದ ಕಂಬಗಳನ್ನು ನೇರಗೊಳಿಸುವುದು ಇವೆ ಮೊದಲಾದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ವಿದ್ಯುತ್ ಕಡಿತವಾಗುವ ಪ್ರದೇಶಗಳು:

1. ಅಕ್ಟೋಬರ್ 27ರವರೆಗೆ: ಕುಂಟೇಗೌಡನಹಳ್ಳಿ, ಯಲದಬಾಗಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ತಿಪ್ಪನಹಳ್ಳಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ದಾಸರಹಳ್ಳಿ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಪ್ಪರಹಳ್ಳಿ, ವೆಂಕಟಾಪುರ, ವೆಂಕಟಾಪುರ, ಸಬಿರಾಯಪ್ಪರಹಳ್ಳಿ, ಸೀಯಾಳಪ್ಪರಹಳ್ಳಿ, ವೆಂಕಟಾಪುರ. ಹಳ್ಳಿ, ಹುಂಜನಾಳ್, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ , ಕಾಳಜ್ಜಿರೊಪ್ಪ, ಮತ್ತು ಬ್ಯಾಡರಹಳ್ಳಿ.

2. ಅಕ್ಟೋಬರ್ 25-27: ಚಂದ್ರಾ ಲೇಔಟ್ 80 ಅಡಿ ರಸ್ತೆ, 1 ಮತ್ತು 2 ನೇ ಹಂತ, ಪಾಲಿಕೆ ಸೌಧ, ಜ್ಯೋತಿ ನಗರ, ಆದಾಯ ತೆರಿಗೆ ಲೇಔಟ್ ಮತ್ತು ಬಸವೇಶ್ವರ ಲೇಔಟ್.

3. ಅಕ್ಟೋಬರ್ 26: ಎಸ್‌ಎಸ್‌ ಹೈಟೆಕ್ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಕರ್ನಾಟಕದ ವಿದ್ಯುತ್ ಬಿಕ್ಕಟ್ಟು:

ಕರ್ನಾಟಕ ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿನ ವಿದ್ಯುತ್ ಬಿಕ್ಕಟ್ಟಿಗೆ ಕಡಿಮೆ ವಿದ್ಯುತ್ ಉತ್ಪಾದನೆ ಮತ್ತು ಹೆಚ್ಚಿನ ಬೇಡಿಕೆ ಕಾರಣವಾಗಿದೆ. ಈ ವಿದ್ಯುತ್‌ ಬಿಕ್ಕಟ್ಟು ತಾತ್ಕಾಲಿಕವಾಗಿದ್ದು, ಸರ್ಕಾರ ಶೀಘ್ರದಲ್ಲೇ ಅದನ್ನು ಪರಿಹರಿಸಲಿದೆ ಎಂದು ಅವರು ಹೇಳಿದ್ದಾರೆ.

2022ರ ಆಗಸ್ಟ್‌ನಲ್ಲಿ ಕೇವಲ 11,268 ಮೆಗಾವ್ಯಾಟ್‌ಗೆ ಹೋಲಿಸಿದರೆ ಆಗಸ್ಟ್ 25 ರಂದು ರಾಜ್ಯವು 16,950 ಮೆಗಾವ್ಯಾಟ್‌ನ ಗರಿಷ್ಠ ಬೇಡಿಕೆಯನ್ನು ಕಂಡಿದೆ. ಈ ವರ್ಷ ಕಡಿಮೆ ಮಳೆಯಿಂದಾಗಿ ಹೆಚ್ಚಿನ ವಿದ್ಯುತ್ ಬೇಡಿಕೆಯಿದೆ. ಮಳೆಯ ಕೊರತೆಯು ಕೃಷಿ ನೀರಾವರಿ ಪಂಪ್‌ಸೆಟ್ ಲೋಡ್‌ಗಳನ್ನು ಹೆಚ್ಚಿಸಿದ್ದು ಒಟ್ಟಾರೆ ವಿದ್ಯುತ್ ಬೇಡಿಕೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ವಿದ್ಯುತ್‌ ಸಮಸ್ಯೆಯನ್ನು ಪರಿಹರಿಸಲು, ರಾಜ್ಯ ಸರ್ಕಾರವು ಇತರ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ನಿರ್ಧರಿಸಿದೆ. ಉತ್ತರ ಪ್ರದೇಶ ಮತ್ತು ಪಂಜಾಬ್‌ನೊಂದಿಗೆ ವಿನಿಮಯ ವ್ಯವಸ್ಥೆಗಳನ್ನು ಮಾಡಲು ನಿರ್ಧರಿಸಿದೆ. ಈ ವರ್ಷ ಮಳೆಯ ಕೊರತೆಯು ವಿದ್ಯುತ್ ಬೇಡಿಕೆಯನ್ನು ಪೂರೈಸಲು ಉಷ್ಣ ಮೂಲಗಳ ಮೇಲೆ ಹೆಚ್ಚಿನ ಅವಲಂಬನೆಗೆ ಕಾರಣವಾಗಿದೆ. ಇದಲ್ಲದೆ, ನವೀಕರಿಸಬಹುದಾದ ಇಂಧನ ಉತ್ಪಾದನೆ (ಗಾಳಿ ಮತ್ತು ಸೌರ) ಸಹ ಅಕ್ಟೋಬರ್‌ನಲ್ಲಿ ಗಣನೀಯ ಕುಸಿತವನ್ನು ಕಂಡಿದೆ ಎಂದು ಜಾರ್ಜ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+